ಛತ್ತೀಸಗಢ: ಭದ್ರತಾ ಪಡೆಯೊಂದಿಗಿನ ಎನ್‌ಕೌಂಟರ್‌ನಲ್ಲಿ ಓರ್ವ ನಕ್ಸಲ್ ಹತ, ಮುಂದುವರಿದ ಗುಂಡಿನ ಚಕಮಕಿ

ಈ ಪ್ರದೇಶದಲ್ಲಿ ನಕ್ಸಲರು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಅವರು ಹೇಳಿದರು.
Representative Image
ಸಾಂದರ್ಭಿಕ ಚಿತ್ರ
Updated on

ನಾರಾಯಣಪುರ (ಛತ್ತೀಸಗಢ): ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ನಕ್ಸಲ್ ಸಾವಿಗೀಡಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾರಾಷ್ಟ್ರದ ಪಕ್ಕದಲ್ಲಿರುವ ಅಭುಜ್‌ಮಾದ್ ಪ್ರದೇಶದ ಅರಣ್ಯದಲ್ಲಿ ಬೆಳಿಗ್ಗೆ ಭದ್ರತಾ ಪಡೆಗಳ ತಂಡ ಶೋಧ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಇಲ್ಲಿನ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ನಕ್ಸಲರು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಅವರು ಹೇಳಿದರು.

ನಕ್ಸಲನ ಮೃತದೇಹವನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದ್ದು, ನಿರಂತರ ಗುಂಡಿನ ಚಕಮಕಿ ಇನ್ನೂ ನಡೆಯುತ್ತಿದೆ ಎಂದು ಅವರು ಹೇಳಿದರು.

ಈ ವರ್ಷ ಇಲ್ಲಿಯವರೆಗೆ ಛತ್ತೀಸಗಢದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 248 ನಕ್ಸಲರು ಹತರಾಗಿದ್ದಾರೆ. ಅವರಲ್ಲಿ 219 ಜನರನ್ನು ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತರ್ ವಿಭಾಗದಲ್ಲಿ ಹತ್ಯೆ ಮಾಡಲಾಗಿದೆ. ರಾಯ್‌ಪುರ ವಿಭಾಗದ ಗರಿಯಾಬಂದ್ ಜಿಲ್ಲೆಯಲ್ಲಿ 27 ಜನರನ್ನು ಗುಂಡಿಕ್ಕಿ ಕೊಲ್ಲಲಾಗಿದೆ.

ದುರ್ಗ್ ವಿಭಾಗದ ಮೊಹ್ಲಾ-ಮನ್ಪುರ್-ಅಂಬಾಘರ್ ಚೌಕಿ ಜಿಲ್ಲೆಯಲ್ಲಿ ಇತರ ಇಬ್ಬರು ನಕ್ಸಲರು ಸಾವಿಗೀಡಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com