'ಅವರು ತಮ್ಮ ಕುಟುಂಬದ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಿದ್ದರು, ಆದರೆ ನಾವು ಎಲ್ಲರಿಗಾಗಿ ಕೆಲಸ ಮಾಡುತ್ತೇವೆ': ನಿತೀಶ್ ಕುಮಾರ್

ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯನ್ನು ಉದ್ಘಾಟಿಸಿದ ಸಂದರ್ಭದಲ್ಲಿ ಮಾತನಾಡಿ, ಲಾಲು ಪ್ರಸಾದ್ ಅವರ ಹೆಸರೇಳದೆಯೇ ಟೀಕಿಸಿದರು.
"He is concerned about his family... we work for Bihar": CM Nitish Kumar attacks Lalu Yadav
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್
Updated on

ಪಾಟ್ನಾ: ತಮ್ಮ ಬದ್ಧ ವೈರಿ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ಪರೋಕ್ಷವಾಗಿ ಟೀಕಿಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಅವರು ವಂಶಪಾರಂಪರ್ಯ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದಾರೆ ಮತ್ತು ಅವರ ಕುಟುಂಬದ ಬಗ್ಗೆ ಮಾತ್ರ 'ಕಾಳಜಿ ವಹಿಸುತ್ತಿದ್ದಾರೆ' ಎಂದು ಶುಕ್ರವಾರ ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯನ್ನು ಉದ್ಘಾಟಿಸಿದ ಸಂದರ್ಭದಲ್ಲಿ ಮಾತನಾಡಿ, ಲಾಲು ಪ್ರಸಾದ್ ಅವರ ಹೆಸರೇಳದೆಯೇ ಟೀಕಿಸಿದರು.

'ಎನ್‌ಡಿಎ ಸರ್ಕಾರವು ರಾಜ್ಯದ ಒಟ್ಟಾರೆ ಅಭಿವೃದ್ಧಿಗಾಗಿ ಮತ್ತು ಮಹಿಳೆಯರ ಸಬಲೀಕರಣಕ್ಕಾಗಿ ಅವಿರತವಾಗಿ ಶ್ರಮಿಸುತ್ತಿದೆ. 2005ಕ್ಕಿಂತ ಹಿಂದಿನ ಸರ್ಕಾರವು ರಾಜ್ಯದ ಮಹಿಳೆಯರಿಗಾಗಿ ಏನನ್ನೂ ಮಾಡಲಿಲ್ಲ. ಅವರು (ಲಾಲು ಪ್ರಸಾದ್) ಪದಚ್ಯುತಗೊಂಡಾಗ, ಅವರು ತಮ್ಮ ಪತ್ನಿಯನ್ನು (ರಾಬ್ರಿ ದೇವಿ) ಮುಖ್ಯಮಂತ್ರಿಯನ್ನಾಗಿ ಮಾಡಿದರು ಎಂಬುದು ಎಲ್ಲರಿಗೂ ತಿಳಿದಿದೆ. ಅವರಿಗೆ ಅವರ ಕುಟುಂಬದ ಬಗ್ಗೆ ಮಾತ್ರ ಕಾಳಜಿ ಇದೆ. ಆದರೆ, ನಾವು ಎಲ್ಲರಿಗಾಗಿ, ರಾಜ್ಯದ ಜನರಿಗಾಗಿ ಕೆಲಸ ಮಾಡುತ್ತೇವೆ' ಎಂದು ಹೇಳಿದರು.

1997 ರಲ್ಲಿ ಮೇವು ಹಗರಣದಲ್ಲಿ ಸಿಬಿಐ ಆರೋಪಪಟ್ಟಿ ಸಲ್ಲಿಸಿದ ನಂತರ ಲಾಲು ಪ್ರಸಾದ್ ಅವರು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯಬೇಕಾಯಿತು. ನಂತರ, ಮೇವು ಹಗರಣ ಪ್ರಕರಣದಲ್ಲಿ ಅವರನ್ನು ದೋಷಿ ಎಂದು ಘೋಷಿಸಲಾಯಿತು.

"He is concerned about his family... we work for Bihar": CM Nitish Kumar attacks Lalu Yadav
'RJD ಯಾವತ್ತೂ ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳಿ': ಬಿಹಾರ ಮಹಿಳೆಯರಿಗೆ ಪ್ರಧಾನಿ ಮೋದಿ ಕರೆ

'2005ರ ನವೆಂಬರ್‌ನಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ರಾಜ್ಯವು ಶಿಕ್ಷಣ, ಆರೋಗ್ಯ ಅಥವಾ ಯಾವುದೇ ಇತರ ವಲಯದಲ್ಲಿ ಅಗಾಧವಾದ ಬೆಳವಣಿಗೆಯನ್ನು ಕಂಡಿತು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮೇಲುಗೈ ಸಾಧಿಸಿದೆ. ಅದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ನಾವು ಮಹಿಳಾ ಸಬಲೀಕರಣಕ್ಕೆ ವಿಶೇಷ ಗಮನ ನೀಡಿದ್ದೇವೆ' ಎಂದು ಮುಖ್ಯಮಂತ್ರಿ ಹೇಳಿದರು.

ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯನ್ನು ಪ್ರಧಾನಿ ದೆಹಲಿಯಿಂದ ವರ್ಚುವಲ್ ಆಗಿ ಉದ್ಘಾಟಿಸಿದರು ಮತ್ತು 75 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ತಲಾ 10,000 ರೂ.ಗಳನ್ನು ವರ್ಗಾಯಿಸಿದರು.

ಬಿಹಾರದ ಎನ್‌ಡಿಎ ಸರ್ಕಾರದ ಉಪಕ್ರಮವಾದ 7,500 ಕೋಟಿ ರೂ.ಗಳ ಈ ಯೋಜನೆಯು ಸ್ವ-ಉದ್ಯೋಗ ಮತ್ತು ಜೀವನೋಪಾಯದ ಅವಕಾಶಗಳ ಮೂಲಕ ಮಹಿಳಾ ಸಬಲೀಕರಣವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.

ನಿತೀಶ್ ಕುಮಾರ್, ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಮತ್ತು ಹಲವಾರು ಕೇಂದ್ರ ಮತ್ತು ರಾಜ್ಯ ಸಚಿವರು ಪಾಟ್ನಾದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ರಾಜ್ಯದ ಹೆಚ್ಚಿನ ಸಂಖ್ಯೆಯ ಮಹಿಳೆಯರು ಸಹ ವರ್ಚುವಲ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಈ ಯೋಜನೆಯ ಉದ್ಘಾಟನೆ ಮಹತ್ವ ಪಡೆದುಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com