ಎನ್‌ಕೌಂಟರ್‌ನಲ್ಲಿ ಮೃತಪಟ್ಟ ನಕ್ಸಲ್ ಕಮಾಂಡರ್ ಕಟ್ಟಾ ರಾಮಚಂದ್ರ ರೆಡ್ಡಿ ಕಳೇಬರವನ್ನು ಸಂರಕ್ಷಿಸಿ: ಸುಪ್ರೀಂ ಕೋರ್ಟ್ ನಿರ್ದೇಶನ

ಅರ್ಜಿದಾರರಾದ ರಾಜ ಚಂದ್ರ ಪರ ಹಾಜರಿದ್ದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್, ತನ್ನ ತಂದೆಯನ್ನು ನಕಲಿ ಎನ್‌ಕೌಂಟರ್‌ನಲ್ಲಿ ಚಿತ್ರಹಿಂಸೆ ನೀಡಿ ಕೊಲ್ಲಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.
supreme Court
ಸುಪ್ರೀಂಕೋರ್ಟ್
Updated on

ನವದೆಹಲಿ: ನಾರಾಯಣಪುರ ಜಿಲ್ಲೆಯಲ್ಲಿ ನಡೆದ ನಕಲಿ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ ಮಾವೋವಾದಿಗಳ ಉನ್ನತ ಕಮಾಂಡರ್ ಕಟ್ಟಾ ರಾಮಚಂದ್ರ ರೆಡ್ಡಿ ದೇಹವನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಛತ್ತೀಸ್‌ಗಢ ಪೊಲೀಸರಿಗೆ ನಿರ್ದೇಶನ ನೀಡಿದೆ.

ನಕಲಿ ಎನ್‌ಕೌಂಟರ್ ಮತ್ತು ಚಿತ್ರಹಿಂಸೆ ಆರೋಪದ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸುವವರೆಗೆ ಶವವನ್ನು ಹೂಳಬಾರದು ಅಥವಾ ದಹನ ಮಾಡಬಾರದು ಎಂದು ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಎಜಿ ಮಸಿಹ್ ಅವರ ಪೀಠ ಹೇಳಿದೆ. ದುರ್ಗಾ ಪೂಜೆ ರಜೆಯ ನಂತರ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದ್ದರಿಂದ ಕೋರ್ಟ್ ಈ ನಿರ್ದೇಶನ ನೀಡಿತು.

ಅರ್ಜಿದಾರರಾದ ರಾಜ ಚಂದ್ರ ಪರ ಹಾಜರಿದ್ದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್, ತನ್ನ ತಂದೆಯನ್ನು ನಕಲಿ ಎನ್‌ಕೌಂಟರ್‌ನಲ್ಲಿ ಚಿತ್ರಹಿಂಸೆ ನೀಡಿ ಕೊಲ್ಲಲಾಗಿದೆ ಎಂದು ಆರೋಪಿಸಿದ್ದಾರೆ, ಪೊಲೀಸರು ಶವವನ್ನು ವಿಲೇವಾರಿ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ವಾದಿಸಿದರು.

ರಾಜ್ಯ ಪೊಲೀಸರ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಇಬ್ಬರು ವ್ಯಕ್ತಿಗಳು ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದಾರೆ. ಅದೇ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಒಬ್ಬ ಮಾವೋವಾದಿಯ ಶವವನ್ನು ಅವರ ಕುಟುಂಬಕ್ಕೆ ನೀಡಿ ಅರ್ಜಿದಾರರ ತಂದೆಯ ಶವವನ್ನು ಆಸ್ಪತ್ರೆಯಲ್ಲಿದ್ದಾಗ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ಅವರು ಪೀಠಕ್ಕೆ ತಿಳಿಸಿದರು.

supreme Court
ಜಾರ್ಖಂಡ್‌: ತಲೆಗೆ 1 ಕೋಟಿ ರೂ ಬಹುಮಾನ ಹೊಂದಿದ್ದ ನಕ್ಸಲ್ ನಾಯಕ ಸೇರಿ ಮೂವರ ಹತ್ಯೆ!

ಮರಣೋತ್ತರ ಪರೀಕ್ಷೆಯನ್ನು ವೀಡಿಯೊ ರೆಕಾರ್ಡಿಂಗ್ ಅಡಿಯಲ್ಲಿ ಮಾಡಲಾಗಿದೆ. ಇದರಲ್ಲಿ ಪೊಲೀಸರ ಮೇಲೆ ಯಾವುದೇ ದುರುದ್ದೇಶಪೂರಿತ ಆರೋಪ ಹೊರಿಸಲಾಗುವುದಿಲ್ಲ ಎಂದು ಮೆಹ್ತಾ ಹೇಳಿದರು.

ಛತ್ತೀಸ್‌ಗಢದ ಅಧಿಕಾರಿಗಳನ್ನು ಒಳಗೊಂಡಿರದ ಸ್ವತಂತ್ರ ಸಂಸ್ಥೆಯಿಂದ ನಡೆಸಲಾದ ನಕಲಿ ಎನ್‌ಕೌಂಟರ್‌ನ ತನಿಖೆ ಹಾಗೂ ಹೊಸ ಮರಣೋತ್ತರ ಪರೀಕ್ಷೆ ನಡೆದಿದೆ ಎಂದು ಎಂದು ಪೀಠ ಗಮನಿಸಿತು.

ಅರ್ಜಿದಾರರು ಹೈಕೋರ್ಟ್ ಸಂಪರ್ಕಿಸಿದ್ದಾರೆ ಆದರೆ ಹೈಕೋರ್ಟ್ ವಿರಾಮ ತೆಗೆದುಕೊಳ್ಳಲಿರುವುದರಿಂದ ಈ ವಿಷಯವನ್ನು ತುರ್ತಾಗಿ ಪಟ್ಟಿ ಮಾಡಲು ಸಾಧ್ಯವಿಲ್ಲ ಮತ್ತು ಆದ್ದರಿಂದ ಅವರು ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿದ್ದಾರೆ ಎಂದು ಅದು ಗಮನಿಸಿತು. ನ್ಯಾಯಪೀಠವು ನಿರ್ದೇಶನಗಳೊಂದಿಗೆ ಅರ್ಜಿಯನ್ನು ವಿಲೇವಾರಿ ಮಾಡಿತು.

ಹೈದರಾಬಾದ್‌ನ NALSAR ಕಾನೂನು ವಿಶ್ವವಿದ್ಯಾಲಯದಲ್ಲಿ ಸಂಶೋಧಕರಾಗಿರುವ ಅರ್ಜಿದಾರ ರಾಜಾ ಚಂದ್ರ, ತಮ್ಮ ತಂದೆಯ ಶವವನ್ನು ಸರ್ಕಾರಿ ಶವಾಗಾರದಲ್ಲಿ ಸಂರಕ್ಷಿಸಲು, ಮರಣೋತ್ತರ ಪರೀಕ್ಷೆ ನಡೆಸಲು ಮತ್ತು ಛತ್ತೀಸ್‌ಗಢ ರಾಜ್ಯದ ಹೊರಗಿನ ಅಧಿಕಾರಿಗಳ ಮೂಲಕ ತನ್ನ ತಂದೆಯ ಸಾವು/ಕೊಲೆಯನ್ನು ತನಿಖೆ ಮಾಡುವಂತೆ ಸಿಬಿಐಗೆ ನಿರ್ದೇಶಿಸಲು ಛತ್ತೀಸ್‌ಗಢ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com