Karur Stampede: ವಿಜಯ್ ತಪ್ಪಲ್ಲ, ಡಿಎಂಕೆ ಸರ್ಕಾರವನ್ನು ದೂಷಿಸಿದ ಬಿಜೆಪಿ, ಮೃತರ ಕುಟುಂಬಗಳಿಗೆ ರೂ.1 ಲಕ್ಷ ಪರಿಹಾರ ಘೋಷಣೆ!

ರಾಜ್ಯ ಬಿಜೆಪಿ ನಾಯಕ ಕೆ.ಅಣ್ಣಾಮಲೈ, ಮೃತರ ಕುಟುಂಬಗಳಿಗೆ ತಲಾ ರೂ. 1 ಲಕ್ಷ ಪರಿಹಾರ ಘೋಷಿಸಿದರು. ಘಟನೆಯ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದರು.
K Annamalai
ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಅಣ್ಣಾಮಲೈ
Updated on

ಕರೂರು: ತಮಿಳುನಾಡಿನ ಕರೂರಿನಲ್ಲಿ ನಿನ್ನೆ ಸಂಭವಿಸಿದ ಕಾಲ್ತುಳಿತ ಘಟನೆಗೆ 'ವಿಜಯ್ ಅವರದ್ದು ತಪ್ಪೇನಿಲ್ಲಾ' ಎಂದಿರುವ ಬಿಜೆಪಿ, ರಾಜ್ಯದ ಡಿಎಂಕೆ ಸರ್ಕಾರವನ್ನು ದೂಷಿಸಿದೆ.

ಭಾನುವಾರ ಕರೂರಿಗೆ ಆಗಮಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ನಾಯಕ ಕೆ.ಅಣ್ಣಾಮಲೈ, ಮೃತರ ಕುಟುಂಬಗಳಿಗೆ ತಲಾ ರೂ. 1 ಲಕ್ಷ ಪರಿಹಾರ ಘೋಷಿಸಿದರು. ಘಟನೆಯ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದರು.

ಕಾಲ್ತುಳಿತ ದುರಂತಕ್ಕೆ ವಿಜಯ್ ಅವರದ್ದು ತಪ್ಪೇನಿಲ್ಲಾ, ಹೆಚ್ಚಿನ ಜನ ಸೇರುವುದನ್ನು ನಿರೀಕ್ಷಿಸಿ ರಾಜ್ಯ ಪೊಲೀಸರು ಮತ್ತು ಗುಪ್ತಚರ ಇಲಾಖೆ ಸಮರ್ಪಕವಾಗಿ ಪೋಲೀಸರನ್ನು ನಿಯೋಜಿಸಬೇಕಾಗಿತ್ತು. ಪೊಲೀಸರು ಯಾಕೆ 7 ಗಂಟೆ ಅನುಮತಿ ನೀಡಬೇಕಾಯಿತು? ಎರಡು ಗಂಟೆ ನೀಡಿದ್ದರೆ ಸಾಕಾಗಿತ್ತು ಎಂದು ಟೀಕಾ ಪ್ರಹಾರ ನಡೆಸಿದರು.

ತಮಿಳುನಾಡು ಬಿಜೆಪಿಯಾಗಿ ದುರಂತ ಕುರಿತು ಸಿಬಿಐ ತನಿಖೆಗೆ ಒತ್ತಾಯಿಸುತ್ತೇವೆ. ಮಾಜಿ ನ್ಯಾಯಾಧೀಶರ ನೇತೃತ್ವದ ತನಿಖಾ ಆಯೋಗದಿಂದ ತನಿಖೆ ನಡೆಸಲು ಮುಖ್ಯಮಂತ್ರಿ ಬಯಸಿದ್ದಾರೆ. ಇದರಿಂದ ಹೇಗೆ ನ್ಯಾಯಯುತ ತನಿಖೆ ನಡೆಯಲಿದೆ ಎಂದು ಅಣ್ಣಾಮಲೈ ಪ್ರಶ್ನಿಸಿದರು.

K Annamalai
Karur Stampede: ಚುನಾವಣೆ ಹೊಸ್ತಿಲಲ್ಲಿ ವಿಜಯ್ ಗೆ ಸಂಕಷ್ಟ! TVK ರ‍್ಯಾಲಿಗೆ ತಡೆ ನೀಡಲು ಹೈಕೋರ್ಟ್ ಮೊರೆ ಹೋದ ಸಂತ್ರಸ್ತ!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com