ಮಹಾರಾಷ್ಟ್ರ: ನಾಸಿಕ್ ಬಳಿ ಬಾವಿಗೆ ಬಿದ್ದ ಕಾರು; 9 ಮಂದಿ ಸಾವು-Video

ಮಹಾರಾಷ್ಟ್ರ ರಾಜ್ಯದ ನಾಸಿಕ್ ಜಿಲ್ಲೆಯ ದಿನ್ಡೋರಿ ತಾಲ್ಲೂಕಿನಲ್ಲಿ ಸಂಭವಿಸಿದ ದುರಂತದಲ್ಲಿ ಕಾರೊಂದು ಬಾವಿಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ ಒಂಬತ್ತು ಮಂದಿ ಮೃತಪಟ್ಟಿದ್ದಾರೆ.
People gathered at site
ಅಪಘಾತ ಬಳಿ ಸೇರಿದ ಜನರು, ರಕ್ಷಣಾ ಕಾರ್ಯ ಮುಂದುವರಿಕೆ
Updated on

ನಾಸಿಕ್: ಮಹಾರಾಷ್ಟ್ರ ರಾಜ್ಯದ ನಾಸಿಕ್ ಜಿಲ್ಲೆಯ ದಿನ್ಡೋರಿ ತಾಲ್ಲೂಕಿನಲ್ಲಿ ಸಂಭವಿಸಿದ ದುರಂತದಲ್ಲಿ ಕಾರೊಂದು ಬಾವಿಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳು ಪ್ರಸ್ತುತ ಮುಂದುವರಿದಿದ್ದು, ಘಟನೆ ಕುರಿತು ತನಿಖೆ ನಡೆಯುತ್ತಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತಪಟ್ಟವರು ಎಲ್ಲರೂ ದರ್ಗೋಡೆ ಕುಟುಂಬದವರಾಗಿದ್ದಾರೆ. ಈ ಘಟನೆ ಕಳೆದ ತಡರಾತ್ರಿ ನಡೆದಿದೆ.

ಕೆಲವರ ಗುರುತು ಇನ್ನೂ ಪತ್ತೆಯಾಗಿಲ್ಲ
ಮೃತರನ್ನು ಸುನಿಲ್ ದತ್ತು ದರ್ಗೋಡೆ, ರಾಖಿ ಸುನಿಲ್ ದರ್ಗೋಡೆ, ಉಷಾ ಅನಿಲ್ ದರ್ಗೋಡೆ, ಶ್ರದ್ದಾ ಅನಿಲ್ ದರ್ಗೋಡೆ ಮತ್ತು ಶ್ರಾವಣಿ ಅನಿಲ್ ದರ್ಗೋಡೆ ಎಂದು ಗುರುತಿಸಲಾಗಿದೆ. ಇತರರ ಗುರುತು ಇನ್ನೂ ಪತ್ತೆಯಾಗಿಲ್ಲ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಕುಟುಂಬದವರು ದಿನ್ಡೋರಿ ತಾಲ್ಲೂಕಿನ ಇಂದೋರ್ ಗ್ರಾಮದ ನಿವಾಸಿಗಳಾಗಿದ್ದರು. ಮಾರೂತಿ XL6 ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ನೀರಿನಿಂದ ತುಂಬಿದ ಬಾವಿಗೆ ಬಿದ್ದಿದೆ. ಸುನಿಲ್ ದರ್ಗೋಡೆ, ಅವರ ಪತ್ನಿ ಮತ್ತು ಮಗಳು ಸಹ ಈ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

People gathered at site
ಮುಂಬೈ-ನಾಗ್ಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ನಿಂತಿದ್ದ ಟೆಂಪೊಗೆ ಟ್ರಕ್ ಡಿಕ್ಕಿ ಹೊಡೆದು 8 ಮಹಿಳಾ ಕಾರ್ಮಿಕರು ಸಾವು

ಅಪಘಾತ ಹೇಗೆ ನಡೆದಿದೆ
ಕುಟುಂಬ ಸದಸ್ಯರು ಖಾಸಗಿ ಕೋಚಿಂಗ್ ಸೆಂಟರ್ ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ರಾತ್ರಿ ಹೊತ್ತಿಗೂ ರಕ್ಷಣಾ ಕಾರ್ಯಗಳು ಮುಂದುವರಿದಿದ್ದು, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ಪಡೆ (NDRF) ತಂಡವೂ ಸ್ಥಳಕ್ಕೆ ಆಗಮಿಸಿತು. ಆದರೆ, ಸ್ಥಳದಲ್ಲಿ ಜಮಾಯಿಸಿದ್ದ ಜನಸಮೂಹದ ಕಾರಣದಿಂದ ರಕ್ಷಣಾ ಕಾರ್ಯಗಳಿಗೆ ಅಡಚಣೆ ಉಂಟಾಯಿತು.

ಪ್ರಾಥಮಿಕ ಮಾಹಿತಿಯ ಪ್ರಕಾರ, ಚಾಲಕನು ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ದಿನ್ಡೋರಿ ಪೊಲೀಸರು ಪ್ರಕರಣದ ಕುರಿತು ಮುಂದಿನ ತನಿಖೆ ನಡೆಸುತ್ತಿದ್ದಾರೆ.

People gathered at site
ಹಾವೇರಿಯಲ್ಲಿ ಭೀಕರ ಅಪಘಾತ: ಬಸ್ ಗಾಗಿ ಕಾದಿದ್ದವರ ಮೇಲೆ Bus ರೂಪದಲ್ಲೇ ಬಂದ ಜವರಾಯ! ಮಗು ಸಾವು; Video

ಪ್ರಕರಣ ದಾಖಲು, ತನಿಖೆ ಮುಂದುವರಿಕೆ
ಕಳೆದ ರಾತ್ರಿ ಸುಮಾರು 10 ಗಂಟೆ ವೇಳೆಗೆ, ಪೊಲೀಸ್ ಠಾಣೆಯ ಕರ್ತವ್ಯದಲ್ಲಿದ್ದ ಕಾನ್ಸ್ಟೇಬಲ್ ಸಂಖ್ಯೆ 2447 ಪ್ರದೀಪ್ ಶಿಂಡೆ ಅವರಿಗೆ, ದಿನ್ಡೋರಿ ಗ್ರಾಮದ ಶಿವಾಜಿ ನಗರ ಪ್ರದೇಶದಲ್ಲಿರುವ ಅಶು ರಾಜೆ ಅವರಿಗೆ ಸೇರಿದ ಬಾವಿಗೆ ಮಾರೂತಿ XL6 ಕಾರು ಉರುಳಿ ಬಿದ್ದಿದೆ ಎಂದು ಮಾಹಿತಿ ಬಂತು. ಕಾರಿನಲ್ಲಿ ಎಂಟರಿಂದ ಒಂಬತ್ತು ಮಂದಿ ಇದ್ದು, ತಕ್ಷಣ ಸಹಾಯ ಅಗತ್ಯವಿದೆ ಎಂದು ಗೊತ್ತಾಯಿತು. ಈ ಮಾಹಿತಿಯ ಮೇರೆಗೆ ನಾವು ತಕ್ಷಣವೇ ಪೊಲೀಸ್ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದೆವು.

ಎರಡು ಹೈಡ್ರಾ ಕ್ರೇನ್‌ಗಳು ಮತ್ತು ಪರಿಣತ ಈಜುಗಾರರನ್ನು ಕರೆದೊಯ್ಯಲಾಯಿತು. ಕ್ರೇನ್ ಸಹಾಯದಿಂದ ಕಾರನ್ನು ರಾತ್ರಿ ಸುಮಾರು 12:15ರ ವೇಳೆಗೆ ಬಾವಿಯಿಂದ ಹೊರತೆಗೆದರು. ಮೃತರೆಲ್ಲರೂ ದಿನ್ಡೋರಿ ತಾಲ್ಲೂಕಿನ ಇಂದೋರ್ ಗ್ರಾಮದ ನಿವಾಸಿಗಳಾಗಿದ್ದರು. ಸ್ಥಳೀಯರ ಸಹಾಯದಿಂದ ವಾಹನ ಮತ್ತು ಮೃತದೇಹಗಳನ್ನು ಬಾವಿಯಿಂದ ಹೊರತೆಗೆದು ದಿನ್ಡೋರಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಪ್ರಕರಣ ದಾಖಲಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com