ಅಮೆರಿಕ-ಇರಾನ್ ಕದನ ವಿರಾಮ ಸ್ವಾಗತಾರ್ಹ: ಹಾರ್ಮುಜ್ ಮೂಲಕ 'ಮುಕ್ತ ಸಂಚಾರ ಸ್ವಾತಂತ್ರ್ಯ' ನಿರೀಕ್ಷಿಸುತ್ತವೆ; ಭಾರತ

ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮವನ್ನು ಭಾರತ ಸ್ವಾಗತಿಸಿದ್ದು ಪಶ್ಚಿಮ ಏಷ್ಯಾದಲ್ಲಿ ಶಾಶ್ವತ ಶಾಂತಿಯನ್ನು ಸ್ಥಾಪಿಸುತ್ತದೆ ಎಂಬ ಭರವಸೆಯನ್ನು ವ್ಯಕ್ತಪಡಿಸಿತು. ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಬುಧವಾರ ವಿದೇಶಾಂಗ ಸಚಿವಾಲಯ ಹೇಳಿಕೆ ನೀಡಿದೆ.
MEA Spokesperson Randhir Jaiswal
ವಿದೇಶಾಂಗ ಸಚಿವಾಲಯ ವಕ್ತಾರ ರಣಧೀರ್ ಜೈಸ್ವಾಲ್
Updated on

ದೆಹಲಿ: ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮವನ್ನು ಭಾರತ ಸ್ವಾಗತಿಸಿದ್ದು ಪಶ್ಚಿಮ ಏಷ್ಯಾದಲ್ಲಿ ಶಾಶ್ವತ ಶಾಂತಿಯನ್ನು ಸ್ಥಾಪಿಸುತ್ತದೆ ಎಂಬ ಭರವಸೆಯನ್ನು ವ್ಯಕ್ತಪಡಿಸಿತು. ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಬುಧವಾರ ವಿದೇಶಾಂಗ ಸಚಿವಾಲಯ ಹೇಳಿಕೆ ನೀಡಿದ್ದು, ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಸಂಘರ್ಷಕ್ಕೆ ಪರಿಹಾರ ಕಂಡುಕೊಳ್ಳುವಂತೆ ಭಾರತ ಈ ಹಿಂದಿನಿಂದಲೂ ಹೇಳುತ್ತಾ ಬಂದಿತ್ತು. ಈ ಸಂಘರ್ಷವು ಈಗಾಗಲೇ ಜನರಿಗೆ ಅಪಾರ ನೋವನ್ನುಂಟುಮಾಡಿದ್ದು ಜಾಗತಿಕ ಇಂಧನ ಸರಬರಾಜು ಮತ್ತು ವ್ಯಾಪಾರ ಜಾಲಗಳನ್ನು ಅಡ್ಡಿಪಡಿಸಿದೆ.

ಹಾರ್ಮುಜ್ ಜಲಸಂಧಿಯ ಮೂಲಕ ಸಂಚಾರದ ಸ್ವಾತಂತ್ರ್ಯ ಮತ್ತು ಜಾಗತಿಕ ವ್ಯಾಪಾರದ ಹರಿವನ್ನು ಅಡೆತಡೆಯಿಲ್ಲದೆ ನಿರ್ವಹಿಸಲಾಗುವುದು ಎಂದು ನಾವು ಭಾವಿಸುತ್ತೇವೆ. ಬುಧವಾರ ಮುಂಜಾನೆ ಯುಎಸ್ ಮತ್ತು ಇರಾನ್ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದು ಗಮನಾರ್ಹ. ಫೆಬ್ರವರಿ 28ರಂದು ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ಇರಾನ್ ವಿರುದ್ಧ ದಾಳಿಗಳನ್ನು ಪ್ರಾರಂಭಿಸಿದವು.

MEA Spokesperson Randhir Jaiswal
ಕದನ ವಿರಾಮದ ಮಧ್ಯೆಯೇ ಕುವೈತ್‌ನ ತೈಲ, ವಿದ್ಯುತ್ ಕೇಂದ್ರಗಳ ಮೇಲೆ ಇರಾನ್ ಡ್ರೋನ್‌ ದಾಳಿ!

ಪಶ್ಚಿಮ ಏಷ್ಯಾ ಮತ್ತು ಇಸ್ರೇಲ್‌ನಲ್ಲಿರುವ ಯುಎಸ್ ನೆಲೆಗಳ ಮೇಲೆ ದಾಳಿ ಮಾಡುವ ಮೂಲಕ ಇರಾನ್ ಪ್ರತೀಕಾರ ತೀರಿಸಿಕೊಂಡಿತು. ಈ ದಾಳಿಗಳು ವ್ಯಾಪಕ ಜೀವ ಮತ್ತು ಆಸ್ತಿಪಾಸ್ತಿ ನಷ್ಟಕ್ಕೆ ಕಾರಣವಾಯಿತು. ಇರಾನ್ ಈ ದಾಳಿಗಳನ್ನು ಪ್ರತಿಭಟಿಸಿ ಹಾರ್ಮುಜ್ ಜಲಸಂಧಿಯ ಮೂಲಕ ತೈಲ ಮತ್ತು ಅನಿಲ ಟ್ಯಾಂಕರ್‌ಗಳ ಸಂಚಾರವನ್ನು ಅಡ್ಡಿಪಡಿಸಿತು. ಇದು ಜಾಗತಿಕ ಕಚ್ಚಾ ತೈಲ ಮತ್ತು ಅನಿಲ ಸರಬರಾಜಿನ ಮೇಲೆ ಪರಿಣಾಮ ಬೀರಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com