ಲೋಕಸಭಾ ಕ್ಷೇತ್ರ ಮರು ವಿಂಗಡಣೆ: 'ದಕ್ಷಿಣ ರಾಜ್ಯಗಳಿಗೆ ಇದಕ್ಕಿಂತ ಉತ್ತಮ ಡೀಲ್ ಸಿಗಲು ಸಾಧ್ಯವಿಲ್ಲ'; ತೇಜಸ್ವಿ ಸೂರ್ಯ

ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಸಂಬಂಧಿಸಿದಂತೆ ದಕ್ಷಿಣ ಭಾರತದ ಜನರಲ್ಲಿ ಹೆಚ್ಚಿನ ಗೊಂದಲ ಹರಡಲಾಗುತ್ತಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸದನದಲ್ಲಿ ಹೇಳಿದ್ದಾರೆ. ದಕ್ಷಿಣ ಭಾರತದಲ್ಲಿ ವಿರೋಧ ಪಕ್ಷಗಳು ಪ್ರತಿಭಟನೆಗಳ ಮೂಲಕ ತಪ್ಪು ಮಾಹಿತಿಯನ್ನು ಹರಡುತ್ತಿವೆ.
Tejasvi Surya
ತೇಜಸ್ವಿ ಸೂರ್ಯTNIE
Updated on

ನವದೆಹಲಿ: ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಸಂಬಂಧಿಸಿದಂತೆ ದಕ್ಷಿಣ ಭಾರತದ ಜನರಲ್ಲಿ ಹೆಚ್ಚಿನ ಗೊಂದಲ ಹರಡಲಾಗುತ್ತಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸದನದಲ್ಲಿ ಹೇಳಿದ್ದಾರೆ. ದಕ್ಷಿಣ ಭಾರತದಲ್ಲಿ ವಿರೋಧ ಪಕ್ಷಗಳು ಪ್ರತಿಭಟನೆಗಳ ಮೂಲಕ ತಪ್ಪು ಮಾಹಿತಿಯನ್ನು ಹರಡುತ್ತಿವೆ. ಕ್ಷೇತ್ರ ಪುನರ್ವಿಂಗಡಣೆ ಹಿಂಬಾಗಿಲಿನ ಪ್ರಕ್ರಿಯೆಯಲ್ಲ. ಸಂವಿಧಾನದಲ್ಲಿ ನಿಗದಿಪಡಿಸಿದ ನಿಯಮಗಳ ಆಧಾರದ ಮೇಲೆ ಇದನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ಕ್ಷೇತ್ರ ಪುನರ್ವಿಂಗಡಣೆಯ ನಂತರ ಪ್ರತಿ ರಾಜ್ಯವು ಹೆಚ್ಚಾಗುವ ಸ್ಥಾನಗಳ ಸಂಖ್ಯೆಯನ್ನು ವಿವರಿಸುವ ಮೂಲಕ ತೇಜಸ್ವಿ ಸೂರ್ಯ ಸದನದಲ್ಲಿ ಎಲ್ಲಾ ರಾಜ್ಯಗಳ ಡೇಟಾವನ್ನು ಪ್ರಸ್ತುತಪಡಿಸಿದರು. 2011ರ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಪುನರ್ವಿಂಗಡಣೆಯನ್ನು ಜಾರಿಗೆ ತರಲಾಗುವುದಿಲ್ಲ ಎಂದು ಅವರು ಹೇಳಿದರು. ಸಿಎಂ ಎಂಕೆ ಸ್ಟಾಲಿನ್ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ಕ್ಷೇತ್ರ ಪುನರ್ವಿಂಗಡಣೆಯ ಮೂಲಕ, ತಮಿಳುನಾಡಿನ ಸಂಸದರ ಸಂಖ್ಯೆ 39 ರಿಂದ 59ಕ್ಕೆ ಹೆಚ್ಚಾಗಬಹುದು. ಇದು ತಮಿಳುನಾಡಿನ ಪ್ರಾತಿನಿಧ್ಯವನ್ನು ಸಹ ಹೆಚ್ಚಿಸುತ್ತದೆ ಎಂದರು.

Tejasvi Surya
ಮಹಿಳಾ ಮೀಸಲಾತಿ ಮಸೂದೆ ವಿರೋಧಿಸುವವರು ಭಾರಿ ಬೆಲೆ ತೆರಬೇಕಾಗುತ್ತದೆ: ವಿಪಕ್ಷಗಳಿಗೆ ಪ್ರಧಾನಿ ಮೋದಿ ವಾರ್ನಿಂಗ್!

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಯಾವುದೇ ರೀತಿಯ ಹಿನ್ನಡೆಯಾಗುವುದಿಲ್ಲ. ದಕ್ಷಿಣ ಭಾರತಕ್ಕೆ ಇದಕ್ಕಿಂತ ಉತ್ತಮ ಒಪ್ಪಂದ ಸಿಗಲು ಸಾಧ್ಯವಿಲ್ಲ ಎಂದರು. ಆದರೆ, ಜನಸಂಖ್ಯೆ ಆಧಾರಿತ ಮರು ಹಂಚಿಕೆಯು ಉತ್ತರ ಭಾರತದ ರಾಜ್ಯಗಳತ್ತ ವಾಲುವುದರಿಂದ ಒಕ್ಕೂಟ ವ್ಯವಸ್ಥೆಯ ಸಮತೋಲನ ತಪ್ಪುತ್ತದೆ ಎಂಬುದು ವಿರೋಧ ಪಕ್ಷಗಳು ವಾದಿಸುತ್ತಿವೆ.

2023ರಲ್ಲಿ ಅಂಗೀಕರಿಸಲಾದ ಮಹಿಳಾ ಮೀಸಲಾತಿ ಮಸೂದೆಯನ್ನು 2026ರ ನಂತರ ಜನಗಣತಿ ಮತ್ತು ಕ್ಷೇತ್ರ ಪುನರ್ವಿಂಗಡಣೆಯ ಆಧಾರದ ಮೇಲೆ ಜಾರಿಗೆ ತರಲಾಗುವುದು ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದ್ದಾರೆ. ಲೋಕಸಭಾ ಸದಸ್ಯತ್ವವನ್ನು ಏಕರೂಪವಾಗಿ ಶೇಕಡಾ 50ರಷ್ಟು ಹೆಚ್ಚಿಸಲಾಗುವುದು, ಇದರಿಂದಾಗಿ ಒಟ್ಟು ಸ್ಥಾನಗಳ ಸಂಖ್ಯೆ 815ಕ್ಕೆ ಏರುತ್ತದೆ. ಇವುಗಳಲ್ಲಿ 272 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿರುತ್ತವೆ. ಇದು ಸದನದ ಒಟ್ಟು ಸದಸ್ಯರ ಮೂರನೇ ಒಂದು ಭಾಗವನ್ನು ಪ್ರತಿನಿಧಿಸುತ್ತದೆ. ಯಾವುದೇ ರಾಜ್ಯವು ಯಾವುದೇ ನಷ್ಟವನ್ನು ಅನುಭವಿಸುವುದಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com