

ಕೃಷ್ಣನಗರ: ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ TMC ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಪಕ್ಷ ಹಲವು ಜಿಲ್ಲೆಗಳಲ್ಲಿ ತನ್ನ ಖಾತೆ ತೆರೆಯಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೂ ಮುನ್ನ ಕೃಷ್ಣನಗರದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಮಹಿಳೆಯರು ಮತ್ತು ಮಕ್ಕಳ ಕಲ್ಯಾಣವನ್ನು ಗುರಿಯಾಗಿಟ್ಟುಕೊಂಡು 10 ಅಂಶಗಳ ಗ್ಯಾರಂಟಿ ನೀಡಿದರು.
ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರು ಮತ್ತು ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಎಸಗುವವರಿಗೆ ಶಿಕ್ಷೆಯಾಗುತ್ತದೆ" ಎಂದು ಅವರು ಪ್ರತಿಜ್ಞೆ ಮಾಡಿದರು. ಪ್ರತಿ ಬ್ಲಾಕ್ನಲ್ಲಿ ಮಹಿಳಾ ಠಾಣೆ ಇರುತ್ತದೆ. ಮಹಿಳೆಯರನ್ನು ದೊಡ್ಡ ಪ್ರಮಾಣದಲ್ಲಿ ಪೊಲೀಸ್ ಪಡೆಗೆ ನೇಮಿಸಿಕೊಳ್ಳಲಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.
ಒಂದು ವರ್ಷದೊಳಗೆ, 36,000 ರೂ.ಗಳನ್ನು ಮಹಿಳೆಯರ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ ಎಂದು ಅವರು ಭರವಸೆ ನೀಡಿದರು. ಬಿಜೆಪಿ ಸರ್ಕಾರ ರಚನೆಯಾದರೆ ಪದವೀಧರ ವಿದ್ಯಾರ್ಥಿನಿಯರಿಗೆ 50,000 ರೂ. ಹಾಗೂ ಗರ್ಭಿಣಿ ಮಹಿಳೆಯರಿಗೆ 21,000 ರೂ.ಗಳ ಆರ್ಥಿಕ ನೆರವು ಸಿಗುತ್ತದೆ ಎಂದು ಅವರು ಹೇಳಿದರು.
ಮಕ್ಕಳ ಉತ್ತಮ ಪೋಷಣೆಗಾಗಿ ಹೆಚ್ಚುವರಿಯಾಗಿ 36,000 ರೂ.ಗಳನ್ನು ನೀಡಲಾಗುವುದು. ಸುಕನ್ಯಾ ಸಮೃದ್ಧಿ ಯೋಜನೆಯಡಿಯಲ್ಲಿ, ಹೆಣ್ಣುಮಕ್ಕಳ ಭವಿಷ್ಯವನ್ನು ಸುರಕ್ಷಿತಗೊಳಿಸಲಾಗುವುದು ಎಂದು ಪ್ರಧಾನಿ ಹೇಳಿದರು. ಮುದ್ರಾ ಯೋಜನೆಯಡಿಯಲ್ಲಿ ಸ್ವ-ಉದ್ಯೋಗಕ್ಕಾಗಿ 20 ಲಕ್ಷ ರೂ.ಗಳವರೆಗೆ ಸಾಲ ನೀಡಲಾಗುವುದು. ಲಕ್ಷಾಂತರ ಮಹಿಳೆಯರು 'ಲಖ್ ಪತಿ ದೀದಿ'ಗಳಾಗಲು ಬೆಂಬಲ ನೀಡಲಾಗುವುದು" ಎಂದು ಅವರು ಭರವಸೆ ನೀಡಿದರು.
ಆಯುಷ್ಮಾನ್ ಯೋಜನೆಯಡಿಯಲ್ಲಿ, 5 ಲಕ್ಷ ರೂ.ಗಳವರೆಗೆ ಉಚಿತ ಚಿಕಿತ್ಸೆ ಲಭ್ಯವಿರುತ್ತದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ, ಬಂಗಾಳದ ಬಡ ಕುಟುಂಬಗಳಿಗೆ ಮಹಿಳೆಯರ ಹೆಸರಿನಲ್ಲಿ ಮನೆಗಳನ್ನು ನೋಂದಾಯಿಸಲಾಗುವುದು ಮೋದಿ-ಕಿ-ಗ್ಯಾರಂಟಿ ಎಂದರೆ ಸ್ವಯಂಚಾಲಿತವಾಗಿ ಆ ಭರವಸೆಗಳ ನೆರವೇರಿಕೆ ಎಂದರ್ಥ ಎಂದು ಅವರು ಹೇಳಿದರು.
ಇಂದು ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು, ಈ ಹಿಂದೆ ಅವರು ರಾಜ್ಯಕ್ಕೆ "ಆರು ಗ್ಯಾರಂಟಿಗಳನ್ನು ಭರವಸೆ ನೀಡಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಟಿಎಂಸಿಯ "ಭಯದ ಆಳ್ವಿಕೆ"ಯನ್ನು ವಿಶ್ವಾಸದ ಆಡಳಿತವನ್ನಾಗಿ ಬದಲಾಯಿಸುತ್ತದೆ ಎಂದು ಅವರು ಹೇಳಿದರು.
ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 29 ರಂದು ಎರಡನೇ ಹಂತದ ಚುನಾವಣೆ ನಡೆಯಲಿದ್ದು, ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ.
Advertisement