Delhi Liquor Scam: ನ್ಯಾ.ಸ್ವರ್ಣ ಕಾಂತ ಶರ್ಮಾ ಮುಂದೆ ವಿಚಾರಣೆಗೆ ಹಾಜರಾಗಲ್ಲ: ಕೇಜ್ರಿವಾಲ್ ಬೆನ್ನಲ್ಲೇ ಕೋರ್ಟ್ ಬಹಿಷ್ಕರಿಸಿದ ಸಿಸೋಡಿಯಾ..!

ಈ ನಿರ್ಧಾರವನ್ನು ಸಿಸೋಡಿಯಾ ಅವರು ಅಧಿಕೃತ ಪತ್ರದ ಮೂಲಕ ತಿಳಿಸಿದ್ದು, ತಮ್ಮ ಪರವಾಗಿ ಯಾವುದೇ ವಕೀಲರೂ ಹಾಜರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Manish Sisodia and Aravind Kejriwal
ಮನೀಶ್ ಸಿಸೋಡಿಯಾ ಮತ್ತು ಅರವಿಂದ್ ಕೇಜ್ರಿವಾಲ್
Updated on

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಮನೀಷ್ ಸಿಸೋಡಿಯಾ ಅವರು ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ನ್ಯಾಯಪೀಠದ ಮುಂದೆ ಹಾಜರಾಗುವುದಿಲ್ಲ ಎಂದು ಘೋಷಿಸಿದ್ದಾರೆ.

ಈ ನಿರ್ಧಾರವನ್ನು ಸಿಸೋಡಿಯಾ ಅವರು ಅಧಿಕೃತ ಪತ್ರದ ಮೂಲಕ ತಿಳಿಸಿದ್ದು, ತಮ್ಮ ಪರವಾಗಿ ಯಾವುದೇ ವಕೀಲರೂ ಹಾಜರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ಈ ಪ್ರಕರಣದಲ್ಲಿ ನ್ಯಾಯ ಸಿಗುವ ನಿರೀಕ್ಷೆ ಇಲ್ಲ ಎಂದು ಹೇಳಿದ್ದು, ಇನ್ನು ಮುಂದೆ “ಸತ್ಯಾಗ್ರಹ” ದ ಮಾರ್ಗವನ್ನು ಅನುಸರಿಸುವುದಾಗಿ ತಿಳಿಸಿದ್ದಾರೆ.

ಮಹಾತ್ಮ ಗಾಂಧೀಜಿ ಅವರ ಅಹಿಂಸಾತ್ಮಕ ಹೋರಾಟದ ಮಾರ್ಗವನ್ನು ಉಲ್ಲೇಖಿಸಿ ಈ ಹೇಳಿಕೆಯನ್ನು ನೀಡಿದ್ದಾರೆ.

Manish Sisodia and Aravind Kejriwal
'ನ್ಯಾಯ ಸಿಗುತ್ತೆ ಅನ್ನೋ ನಂಬಿಕೇನೆ ಇಲ್ಲ.. ಸತ್ಯಾಗ್ರಹ ಕೂರ್ತೀನಿ': ನ್ಯಾಯಮೂರ್ತಿಗಳ ವಿರುದ್ಧವೇ ಅರವಿಂದ್ ಕೇಜ್ರಿವಾಲ್ ರಣಕಹಳೆ! Video

ಇದಕ್ಕೂ ಮುನ್ನ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಕೂಡ ಇದೇ ನ್ಯಾಯಪೀಠದ ಮುಂದೆ ವೈಯಕ್ತಿಕವಾಗಿಯೂ ಅಥವಾ ವಕೀಲರ ಮೂಲಕವೂ ಹಾಜರಾಗುವುದಿಲ್ಲ ಎಂದು ಘೋಷಿಸಿದ್ದರು.

ನ್ಯಾಯಮೂರ್ತಿ ಸ್ವರ್ಣ ಕಾಂತಾ ಶರ್ಮಾ ಅವರಿಂದ ತಮ್ಮ ಅರ್ಜಿ ತಿರಸ್ಕೃತವಾದ ಬಳಿಕ ಅವರು ಈ ನಿರ್ಧಾರ ತೆಗೆದುಕೊಂಡಿದ್ದರು.

ಕೇಜ್ರಿವಾಲ್ ತಮ್ಮ ಪತ್ರದಲ್ಲಿ, "ನ್ಯಾಯಮೂರ್ತಿ ಸ್ವರ್ಣ ಕಾಂತ ಅವರಿಂದ ನ್ಯಾಯ ಸಿಗುವ ನನ್ನ ಭರವಸೆ ಕುಸಿದಿದೆ. ಆದ್ದರಿಂದ, ನಾನು ಮಹಾತ್ಮ ಗಾಂಧಿಯವರ ಸತ್ಯಾಗ್ರಹದ ಮಾರ್ಗವನ್ನು ಅನುಸರಿಸಲು ನಿರ್ಧರಿಸಿದ್ದೇನೆ" ಎಂದು ಹೇಳಿದ್ದರು.

ಈ ನಿರ್ಧಾರವು "ಆತ್ಮಸಾಕ್ಷಿಯ" ವಿಷಯವಾಗಿದೆ ಎಂದು ಹೇಳಿದ್ದ ಅವರು, ಹೈಕೋರ್ಟ್ ನ್ಯಾಯಮೂರ್ತಿಗಳು ತನ್ನ ಅರ್ಜಿಯನ್ನು ವಜಾಗೊಳಿಸಿರುವುದನ್ನು ಪ್ರಶ್ನಿಸಿ ತಾವು ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com