

ಮೇಘಾಲಯ: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದ ಮೇಘಾಲಯ ಹನಿಮೂನ್ ಮರ್ಡರ್ ಪ್ರಕರಣದ ಆರೋಪಿಗೆ ನ್ಯಾಯಾಲಯದಿಂದ ಜಾಮೀನು ದೊರೆತಿದೆ.
2025ರಲ್ಲಿ ಮೇಘಾಲಯದಲ್ಲಿ ಹನಿಮೂನ್ ಗೆ ತೆರಳಿದ ವೇಳೆಯಲ್ಲಿ ತನ್ನ ಬಾಯ್ ಫ್ರೆಂಡ್ ಜೊತೆಗೆ ಸೇರಿ ಹತ್ಯೆ ಮಾಡಿದ್ದ ಇಂದೋರ್ ನಿವಾಸಿ ಸೋನಾಮ್ ರಘುವಂಶಿಗೆ ಮೇಘಾಲಯದ ಸ್ಥಳೀಯ ನ್ಯಾಯಾಲಯವೊಂದು ಮಂಗಳವಾರ ಜಾಮೀನು ನೀಡಿದೆ.
ದಂಪತಿ ಹನಿಮೂನ್ ಗೆ ತೆರಳಿದ್ದಾಗ ಮೇ 23, 2025 ರಂದು ಸೋನಾಮ್ ಪತ್ನಿ ರಾಜಾ ರಘುವಂಶಿ ನಾಪತ್ತೆಯಾಗಿದ್ದರು. ಜೂನ್ 2 ರಂದು ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯ ಸೊಹ್ರಾ ಪ್ರದೇಶದ ಜಲಪಾತದ ಬಳಿ ಅವರ ವಿರೂಪಗೊಂಡ ಮೃತದೇಹ ಪತ್ತೆಯಾಗಿತ್ತು.
ಈ ಪ್ರಕರಣದಲ್ಲಿ ಸೋನಮ್ ಮತ್ತು ಆಕೆಯ ಬಾಯ್ ಫ್ರೆಂಡ್ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು. ಆರೋಪಿ ಸೋನಾಮ್ ಗೆ ನ್ಯಾಯಾಲಯ ಜಾಮೀನು ನೀಡಿದೆ.
ಆದಾಗ್ಯೂ, ಅಗತ್ಯ ಕಾನೂನು ಕ್ರಮ ಅನುಸರಿಸಲಾಗಿದ್ದು, ಪೊಲೀಸರು ಕಾನೂನಿನ ಪ್ರಕಾರ ಪ್ರಕರಣವನ್ನು ಮುಂದುವರಿಸುತ್ತಾರೆ ಎಂದು ಎಸ್ಪಿ ವಿವೇಕ್ ಸೈಮ್ ಹೇಳಿರುವುದಾಗಿ ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.
Advertisement