

ಚೆನ್ನೈ: ನಟಿ ತ್ರಿಶಾ ವಿರುದ್ಧ 'ಡಬಲ್ ಮೀನಿಂಗ್' ಹೇಳಿಕೆ ನೀಡಿದ್ದ ಆರೋಪ ಹಿನ್ನೆಲೆಯಲ್ಲಿ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ನನ್ನು ಬಂಧಿಸಲಾಗಿತ್ತು. ತೀವ್ರ ವಿಚಾರಣೆ ಬಳಿಕ ಸ್ಟೇಷನ್ ಜಾಮೀನಿನ ಮೇಲೆ ಉದಯನಿಧಿ ಸ್ಟಾಲಿನ್ ನನ್ನು ಬಿಡುಗಡೆ ಮಾಡಲಾಗಿದೆ. ತಂಜಾವೂರು ಬಳಿಯ ಸೆಂಗಿಪಟ್ಟಿ ಪೊಲೀಸ್ ಠಾಣೆಯಲ್ಲಿ ಡಿಎಂಕೆ ನಾಯಕನ ವಿಚಾರಣೆ ನಡೆಸಲಾಯಿತು. ಇನ್ನು ಪೊಲೀಸ್ ಠಾಣೆ ಮುಂದೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದು ಉದಯನಿಧಿ ಸ್ಟಾಲಿನ್ ಬಿಡುಗಡೆಯಾಗುತ್ತಿದ್ದಂತೆ ಅಭಿಮಾನಿಗಳು ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.
ತಂಜಾವೂರಿನಲ್ಲಿ ಸೋಮವಾರ ನಡೆದ ಕಾವೇರಿ ಪ್ರತಿಭಟನೆಯ ಸಂದರ್ಭದಲ್ಲಿ ತ್ರಿಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನಲೆಯಲ್ಲಿ ಅವರ ಮೇಲೆ ಹಲವು ಪ್ರಕರಣಗಳು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ನೀಲಂಕರೈನ ಪೂರ್ವ ಕರಾವಳಿ ರಸ್ತೆಯಲ್ಲಿರುವ ಅವರ ನಿವಾಸದಿಂದ ತಂಜಾವೂರು ಮತ್ತು ನೀಲಂಕರೈ ಪೊಲೀಸರ ಜಂಟಿ ತಂಡವು ವಿಚಾರಣೆಗಾಗಿ ಉದಯನಿಧಿಯನ್ನು ಬಂಧಿಸಿತ್ತು.
ನಾನು ರೈತರು, ಅವರ ಕಲ್ಯಾಣ ಮತ್ತು ಕಾವೇರಿ ನದಿ ನೀರಿನ ಸಮಸ್ಯೆಯ ಬಗ್ಗೆ 20 ನಿಮಿಷಗಳಿಗೂ ಹೆಚ್ಚು ಕಾಲ ಮಾತನಾಡಿದ್ದೇನೆ. ನಾನು ಎಂದಿಗೂ ಮಾತನಾಡದ ವಿಷಯವನ್ನು ತಿರುಚಿ ನನ್ನ ವಿರುದ್ಧ ಷಡ್ಯಂತ್ರಕ್ಕೆ ಬಳಸಲಾಗುತ್ತಿದೆ. ನಾನಲ್ಲ ನನ್ನ ಪಕ್ಷದ ಮೂಲ ಸದಸ್ಯನಿಗೂ ಸಹ ಇಂತಹ ಬಂಧನಗಳಿಗೆ ಹೆದರುವುದಿಲ್ಲ. ನಾವು ಅದನ್ನು ಕಾನೂನುಬದ್ಧವಾಗಿ ಎದುರಿಸುತ್ತೇವೆ ಎಂದು ಉದಯನಿಧಿ ಮಾಧ್ಯಮಗಳಿಗೆ ತಿಳಿಸಿದರು.