ಸನಾತನ ಧರ್ಮ ಟೀಕಿಸಿದ್ದ ವ್ಯಕ್ತಿಯ ಬಂಧನವಾಗಿದೆ: ಉದಯನಿಧಿ ಸ್ಟಾಲಿನ್​​​ಗೆ ಕುಟುಕಿದ BJP

ಉದಯನಿಧಿ ಸ್ಟಾಲಿನ್ ಬಂಧನವನ್ನು ಸ್ವಾಗತಿಸಿದ ಬಿಜೆಪಿ ನಾಯಕ ಅಮಿತ್‌ ಮಾಳವೀಯ ಅವರು, ಸನಾತನ ಧರ್ಮವನ್ನು ಟೀಕಿಸಿದ್ದ ವ್ಯಕ್ತಿಯ ಬಂಧನವಾಗಿದೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
Udhayanidhi Stalin
ಉದಯನಿಧಿ ಸ್ಟಾಲಿನ್
Updated on

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಮತ್ತು ನಟಿ ತ್ರಿಷಾ ವಿರುದ್ಧ "ಅವಹೇಳನಕಾರಿ" ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡು ಪೊಲೀಸರು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಮಂಗಳವಾರ ಬಂಧಿಸಿದ್ದಾರೆ.

ಉದಯನಿಧಿ ಸ್ಟಾಲಿನ್ ಬಂಧನವನ್ನು ಸ್ವಾಗತಿಸಿದ ಬಿಜೆಪಿ ನಾಯಕ ಅಮಿತ್‌ ಮಾಳವೀಯ ಅವರು, ಸನಾತನ ಧರ್ಮವನ್ನು ಟೀಕಿಸಿದ್ದ ವ್ಯಕ್ತಿಯ ಬಂಧನವಾಗಿದೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಉದಯನಿಧಿ ಸ್ಟಾಲಿನ್, ಮಹಿಳೆಯೊಬ್ಬರ ವಿರುದ್ಧ ಕೆಟ್ಟ ಮತ್ತು ಅವಹೇಳನಕಾರಿ ಹೇಳಿಕೆ ನೀಡಿ ಬಂಧನಕ್ಕೊಳಗಾಗಿದ್ದಾರೆ. ಸನಾತನ ಧರ್ಮವನ್ನು ಹಳಿದಿದ್ದ ವ್ಯಕ್ತಿ ಈಗ ಮಹಿಳೆಯರ ವಿರುದ್ಧದ ನಿಂದನಾತ್ಮಕ ಹೇಳಿಕೆಗಾಗಿ ಕಾನೂನು ಕ್ರಮ ಎದುರಿಸುತ್ತಿದ್ದಾರೆ. ಸಾರ್ವಜನಿಕವಾಗಿ ಮಹಿಳೆಯರ ಘನತೆಗೆ ಕುಂದಂಟು ಮಾಡುವ ಇಂತಹ ಅಸಭ್ಯ ಭಾಷಣಕ್ಕಾಗಿ ಅವರನ್ನು ಬಂಧಿಸಿದ್ದು ಸರಿಯಾದ ಕ್ರಮವೇ ಆಗಿದೆ ಎಂದು ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯ ಹೇಳಿದ್ದಾರೆ.

Udhayanidhi Stalin
ಇಂದೇ ಉದಯನಿಧಿ ಸ್ಟಾಲಿನ್ ಬಿಡುಗಡೆ ಮಾಡಿ: ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಆದೇಶ

ತಂಜಾವೂರಿನಲ್ಲಿ ಸೋಮವಾರ ನಡೆದ ಕಾವೇರಿ ಪ್ರತಿಭಟನೆಯ ಸಂದರ್ಭದಲ್ಲಿ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ದಾಖಲಾಗಿರುವ ಹಲವಾರು ಪ್ರಕರಣಗಳಿಗೆ ಸಂಬಂಧಿಸಿದಂತೆ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ನೀಲಂಕರೈನ ಪೂರ್ವ ಕರಾವಳಿ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ತಂಜಾವೂರು ಮತ್ತು ನೀಲಂಕರೈ ಪೊಲೀಸರ ಜಂಟಿ ತಂಡ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com