ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಕರ್ನಾಟಕದ 6 ಕಾರ್ಮಿಕರು ಸೇರಿ 9 ಮಂದಿ ದುರ್ಮರಣ

ಸಂಗಾರೆಡ್ಡಿ ಜಿಲ್ಲೆಯ ಮೊಗ್ಡಂಪಲ್ಲಿ ಮಂಡಲದ ಸತ್ವಾರ್ ಗ್ರಾಮದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ 65 ರಲ್ಲಿ ಗಂಭೀರ ಅಪಘಾತ ಸಂಭವಿಸಿದೆ. ತೈಲ ಟ್ಯಾಂಕರ್ ಆಟೋಗೆ ಡಿಕ್ಕಿ ಹೊಡೆದು ಆರು ಜನರು ಸಾವನ್ನಪ್ಪಿದ್ದಾರೆ. ಇತರ ಮೂವರು ಗಾಯಗೊಂಡಿದ್ದಾರೆ.
telangana Accideent
ತೆಲಂಗಾಣ ಅಪಘಾತ
Updated on

ಮೊಗ್ಡಂಪಲ್ಲಿ: ಸಂಗಾರೆಡ್ಡಿ ಜಿಲ್ಲೆಯ ಮೊಗ್ಡಂಪಲ್ಲಿ ಮಂಡಲದ ಸತ್ವಾರ್ ಗ್ರಾಮದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ 65 ರಲ್ಲಿ ಗಂಭೀರ ಅಪಘಾತ ಸಂಭವಿಸಿದೆ. ತೈಲ ಟ್ಯಾಂಕರ್ ಆಟೋಗೆ ಡಿಕ್ಕಿ ಹೊಡೆದು ಆರು ಜನರು ಸಾವನ್ನಪ್ಪಿದ್ದಾರೆ. ಇತರ ಮೂವರು ಗಾಯಗೊಂಡಿದ್ದಾರೆ.

ಮೃತರನ್ನು ಕರ್ನಾಟಕದ ಬೀದರ್ ನ ರಾಜಗಿರಾ ಗ್ರಾಮದ ನಿವಾಸಿಗಳು ಎಂದು ಪೊಲೀಸರು ಗುರುತಿಸಿದ್ದಾರೆ. ಈ ರಸ್ತೆ ಅಪಘಾತ ಸಂಭವಿಸಿದಾಗ ಒಟ್ಟು 12 ಜನರು ಆಟೋದಲ್ಲಿ ಪ್ರಯಾಣಿಸುತ್ತಿದ್ದರು. ಗಂಭೀರವಾಗಿ ಗಾಯಗೊಂಡ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

telangana Accideent
ಏರ್ ಇಂಡಿಯಾ ಟರ್ಬುಲೆನ್ಸ್: ಪೈಲಟ್ ಗಾಂಜಾ ಸೇವಿಸಿದ್ದು ದೃಢ- ವರದಿಗಳು

ಸಂಗಾರೆಡ್ಡಿ ಜಿಲ್ಲೆಯಲ್ಲಿ ಮತ್ತೊಂದು ರಸ್ತೆ ಅಪಘಾತ

ಸಂಗಾರೆಡ್ಡಿ ಜಿಲ್ಲೆಯಲ್ಲಿ ಮತ್ತೊಂದು ರಸ್ತೆ ಅಪಘಾತ ಸಂಭವಿಸಿದೆ. ಮೂರು ಕಾರುಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಕೊಹಿರ್ ಮಂಡಲದ ಕವೇಲಿಯಲ್ಲಿ ಈ ಅಪಘಾತ ಸಂಭವಿಸಿದೆ. ಇದರೊಂದಿಗೆ, ಸಂಗರೆಡ್ಡಿ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 9 ಜನರು ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com