ನೀಟ್ ರದ್ದುಗೊಳಿಸುವಂತೆ ಆಗ್ರಹಿಸಿ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ತಮಿಳುನಾಡು ಆರೋಗ್ಯ ಸಚಿವ ಕೆ ಜಿ ಅರುಣ್‌ರಾಜ್ ಅವರು ನೀಟ್ ವಿರುದ್ಧ ಇಂದು ನಿರ್ಣಯ ಮಂಡಿಸಿದ್ದು, ನೀಟ್ ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ.
Chief Minister C. Joseph Vijay moves a resolution in the Assembly against the Karnataka government’s Mekedatu dam proposal
ತಮಿಳುನಾಡು ವಿಧಾನಸಭೆ
Updated on

ಚೆನ್ನೈ: ಕೇಂದ್ರ ಸರ್ಕಾರ ತಕ್ಷಣವೇ ನೀಟ್ ಅನ್ನು ರದ್ದುಗೊಳಿಸಿ 12ನೇ ತರಗತಿಯ ಅಂಕಗಳ ಆಧಾರದ ಮೇಲೆ ಯುಜಿ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ನೀಡಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದೆ.

ತಮಿಳುನಾಡು ಆರೋಗ್ಯ ಸಚಿವ ಕೆ ಜಿ ಅರುಣ್‌ರಾಜ್ ಅವರು ನೀಟ್ ವಿರುದ್ಧ ಇಂದು ನಿರ್ಣಯ ಮಂಡಿಸಿದ್ದು, ನೀಟ್ ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ. ವೈದ್ಯಕೀಯ ಶಿಕ್ಷಣಕ್ಕೆ ಸಂಬಂಧಿಸಿದಂತೆ ರಾಜ್ಯಗಳ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ಒತ್ತಿ ಹೇಳಿದ್ದಾರೆ.

ಡಿಎಂಕೆ, ಎಐಎಡಿಎಂಕೆ, ಪಿಎಂಕೆ ಮತ್ತು ಎಡ ಪಕ್ಷಗಳ ಶಾಸಕರು ಸಹ ಈ ನಿರ್ಣಯವನ್ನು ಬೆಂಬಲಿಸಿ ಮಾತನಾಡಿದರು. ಪಿಟಿಐ

Chief Minister C. Joseph Vijay moves a resolution in the Assembly against the Karnataka government’s Mekedatu dam proposal
'NEET ರದ್ದುಪಡಿಸುವುದರಿಂದ ಮಾತ್ರ ಶಾಶ್ವತ ಪರಿಹಾರ ಸಾಧ್ಯ': ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಎಂ.ಕೆ ಸ್ಟಾಲಿನ್ ಬೆಂಬಲ

ಬಿಜೆಪಿಯಿಂದ ವಿರೋಧ, ಸಭೆತ್ಯಾಗ

ಈ ನಿರ್ಣಯಕ್ಕೆ ತಮಿಳುನಾಡು ಬಿಜೆಪಿಯು ತೀವ್ರ ವಿರೋಧ ವ್ಯಕ್ತಪಡಿಸಿದೆ. ನಿರ್ಣಯವನ್ನು ಮಂಡಿಸಿದ ತಕ್ಷಣ ಬಿಜೆಪಿ ಶಾಸಕರು ಸದನದಲ್ಲಿ ಪ್ರತಿಭಟನೆ ನಡೆಸಿ, ಸಭಾಧ್ಯಕ್ಷರ ಬಾವಿಗಿಳಿದು ಆಕ್ರೋಶ ವ್ಯಕ್ತಪಡಿಸಿದರು. ಅಂತಿಮವಾಗಿ, ಸರ್ಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಸದಸ್ಯರು ಸದನದಿಂದ ವಾಕೌಟ್ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com