

ಮಹಾರಾಷ್ಟ್ರ: ಶಾಲೆಯೊಂದರ ಪ್ರಾಂಶುಪಾಲರು ಮದ್ಯಪಾನ ಮಾಡಿ ಶಾಲೆಗೆ ಬಂದಿದ್ದಾರೆ ಎಂಬ ಗ್ರಾಮಸ್ಥರ ದೂರಿನ ಮೇರೆಗೆ ಅವರನ್ನು ಅಮಾನತುಗೊಳಿಸಿರುವ ಘಟನೆ ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ನಡೆದಿದೆ.
ಈ ವಿಚಾರವನ್ನು ಪ್ರಸ್ತಾಪಿಸಿದ ಕಾಕ್ರೋಚ್ ಜನತಾ ಪಾರ್ಟಿ' (CJP) ಪ್ರಾಂಶುಪಾಲರನ್ನು ತೆಗೆದುಹಾಕದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಇದಾದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಪ್ರಾಂಶುಪಾಲರ ವಿರುದ್ಧ ಗ್ರಾಮಸ್ಥರು ಐದು ಬಾರಿ ದೂರು ನೀಡಿದ್ದರೂ, ಸಂಘಟನೆಯು ಈ ವಿಷಯವನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸುವವರೆಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿಳಿಸಿದ್ದಾರೆ.
ಪ್ರಾಂಶುಪಾಲರ ಅಮಾನತು: ಲಿಂಬಾಲಾ ಗ್ರಾಮದ ಶಾಲೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಗ್ರಾಮಸ್ಥರು ಪದೇ ಪದೇ ದೂರು ನೀಡಿದರೂ ಅಧಿಕಾರಿಗಳು ಕ್ರಮ ಕೈಗೊಂಡಿರಲಿಲ್ಲ. ಶನಿವಾರ ಸಿಜೆಪಿ ಈ ವಿಷಯವನ್ನು ಪ್ರಸ್ತಾಪಿಸಿ, ಪ್ರಾಂಶುಪಾಲರನ್ನು ತೆಗೆದುಹಾಕದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿತ್ತು. ಈ ಎಚ್ಚರಿಕೆಯ ನಂತರ ಸೋಮವಾರ ಬೆಳಿಗ್ಗೆ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಯಿತು ಎಂದು ಅಭಿಜೀತ್ ದೀಪ್ಕೆ ಹೇಳಿದ್ದಾರೆ
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಪೋಸ್ಟ್ ಮಾಡಿದ್ದು, ಇದು ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮಸ್ಥರಿಗೆ ಸಿಕ್ಕ "ಮೊದಲ ದೊಡ್ಡ ಗೆಲುವು" ಎಂದಿದ್ದಾರೆ. ಮದ್ಯಪಾನ ಮಾಡಿ ಶಾಲೆಗೆ ಬಂದಿದ್ದ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ" ಎಂದು ಅವರು ಬರೆದುಕೊಂಡಿದ್ದಾರೆ.
ಈ ಗೆಲುವನ್ನು ಅಬ್ದುಲ್ ಮತ್ತು ಅವರ ತಂದೆಗೆ ಅರ್ಪಿಸಲು ಬಯಸುತ್ತೇನೆ." ಶಾಲೆಯ ಸ್ಥಿತಿಯನ್ನು ಸುಧಾರಿಸುವವರೆಗೂ ಈ ಅಭಿಯಾನ ನಿಲ್ಲುವುದಿಲ್ಲ. ಶಾಲೆಯನ್ನು ಸರಿಪಡಿಸಿಯೇ ತೀರುತ್ತೇವೆ ಎಂದು ದೀಪ್ಕೆ ಹೇಳಿದ್ದಾರೆ.
ಸಿಜೆಪಿ ಪ್ರಸ್ತುತ ದೇಶಾದ್ಯಂತ ಶಾಲೆ ಸರಿಪಡಿಸಿ ಅಭಿಯಾನ ನಡೆಸುತ್ತಿದೆ. ಗ್ರಾಮಸ್ಥರ ನಿರಂತರ ದೂರುಗಳು ಮತ್ತು ಸಿಜೆಪಿ ಈ ವಿಷಯವನ್ನು ಬಹಿರಂಗವಾಗಿ ಹೇಳಲು ನಿರ್ಧಾರ ತೆಗೆದುಕೊಂಡ ನಂತರ ಪ್ರಾಂಶುಪಾಲರ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ ಎಂದು ದೀಪ್ಕೆ ತಿಳಿಸಿದ್ದಾರೆ.