

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ವ್ಯಂಗ್ಯವಾಗಿ ಟೀಕಿಸಿದ್ದಾರೆ. ನಿನ್ನೆ ಗೋವಾದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಅವರು, ನಾನು ಮೊದಲ ಬಾರಿಗೆ ಶಾಸಕನಾದಾಗ ಅಮಿತ್ ಶಾ ಇನ್ನೂ ಮಗುವಾಗಿದ್ದರು. ಆದರೆ ಇಂದು ಅವರು ನಮಗೆ ದೇಶಭಕ್ತಿಯ ಪಾಠ ಹೇಳುತ್ತಿದ್ದಾರೆ ಎಂದು ಹೇಳಿದರು.
ಬಿಜೆಪಿ ನಾಯಕರು ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಆಗಾಗ್ಗೆ ಹೇಳಿಕೆಗಳನ್ನು ನೀಡುತ್ತಿರುತ್ತಾರೆ. ನಾನು ಮೊದಲ ಬಾರಿಗೆ ಶಾಸಕನಾದಾಗ ಅಮಿತ್ ಶಾ ಇನ್ನೂ ಬೆಳೆದಿರಲಿಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ನಾವು ಹೋರಾಡಿದ್ದೇವೆ. ಆಗ ಇವರು ಎಲ್ಲಿದ್ದರು? ಎಂದು ಪ್ರಶ್ನಿಸಿದರು. ಈ ವೇಳೆ ಖರ್ಗೆ ಅವರು ಬಿಜೆಪಿಯ ವಿರುದ್ಧ ಇನ್ನೂ ಹಲವು ಆರೋಪಗಳನ್ನು ಮಾಡಿದರು.
ನಾನು ಮೊದಲ ಬಾರಿಗೆ ಶಾಸಕನಾದಾಗ ಅಮಿತ್ ಶಾ ಮಗುವಾಗಿದ್ದರು. ಇಂದು ಅವರು ನಮಗೆ ದೇಶಭಕ್ತಿಯ ಪಾಠ ಹೇಳುತ್ತಿದ್ದಾರೆ. ಬಿಜೆಪಿ ಮತ್ತು ಅವರ ಪೂರ್ವಜರು ಎಂದಿಗೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿರಲಿಲ್ಲ. ಆದ್ದರಿಂದ ಇವರು ಕಾಂಗ್ರೆಸ್ನವರಿಗೆ ದೇಶಭಕ್ತಿಯ ಪಾಠ ಹೇಳಬಾರದು
ವಾಸ್ತವವಾಗಿ ‘ಭಾರತ ವಿರೋಧಿ’ ಮತ್ತು ‘ಧರ್ಮ ವಿರೋಧಿ’ ಬಿಜೆಪಿ. ಏಕೆಂದರೆ ನಾನು ಉತ್ತರಾಖಂಡದಲ್ಲಿ ಭಾಷಣ ಮಾಡಿದಾಗ ಬಿಜೆಪಿ ಕಾರ್ಯಕರ್ತರು ನಾನು ಭಾಷಣ ಮಾಡಿದ ವೇದಿಕೆಯನ್ನು ‘ಶುದ್ಧೀಕರಣ’ ಮಾಡಿದ್ದಾರೆ ಎಂದು ಹೇಳಿದರು.
ಬಿಜೆಪಿಗೆ ಅವರ ಗುರುಗಳು ಇದೇನು ಕಲಿಸಿದ್ದಾರೆಯೇ, ಸತ್ಯವೆಂದರೆ ಬಿಜೆಪಿ ನಾಯಕರೇ ದೇಶಭಕ್ತರಲ್ಲ. ಅವರು ಏಕತೆ ಮತ್ತು ಸಹೋದರತ್ವದ ಬಗ್ಗೆ ಮಾತನಾಡುವುದಿಲ್ಲ; ದೇಶವನ್ನು ಒಡೆಯುವ ಮತ್ತು ದ್ವೇಷ ಹರಡುವ ಮಾತುಗಳನ್ನು ಆಡುತ್ತಾರೆ. ಮೋದಿ-ಶಾ ಆಗಿರಲಿ ಅಥವಾ ಗೋವಾದ ಸಾವಂತ್ ಆಗಿರಲಿ... ಇವರ ನೀತಿಗಳು ದೇಶವನ್ನು ಸರ್ವನಾಶ ಮಾಡುವ ಕೆಲಸ ಮಾಡಿವೆ ಎಂದು ಆರೋಪಿಸಿದರು.
ಬಿಜೆಪಿ ‘ಕಳ್ಳರ ಸರ್ಕಾರ’. ಬಿಜೆಪಿ ಇತರ ಪಕ್ಷಗಳನ್ನು ಒಡೆದು, ಶಾಸಕರನ್ನು ಖರೀದಿಸಿ ತನ್ನ ಸರ್ಕಾರ ರಚಿಸುತ್ತದೆ ಮತ್ತು ನಂತರ ಜಗತ್ತಿಗೆ ‘ನೈತಿಕತೆಯ ಪಾಠ’ ಹೇಳುತ್ತದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ನ ವಂದೇ ಮಾತರಂ ಗೀತೆ ಹಾಡುವ ಬಗ್ಗೆ ಮುಂದಿನ ದಿನಗಳಲ್ಲಿಯೂ ತನ್ನ ಕಾರ್ಯಕ್ರಮಗಳಲ್ಲಿ ಇದೇ ಮಾದರಿಯನ್ನು ಮುಂದುವರಿಸುವುದಾಗಿ ಪಕ್ಷ ಸಂದೇಶ ನೀಡಲು ಪ್ರಯತ್ನಿಸಿದೆ ಎನ್ನಲಾಗುತ್ತಿದೆ. ಮುಂದಿನ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಈ ಕುರಿತು ಯಾವುದೇ ಅಧಿಕೃತ ನೀತಿಯನ್ನು ಪಕ್ಷ ಘೋಷಿಸಿರುವ ಬಗ್ಗೆ ಮಾಹಿತಿ ಹೊರಬಂದಿಲ್ಲ.
ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ‘ವಂದೇ ಮಾತರಂ’ ವಿವಾದದಿಂದ ರಾಜಕೀಯ ವಾತಾವರಣ ಮತ್ತಷ್ಟು ಕಾವೇರಿದೆ. ಈ ಪ್ರಕರಣದಲ್ಲಿ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ದೆಹಲಿ ಪೊಲೀಸರಿಗೆ ದೂರು ನೀಡಲಾಗಿದೆ. ಇಬ್ಬರು ನಾಯಕರ ವಿರುದ್ಧ ಎಫ್ಐಆರ್ ದಾಖಲಿಸಿ ಪ್ರಕರಣದ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.