

ಹಿಸಾರ್: ಗುರುವಾರ ಮಧ್ಯಾಹ್ನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಮುಖ್ಯ ದ್ವಾರದಲ್ಲಿ ಗ್ಯಾಂಗ್ಸ್ಟರ್ ವಿನೋದ್ ಪನ್ನು ಅಲಿಯಾಸ್ ಕಾನಾ ಎಂಬಾತನ ಮೇಲೆ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ನ್ಯಾಯಾಲಯದ ವಿಚಾರಣೆಯ ನಂತರ ಪನ್ನು ತನ್ನ ಸಹಚರರೊಂದಿಗೆ ಸಂಕೀರ್ಣದಿಂದ ಹೊರಬರುತ್ತಿದ್ದಾಗ ಆತನ ಮೇಲೆ ದಾಳಿ ನಡೆಸಲಾಗಿದೆ. ಹೊಂಚು ಹಾಕಿದ್ದ ಇಬ್ಬರು ದುಷ್ಕರ್ಮಿಗಳು ನ್ಯಾಯಾಲಯದ ದ್ವಾರದಲ್ಲಿ ಪನ್ನುವನ್ನು ಗುರಿಯಾಗಿಸಿಕೊಂಡು ಸತತ 10 ಗುಂಡುಗಳನ್ನು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ನಂತರ, ಸ್ಥಳದಲ್ಲಿ ದೊಡ್ಡ ಪೊಲೀಸ್ ಪಡೆ ನಿಯೋಜಿಸಲಾಗಿದ್ದು, ಪ್ರದೇಶವನ್ನು ಸುತ್ತುವರೆದಿದೆ. ಪನ್ನು ಹಿಸಾರ್ ಜಿಲ್ಲೆಯ ತುರಾನಾ ಗ್ರಾಮದ ನಿವಾಸಿಯಾಗಿದ್ದು ಆತನ ವಿರುದ್ಧ ಕೊಲೆ ಸೇರಿದಂತೆ 31 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದೆ. ಆತನ ಅಪರಾಧ ಚಟುವಟಿಕೆಗಳು ದೆಹಲಿ-ಎನ್ಸಿಆರ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಹರಡಿವೆ.