ಮಗನನ್ನು ರಕ್ಷಿಸಲು ಹೋಗಿ ಬೆಟ್ಟದಿಂದ ಕೆಳಗೆ ಬಿದ್ದ ತಂದೆ; ಇಬ್ಬರು ಇಲ್ಲದೆ ನಾನೇಕೆ ಅಂತ ತಾಯಿಯೂ ಆತ್ಮಹತ್ಯೆ, Video!

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಿಂದ ಹೃದಯವಿದ್ರಾವಕ ಘಟನೆ ನಡೆದಿದೆ. 18 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಬಂಡೆಯಿಂದ ಹಾರಿದ್ದಾನೆ. ಈ ವೇಳೆ ಮಗನನ್ನು ರಕ್ಷಿಸಲು ಹೋದಾ ಆತನ ತಂದೆಯೂ ಬೆಟ್ಟದಿಂದ ಬಿದ್ದು ಸಾವನ್ನಪ್ಪಿದ್ದಾನೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಮುಂಬೈ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಿಂದ ಹೃದಯವಿದ್ರಾವಕ ಘಟನೆ ನಡೆದಿದೆ. 18 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಬಂಡೆಯಿಂದ ಹಾರಿದ್ದಾನೆ. ಈ ವೇಳೆ ಮಗಳನ್ನು ರಕ್ಷಿಸಲು ಹೋದಾ ಆತನ ತಂದೆಯೂ ಬೆಟ್ಟದಿಂದ ಬಿದ್ದು ಸಾವನ್ನಪ್ಪಿದ್ದಾನೆ. ತನ್ನ ಮಗ ಮತ್ತು ಗಂಡ ಸಾವನ್ನಪ್ಪಿದ್ದನ್ನು ನೋಡಿ ಪತ್ನಿಯೂ ಹಾರಿ ಮೃತಪಟ್ಟಿದ್ದಾಳೆ.

ಮೂರು ಗಂಟೆಗಳ ಕಾಲ ನಡೆದ ಈ ಸಂಕಷ್ಟದ ಸಮಯದಲ್ಲಿ, ಪೋಷಕರು ಮತ್ತು ಇತರರು ಯುವಕನನ್ನು ಬೆಟ್ಟದಿಂದ ದೂರ ಹೋಗುವಂತೆ ಮನವೊಲಿಸಲು ಪ್ರಯತ್ನಿಸುತ್ತಿದ್ದರು. ಬೆಳಿಗ್ಗೆ 10 ಗಂಟೆಯ ಸುಮಾರಿಗೆ ದೇವ್ಲೈ ಪ್ರದೇಶದ ನಿವಾಸಿಯಾದ 18 ವರ್ಷದ ಯುವಕ ಬಂಡೆಯ ಅಂಚಿಗೆ ಹೋಗಿ ತನ್ನ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದಾಗ ಇದೆಲ್ಲವೂ ಪ್ರಾರಂಭವಾಯಿತು.

ಸಂಗ್ರಹ ಚಿತ್ರ
ತೃತೀಯಲಿಂಗಿಯಂತೆ ನಟಿಸಿ ಮನೆಗೆ ನುಗ್ಗಿದ ಪಾಪಿ; ದೃಷ್ಟಿ ದೋಷ ನಿವಾರಣೆ ನೆಪದಲ್ಲಿ 25 ವರ್ಷದ ಏರ್ ಹೋಸ್ಟೆಸ್ ಮೇಲೆ ಅತ್ಯಾಚಾರ

ಮಧ್ಯಾಹ್ನ 1 ಗಂಟೆ ಸುಮಾರಿಗೆ, ಅವನು ತನ್ನ ಮಗನನ್ನು ಹಿಡಿಯಲು ಪ್ರಯತ್ನಿಸಿದನು. ಆದರೆ ಇಬ್ಬರೂ ಸಮತೋಲನ ಕಳೆದುಕೊಂಡು ಬೆಟ್ಟದಿಂದ ಕೆಳಗೆ ಬಿದ್ದರು. ಕೆಲವು ಕ್ಷಣಗಳ ನಂತರ, ಭಯಭೀತರಾದ ತಾಯಿಯೂ ಬೆಟ್ಟದಿಂದ ಕೆಳಗೆ ಬಿದ್ದಳು. ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com