ಮುಂಬೈನಲ್ಲಿ ಘೋರ ದುರಂತ: 22 ಅಡಿ ಎತ್ತರದ ಗಣೇಶ ಮೂರ್ತಿ ಬಿದ್ದು ಇಬ್ಬರು ಸಾವು, ಐವರಿಗೆ ಗಾಯ; Video

ಮುಂಬೈನ ಭುಲೇಶ್ವರದ ಬಲರಾಮ್ ಮರ್ಚೆಂಟ್ ರಸ್ತೆಯಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ.
Two Killed, 5 Injured As 22-Foot Ganesh Idol Falls On Them In Mumbai
22 ಅಡಿ ಎತ್ತರದ ಗಣೇಶ ಮೂರ್ತಿ ಬಿದ್ದು ಇಬ್ಬರು ಸಾವು
Updated on

ಮುಂಬೈ: ದಕ್ಷಿಣ ಮುಂಬೈನಲ್ಲಿ ಶನಿವಾರ ರಾತ್ರಿ 'ಭುಲೇಶ್ವರಚ ರಾಜ' ಆಗಮನ ಸಮಾರಂಭದ ಸಂದರ್ಭದಲ್ಲಿ 22 ಅಡಿ ಎತ್ತರದ ಗಣೇಶ ಮೂರ್ತಿ ಬಿದ್ದು ಇಬ್ಬರು ಮೃತಪಟ್ಟಿದ್ದು, ಐದು ಮಂದಿ ಗಾಯಗೊಂಡಿದ್ದಾರೆ.

ಮುಂಬೈನ ಭುಲೇಶ್ವರದ ಬಲರಾಮ್ ಮರ್ಚೆಂಟ್ ರಸ್ತೆಯಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಕೆಲವು ಸಡಿಲವಾದ ನಟ್‌ಗಳು ಮತ್ತು ಬೋಲ್ಟ್‌ಗಳಿಂದಾಗಿ ಗಣೇಶ ಮೂರ್ತಿ ಬಿದ್ದಿದೆ.

Two Killed, 5 Injured As 22-Foot Ganesh Idol Falls On Them In Mumbai
ಬೆಂಗಳೂರು: ಹಲಸೂರು ಕೆರೆಯಲ್ಲಿ ಮುಂದುವರಿದ ಕಾಮಗಾರಿ; ಪರ್ಯಾಯ ಕೆರೆಗಳಲ್ಲಿ ಗಣೇಶ ವಿಸರ್ಜನೆ

ಮುಂಬೈ ಅಗ್ನಿಶಾಮಕ ದಳ, ಮುಂಬೈ ಪೊಲೀಸರು, ಸಂಚಾರ ಪೊಲೀಸರು, 108 ಆಂಬ್ಯುಲೆನ್ಸ್ ಸೇವೆ ಮತ್ತು ನಾಗರಿಕ ವಾರ್ಡ್ ಸಿಬ್ಬಂದಿಯನ್ನು ಘಟನಾ ಸ್ಥಳದಲ್ಲಿ ತಕ್ಷಣವೇ ನಿಯೋಜಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಯಿತು, ಅಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತಪಟ್ಟವರನ್ನು ಸಂಕೇತ್ ನೆವ್ಶೆ (33) ಮತ್ತು ಬ್ರಿಜೇಶ್ ಹೇಮಂತ್ ಜೋಶಿ (30) ಎಂದು ಗುರುತಿಸಲಾಗಿದೆ.

ಉಳಿದ ಐದು ಮಂದಿ ಗಾಯಗೊಂಡವರನ್ನು ವೈಭವ್ ಘೇನಂದ್(38) ಮತ್ತು ಪವನ್ ಚೌರಾಸಿಯಾ (25) ಎಂದು ಗುರುತಿಸಲಾಗಿದ್ದು, ಅವರು ಜಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಾವಣ್ಯ ಗನೇರ್ (5), ದಿವ್ಯಾ ಗನೇರ್ (7) ಮತ್ತು ಕುನಾಲ್ ಕಾಶಿದ್ (26) ಅವರನ್ನು ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com