

ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿರುವ ಕಾಶ್ಮೀರಿ ಪಂಡಿತ್ ಉದ್ಯೋಗಿಗಳಿಗೆ ಬೆದರಿಕೆ ಹಾಕಲಾಗಿರುವ ಮತ್ತೊಂದು ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು ಪೊಲೀಸರು ಮತ್ತು ಗುಪ್ತಚರ ಸಂಸ್ಥೆಗಳು ಸಮಗ್ರ ತನಿಖೆ ನಡೆಸಿ ಬೆದರಿಕೆಯ ಮೂಲವನ್ನು ಗುರುತಿಸುವಂತೆ ಕೇಳಿಕೊಂಡಿದ್ದಾರೆ.
ಶ್ರೀನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಬ್ದುಲ್ಲಾ, ಅಂತಹ ಬೆದರಿಕೆಗಳನ್ನು ಹಗುರವಾಗಿ ಪರಿಗಣಿಸಬಾರದು. ನೌಕರರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ಪೊಲೀಸ್ ಮತ್ತು ಭದ್ರತಾ ಸಂಸ್ಥೆಗಳ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಇದು ನಿಜವಾದ ಸಮಸ್ಯೆಯಾಗಿದೆ. ಅವರು ಬೆದರಿಕೆಗಳನ್ನು ಎದುರಿಸಬಾರದು. ಕಾನೂನು ಜಾರಿ ಸಂಸ್ಥೆಗಳು, ಪೊಲೀಸರು ಮತ್ತು ಗುಪ್ತಚರ ಸಂಸ್ಥೆಗಳು ಇದನ್ನು ಲಘುವಾಗಿ ಪರಿಗಣಿಸಬಾರದು. ಈ ಬೆದರಿಕೆಗಳು ಎಲ್ಲಿಂದ ಬರುತ್ತಿವೆ ಎಂಬುದನ್ನು ಕಂಡುಹಿಡಿಯಬೇಕು ಎಂದರು.