ಕಾಶ್ಮೀರಿ ಪಂಡಿತ ಉದ್ಯೋಗಿಗಳನ್ನು ಕೊಲ್ಲುವುದಾಗಿ ಮತ್ತೆ ಬೆದರಿಕೆ: ಸಮಗ್ರ ತನಿಖೆಗೆ ಸಿಎಂ ಒಮರ್ ಆಗ್ರಹ

ಕಾಶ್ಮೀರ ಕಣಿವೆಯಲ್ಲಿರುವ ಕಾಶ್ಮೀರಿ ಪಂಡಿತ್ ಉದ್ಯೋಗಿಗಳಿಗೆ ಬೆದರಿಕೆ ಹಾಕಲಾಗಿರುವ ಮತ್ತೊಂದು ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ.
Omar Abdullah
ಒಮರ್ ಅಬ್ದುಲ್ಲಾ
Updated on

ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿರುವ ಕಾಶ್ಮೀರಿ ಪಂಡಿತ್ ಉದ್ಯೋಗಿಗಳಿಗೆ ಬೆದರಿಕೆ ಹಾಕಲಾಗಿರುವ ಮತ್ತೊಂದು ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು ಪೊಲೀಸರು ಮತ್ತು ಗುಪ್ತಚರ ಸಂಸ್ಥೆಗಳು ಸಮಗ್ರ ತನಿಖೆ ನಡೆಸಿ ಬೆದರಿಕೆಯ ಮೂಲವನ್ನು ಗುರುತಿಸುವಂತೆ ಕೇಳಿಕೊಂಡಿದ್ದಾರೆ.

ಶ್ರೀನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಬ್ದುಲ್ಲಾ, ಅಂತಹ ಬೆದರಿಕೆಗಳನ್ನು ಹಗುರವಾಗಿ ಪರಿಗಣಿಸಬಾರದು. ನೌಕರರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ಪೊಲೀಸ್ ಮತ್ತು ಭದ್ರತಾ ಸಂಸ್ಥೆಗಳ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಇದು ನಿಜವಾದ ಸಮಸ್ಯೆಯಾಗಿದೆ. ಅವರು ಬೆದರಿಕೆಗಳನ್ನು ಎದುರಿಸಬಾರದು. ಕಾನೂನು ಜಾರಿ ಸಂಸ್ಥೆಗಳು, ಪೊಲೀಸರು ಮತ್ತು ಗುಪ್ತಚರ ಸಂಸ್ಥೆಗಳು ಇದನ್ನು ಲಘುವಾಗಿ ಪರಿಗಣಿಸಬಾರದು. ಈ ಬೆದರಿಕೆಗಳು ಎಲ್ಲಿಂದ ಬರುತ್ತಿವೆ ಎಂಬುದನ್ನು ಕಂಡುಹಿಡಿಯಬೇಕು ಎಂದರು.

Omar Abdullah
EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com