

ನವದೆಹಲಿ: 2026-27ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ರೈತರ ಆದಾಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ತಿಳಿಸಿದರು.
ಲೋಕಸಭೆಯಲ್ಲಿ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್, ಮತ್ಸ್ಯೋದ್ಯಮ ಬಲಪಡಿಸಲು 500 ಜಲಾಶಯಗಳು ಮತ್ತು ಅಮೃತ ಸರೋವರಗಳ ಸಮಗ್ರ ಅಭಿವೃದ್ಧಿಗಾಗಿ ಉಪ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಗುಣಮಟ್ಟದ ಉದ್ಯೋಗಾವಕಾಶಗಳನ್ನು ಒದಗಿಸಲು ಪಶು ಸಂಗೋಪನಾ ಕ್ಷೇತ್ರದಲ್ಲಿ ಉದ್ಯಮ ಶೀಲತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.
10 ಮಿಲಿಯನ್ ರೈತರು ಸೇರಿದಂತೆ ಒಟ್ಟು 30 ಮಿಲಿಯನ್ ಜನರಿಗೆ ಬೆಂಬಲ ನೀಡಲು ತೆಂಗು ಉತ್ಪಾದನೆ ಹೆಚ್ಚಿಸಲು ಮತ್ತು ಉತ್ಪಾದಕೆ ವೃದ್ದಿಸಲು ತೆಂಗು ಉತ್ತೇಜನ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಹೇಳಿದರು.
ಭಾರತೀಯ ಗೋಡಂಬಿ ಮತ್ತು ಭಾರತೀಯ ಕೋಕೋವನ್ನು 2030ರ ವೇಳೆಗೆ ಪ್ರೀಮಿಯಂ ಜಾಗತಿಕ ಬ್ರ್ಯಾಂಡ್ ಗಾಗಿ ಪರಿವರ್ತಿಸಲಾಗುವುದು, ಭಾರತೀಯ ಶ್ರೀಗಂಧದ ಪರಿಸರ ವ್ಯವಸ್ಥೆಯ ವೈಭವವನ್ನು ಮರು ಸ್ಥಾಪಿಸಲು ರಾಜ್ಯ ಸರ್ಕಾರಗಳೊಂದಿಗೆ ಪಾಲುದಾರಿಕೆ ಹೊಂದಲಾಗುವುದು ಎಂದರು.
Advertisement