ಡೆಹ್ರಾಡೂನ್‌: ಆಳವಾದ ಕಂದಕಕ್ಕೆ ಬಸ್ ಉರುಳಿಬಿದ್ದು ನಾಲ್ವರು ಸಾವು, Video

ಅಪಘಾತದ ಸಮಯದಲ್ಲಿ 30 ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಲವಾರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದರು.
Bus fell to deep gorge
ಆಳವಾದ ಕಂದಕಕ್ಕೆ ಉರುಳಿಬಿದ್ದ ಬಸ್
Updated on

ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್ ಜಿಲ್ಲೆಯ ಕಲ್ಸಿ ಪ್ರದೇಶದಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ಆಳವಾದ ಕಂದಕಕ್ಕೆ ಉರುಳಿ ಬಿದ್ದು ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ನೀಡಿದ ಪ್ರಾಥಮಿಕ ಮಾಹಿತಿಯ ಪ್ರಕಾರ, ಮೀನಕ್ ರಸ್ತೆಯ ಕುವಾನು ಬಳಿ ಈ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ 3 ಮಂದಿ ಸಾವು

ಅಪಘಾತದ ಸಮಯದಲ್ಲಿ 30 ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಲವಾರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದರು.

ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಕೈಗೊಳ್ಳಲು ದಕ್ಪಥರ್, ಚಕ್ರತಾ, ಮೋರಿ ಮತ್ತು ಟಿಯುನಿಯಲ್ಲಿ ಬೀಡುಬಿಟ್ಟಿರುವ SDRF ತಂಡಗಳನ್ನು ಅಪಘಾತದ ಸ್ಥಳಕ್ಕೆ ಕಳುಹಿಸಲಾಗಿದೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ಪಡೆದು ಅಗತ್ಯ ಸೂಚನೆಗಳನ್ನು ನೀಡಿದ್ದಾರೆ. ಜಿಲ್ಲಾಡಳಿತ ಮತ್ತು ಪೊಲೀಸರು ತಕ್ಷಣವೇ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಪ್ರಾರಂಭಿಸಿದ್ದಾರೆ.

ಡೆಹ್ರಾಡೂನ್ ನ ಕಲ್ಸಿ ಪ್ರದೇಶದಲ್ಲಿ ಹಿಮಾಚಲ ಸಾರಿಗೆ ಸಂಸ್ಥೆಯ ಬಸ್ ಅಪಘಾತಕ್ಕೀಡಾದ ಅತ್ಯಂತ ದುಃಖಕರ ಸುದ್ದಿ ನಮಗೆ ಬಂದಿದೆ. ನಾನು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಅಗತ್ಯ ಸೂಚನೆಗಳನ್ನು ನೀಡಿದ್ದೇನೆ.

ಜಿಲ್ಲಾಡಳಿತ ಮತ್ತು ಪೊಲೀಸರು ತಕ್ಷಣವೇ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಹತ್ತಿರದ ಎಲ್ಲಾ ವೈದ್ಯಕೀಯ ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದೆ. ಅಗತ್ಯವಿದ್ದರೆ, ಗಂಭೀರವಾಗಿ ಗಾಯಗೊಂಡ ಯಾವುದೇ ಪ್ರಯಾಣಿಕರನ್ನು ವಿಮಾನದಲ್ಲಿ ಸಾಗಿಸಿ ಸುಧಾರಿತ ವೈದ್ಯಕೀಯ ಕೇಂದ್ರಗಳಿಗೆ ದಾಖಲಿಸಲಾಗುವುದು ಎಂದು ಸಿಎಂ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com