ವಿಧಾನಸಭಾ ಚುನಾವಣಾ ಉಸ್ತುವಾರಿ ಹುದ್ದೆಯಿಂದ ಕೆಳಗಿಳಿದ ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ!

ಫೆಬ್ರುವರಿ 3 ರಂದು ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ತಮ್ಮ ನಿರ್ಧಾರದ ಬಗ್ಗೆ ತಮಿಳುನಾಡು ಬಿಜೆಪಿ ನಾಯಕತ್ವಕ್ಕೆ ತಿಳಿಸಿರುವುದಾಗಿ ಹೇಳಿದರು.
Annamalai
ಅಣ್ಣಾಮಲೈonline desk
Updated on

ಕೊಯಮತ್ತೂರು: ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು ತಮ್ಮ ತಂದೆಯ ಆರೋಗ್ಯ ಸ್ಥಿತಿಯನ್ನು ಉಲ್ಲೇಖಿಸಿ, ಚುನಾವಣೆ ನಡೆಯಲಿರುವ ತಮಿಳುನಾಡಿನ ಆರು ವಿಧಾನಸಭಾ ಕ್ಷೇತ್ರಗಳ ಚುನಾವಣಾ ಉಸ್ತುವಾರಿ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ.

ಫೆಬ್ರುವರಿ 3 ರಂದು ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ತಮ್ಮ ನಿರ್ಧಾರದ ಬಗ್ಗೆ ತಮಿಳುನಾಡು ಬಿಜೆಪಿ ನಾಯಕತ್ವಕ್ಕೆ ತಿಳಿಸಿರುವುದಾಗಿ ಹೇಳಿದರು.

'ನನ್ನ ತಂದೆಯೊಂದಿಗೆ ಇರಬೇಕಾಗಿರುವುದರಿಂದ ನನ್ನ ಅಲಭ್ಯತೆ ಬಗ್ಗೆ ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್ ಸೇರಿದಂತೆ ಪಕ್ಷದ ನಾಯಕರಿಗೆ ನಾನು ತಿಳಿಸಿದ್ದೇನೆ. ಡಯಾಲಿಸಿಸ್‌ಗೆ ಒಳಗಾಗಿರುವ ನನ್ನ ತಂದೆಯನ್ನು ನಾನು ನೋಡಿಕೊಳ್ಳಬೇಕು. ನಾನು ಅದನ್ನು ನನ್ನ ಮೊದಲ ಕರ್ತವ್ಯವೆಂದು ಪರಿಗಣಿಸುತ್ತೇನೆ. ಈ ಬಾರಿ ನಾನು ಪ್ರಯಾಣ ಮಾಡಲು ಸಾಧ್ಯವಿಲ್ಲ ಎಂದು ನಾನು ಅವರಿಗೆ (ಬಿಜೆಪಿ ನಾಯಕತ್ವಕ್ಕೆ) ಹೇಳಿದ್ದೇನೆ. ಪಕ್ಷವು ನನ್ನ ಮನವಿಯನ್ನು ಸ್ವೀಕರಿಸುತ್ತದೆ ಮತ್ತು ನನಗೆ ನಿಯೋಜಿಸಲಾದ ಕ್ಷೇತ್ರಗಳನ್ನು ಇತರರಿಗೆ ಮರುಹಂಚಿಕೆ ಮಾಡುತ್ತದೆ ಎಂದು ನಾನು ಭಾವಿಸುತ್ತೇನೆ' ಎಂದು ಅವರು ಹೇಳಿದರು.

ಅಣ್ಣಾಮಲೈ ಅವರನ್ನು ತಮಿಳುನಾಡಿನ ಸಿಂಗನಲ್ಲೂರು, ವಿರುಗಂಬಾಕ್ಕಂ (ಚೆನ್ನೈ), ಕಾರೈಕುಡಿ, ಶ್ರೀವೈಕುಂಟಂ, ಮಧುರೈ (ದಕ್ಷಿಣ) ಮತ್ತು ಪದ್ಮನಾಭಪುರಂ (ಕನ್ಯಾಕುಮಾರಿ) ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಉಸ್ತುವಾರಿಯಾಗಿ ನೇಮಿಸಲಾಗಿತ್ತು.

Annamalai
ತಮಿಳುನಾಡಿನ ಆಳುವ ಡಿಎಂಕೆಗೆ ಠಕ್ಕರ್‌ ಕೊಡುವವರು ಯಾರು..? (ನೇರ ನೋಟ)

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com