ಮಧ್ಯಪ್ರದೇಶದಲ್ಲೂ ಎನ್‌ಕೌಂಟರ್: ತಲೆಗೆ 25 ಲಕ್ಷ ಬಹುಮಾನ ಹೊಂದಿದ್ದ ಕುಖ್ಯಾತ ನಕ್ಸಲ್ ಪ್ರಭಾಕರ್ ಸೇರಿ 7 ನಕ್ಸಲರ ಸಾವು

ಮಹಾರಾಷ್ಟ್ರದ ನಕ್ಸಲ್ ಪೀಡಿತ ಗಡ್ಚಿರೋಲಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಪ್ರಮುಖ ಯಶಸ್ಸನ್ನು ಸಾಧಿಸಿವೆ. 25 ಲಕ್ಷ ಬಹುಮಾನ ಹೊಂದಿದ್ದ ತೆಲಂಗಾಣದ ಕುಖ್ಯಾತ ನಕ್ಸಲ್ ಪ್ರಭಾಕರ್ ಅಲಿಯಾಸ್ ಲೋಕೇಟಿ ಚಂದರ್ ರಾವ್ ಪೊಲೀಸರೊಂದಿಗಿನ ಎನ್ಕೌಂಟರ್ನಲ್ಲಿ ಸಾವನ್ನಪ್ಪಿದ್ದಾರೆ.
Indian Army
ಭಾರತೀಯ ಸೇನೆ
Updated on

ಮಹಾರಾಷ್ಟ್ರದ ನಕ್ಸಲ್ ಪೀಡಿತ ಗಡ್ಚಿರೋಲಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಪ್ರಮುಖ ಯಶಸ್ಸನ್ನು ಸಾಧಿಸಿವೆ. 25 ಲಕ್ಷ ಬಹುಮಾನ ಹೊಂದಿದ್ದ ತೆಲಂಗಾಣದ ಕುಖ್ಯಾತ ನಕ್ಸಲ್ ಪ್ರಭಾಕರ್ ಅಲಿಯಾಸ್ ಲೋಕೇಟಿ ಚಂದರ್ ರಾವ್ ಪೊಲೀಸರೊಂದಿಗಿನ ಎನ್ಕೌಂಟರ್ನಲ್ಲಿ ಸಾವನ್ನಪ್ಪಿದ್ದಾರೆ. ಪೊಲೀಸರ ಪ್ರಕಾರ, ಈ ಕಾರ್ಯಾಚರಣೆಯಲ್ಲಿ ಒಟ್ಟು ಏಳು ನಕ್ಸಲರು ಸಾವನ್ನಪ್ಪಿದ್ದಾರೆ. ಪ್ರಭಾಕರ್ ನಕ್ಸಲ್ ಸಂಘಟನೆಯ ಉನ್ನತ ಕೇಡರ್ ನಾಯಕರಾಗಿದ್ದು, ಮಹಾರಾಷ್ಟ್ರ-ತೆಲಂಗಾಣ ಗಡಿಯಲ್ಲಿ ಮಾವೋವಾದಿ ಚಟುವಟಿಕೆಗಳನ್ನು ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಭಾಕರ್ ದೀರ್ಘಕಾಲದವರೆಗೆ ಭದ್ರತಾ ಪಡೆಗಳ ಹಿಟ್ ಲಿಸ್ಟ್‌ನಲ್ಲಿದ್ದರು. ಹಲವಾರು ಗಂಭೀರ ನಕ್ಸಲ್ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ, ಗಡ್ಚಿರೋಲಿ ಪೊಲೀಸರ ವಿಶೇಷ ನಕ್ಸಲೈಟ್ ವಿರೋಧಿ ಘಟಕ C-60ನ 14 ತಂಡಗಳು ನಾರಾಯಣಪುರ-ಗಡ್ಚಿರೋಲಿ ಗಡಿಯಲ್ಲಿರುವ ಫೋಡೆವಾಡಾ ಗ್ರಾಮದ ಬಳಿ ಸ್ಥಳಾಂತರಗೊಂಡಿತ್ತು. ಕಳೆದ ಮೂರು ದಿನಗಳಿಂದ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವಿನ ಎನ್ಕೌಂಟರ್ ನಡೆಯುತ್ತಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಾಡಿನಲ್ಲಿ ನಡೆದ ಬೃಹತ್ ಶೋಧ ಮತ್ತು ಸುತ್ತುವರಿದ ಕಾರ್ಯಾಚರಣೆಯ ಸಮಯದಲ್ಲಿ, ನಕ್ಸಲರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ್ದು ಈ ವೇಳೆ ನಡೆದ ಕಾರ್ಯಾಚರಣೆಯಲ್ಲಿ ಏಳು ಮಾವೋವಾದಿಗಳು ಸಾವನ್ನಪ್ಪಿದರು. ಹತ್ಯೆಯಾದ ಏಳು ನಕ್ಸಲರ ಪೈಕಿ ಮೂವರು ಮಹಿಳೆಯರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ರಾತ್ರಿ ಮೂವರು ನಕ್ಸಲರ ಶವಗಳು ಪತ್ತೆಯಾಗಿದ್ದು, ಶುಕ್ರವಾರ ಆ ಪ್ರದೇಶದಲ್ಲಿ ಇನ್ನೂ ನಾಲ್ಕು ಶವಗಳು ಪತ್ತೆಯಾಗಿವೆ. ಹೆಚ್ಚಿನ ನಕ್ಸಲರು ಅಡಗಿಕೊಂಡಿರುವ ಶಂಕೆ ವ್ಯಕ್ತವಾಗಿರುವುದರಿಂದ, ಈ ಪ್ರದೇಶದಲ್ಲಿ ಇನ್ನೂ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

Indian Army
ಮಣಿಪುರ: ನೂತನ ಉಪಮುಖ್ಯಮಂತ್ರಿ ವಿರುದ್ಧ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಪೊಲೀಸ್ ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಗಡ್ಚಿರೋಲಿಯ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಕಾರ್ಯಾಚರಣೆಯ ಸಮಯದಲ್ಲಿ, ನಕ್ಸಲರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದರು, ಇದು ಪ್ರತಿದಾಳಿ ಎನ್‌ಕೌಂಟರ್‌ಗೆ ಕಾರಣವಾಯಿತು. ಹಲವಾರು ಗಂಟೆಗಳ ಕಾಲ ನಡೆದ ಈ ಕಾರ್ಯಾಚರಣೆಯಲ್ಲಿ ಏಳು ಮಾವೋವಾದಿಗಳು ಸಾವನ್ನಪ್ಪಿದರು. ಘಟನಾ ಸ್ಥಳದಿಂದ ಮೂರು ಎಕೆ-47 ರೈಫಲ್‌ಗಳು, ಒಂದು ಎಸ್‌ಎಲ್‌ಆರ್ ರೈಫಲ್ ಮತ್ತು ಒಂದು .303 ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಭಾಕರ್ ಜೊತೆಗೆ ಹತ್ಯೆಯಾದ ಇತರ ನಕ್ಸಲರ ಗುರುತು ಇನ್ನೂ ಪತ್ತೆಯಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com