ಭೀಕರ ಅಗ್ನಿಅವಘಡ: ರೈಲು ನಿಲ್ದಾಣದ ಪಾರ್ಕಿಂಗ್ ನಲ್ಲಿದ್ದ 500 ದ್ವಿಚಕ್ರವಾಹನ ಸುಟ್ಟು ಭಸ್ಮ! Video

ರೈಲ್ವೆ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಸಂಭವಿಸಿದ ಬೆಂಕಿಯ ನಂತರ ಸುಮಾರು 500 ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ಅಗ್ನಿಶಾಮಕ ಮತ್ತು ರಕ್ಷಣಾ ಸೇವಾ ಅಧಿಕಾರಿಗಳು ತಿಳಿಸಿದ್ದಾರೆ.
500 two-wheelers gutted in fire at Thrissur railway station parking area
ತ್ರಿಶೂರ್ ರೈಲು ನಿಲ್ದಾಣದ ಪಾರ್ಕಿಂಗ್ ನಲ್ಲಿದ್ದ 500 ದ್ವಿಚಕ್ರವಾಹನಗಳು ಸುಟ್ಟು ಭಸ್ಮ
Updated on

ತ್ರಿಶೂರ್: ಕೇರಳದ ತ್ರಿಶೂರ್ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಪಾರ್ಕಿಂಗ್ ಪ್ರದೇಶದಲ್ಲಿದ್ದ ಸುಮಾರು 500 ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ.

ಭಾನುವಾರ ಇಲ್ಲಿನ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಸಂಭವಿಸಿದ ಬೆಂಕಿಯ ನಂತರ ಸುಮಾರು 500 ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ಅಗ್ನಿಶಾಮಕ ಮತ್ತು ರಕ್ಷಣಾ ಸೇವಾ ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಿಗ್ಗೆ 6.20 ರ ಸುಮಾರಿಗೆ ಪೇಯ್ಡ್-ಪಾರ್ಕಿಂಗ್ ಶೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಳಿಗ್ಗೆ 6.40 ರ ಸುಮಾರಿಗೆ ತುರ್ತು ಕರೆ ಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕವರ್‌ನೊಂದಿಗೆ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನದ ಮೇಲೆ ಬಿದ್ದ ವಿದ್ಯುತ್ ತಂತಿಯಿಂದ ಬಂದ ಕಿಡಿ ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ. ಶೆಡ್‌ನಲ್ಲಿ ಸುಮಾರು 500 ದ್ವಿಚಕ್ರ ವಾಹನಗಳು ನಿಂತಿದ್ದವು ಮತ್ತು ಅವುಗಳಲ್ಲಿ ಹೆಚ್ಚಿನವು ಸುಟ್ಟು ಭಸ್ಮವಾಗಿವೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.

500 two-wheelers gutted in fire at Thrissur railway station parking area
ಒಡಿಶಾ: ಕಲ್ಲು ಗಣಿಗಾರಿಕೆ ವೇಳೆ ಭಾರೀ ಕುಸಿತ; ಹಲವರ ಸಾವು, ರಕ್ಷಣಾ ಕಾರ್ಯಾಚರಣೆ ಆರಂಭ

ವಿಚಾರ ತಿಳಿದಕೂಡಲೇ ಐದು ಅಗ್ನಿಶಾಮಕ ದಳಗಳನ್ನು ನಿಯೋಜಿಸಲಾಯಿತು ಮತ್ತು ಬೆಳಿಗ್ಗೆ 7.45 ರ ಸುಮಾರಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಬೆಂಕಿ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್‌ಗಳಿಗೆ ಹರಡದಂತೆ ಮತ್ತು ಹೆಚ್ಚಿನ ಹಾನಿಯಾಗದಂತೆ ತಡೆಯಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂತೆಯೇ ಅಗ್ನಿ ಅವಘಡ ಸಂಭವಿಸಿದ ಸ್ಥಳದ ಬಳಿ ರೈಲ್ವೆ ಹಳಿಯಲ್ಲಿ ಒಂದು ಲೋಕೋಮೋಟಿವ್ ನಿಲ್ಲಿಸಲಾಗಿದ್ದರೂ, ಅದಕ್ಕೆ ಯಾವುದೇ ದೊಡ್ಡ ಹಾನಿಯಾಗಿಲ್ಲ ಎಂದು ರೈಲ್ವೆ ದೃಢಪಡಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ದ್ವಿಚಕ್ರ ವಾಹನಗಳನ್ನು ಹೊರತುಪಡಿಸಿ, ಟಿನ್ ಶೀಟ್‌ಗಳಿಂದ ಆವೃತವಾದ ಸಂಪೂರ್ಣ ಶೆಡ್ ಬೆಂಕಿಯಲ್ಲಿ ಹಾನಿಯಾಗಿದೆ. ಬೆಂಕಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಪೊಲೀಸರು ಮತ್ತು ರೈಲ್ವೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಅಗ್ನಿಶಾಮಕ ಘಟನೆಗೆ ಸಂಬಂಧಿಸಿದಂತೆ ತ್ರಿಶೂರ್ ಪಶ್ಚಿಮ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಎಫ್‌ಐಆರ್ ಪ್ರಕಾರ, ಸುಮಾರು 500 ದ್ವಿಚಕ್ರ ವಾಹನಗಳು ಬೆಂಕಿಯಲ್ಲಿ ಸುಟ್ಟುಹೋಗಿವೆ, ಜೊತೆಗೆ ರೈಲ್ವೆ ನಿಲ್ದಾಣದ ಪಶ್ಚಿಮ ಭಾಗದಲ್ಲಿ ಪಾರ್ಕಿಂಗ್ ಸೌಲಭ್ಯವನ್ನು ನಿರ್ವಹಿಸುವ ಗುತ್ತಿಗೆಯನ್ನು ಹೊಂದಿರುವ ಅಶ್ವಥಿ ಎಂಟರ್‌ಪ್ರೈಸಸ್‌ಗೆ ಸೇರಿದ ಪಾರ್ಕಿಂಗ್ ಶುಲ್ಕ ಮುದ್ರಣ ಯಂತ್ರವೂ ಸುಟ್ಟುಹೋಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com