ಛತ್ತೀಸ್‌ಗಢದಲ್ಲಿ ಮಹಾ ಶರಣಾಗತಿ: 18 ಮಹಿಳೆಯರು ಸೇರಿ 63 ನಕ್ಸಲರು ಪೊಲೀಸರಿಗೆ ಶರಣು!

ರಾಜ್ಯ ಸರ್ಕಾರದ ಶರಣಾಗತಿ ಮತ್ತು ಪುನರ್ವಸತಿ ನೀತಿಯಿಂದ ನಾವು ಪ್ರಭಾವಿತರಾಗಿದ್ದೇವೆ ಎಂದು ನಕ್ಸಲರು ಹೇಳಿದ್ದಾರೆ.
63 Naxalites, including 36 with total bounty of over Rs 1.19 crore, surrender in Chhattisgarh
63 ನಕ್ಸಲರು ಪೊಲೀಸರಿಗೆ ಶರಣು
Updated on

ದಾಂತೆವಾಡ: ಛತ್ತೀಸ್‌ಗಢದ ದಾಂತೆವಾಡ ಜಿಲ್ಲೆಯಲ್ಲಿ ಶುಕ್ರವಾರ ಸುಮಾರು 63 ನಕ್ಸಲರು ಪೊಲೀಸರಿಗೆ ಶರಣಾಗಿದ್ದಾರೆ. ಅವರಲ್ಲಿ 36 ಮಂದಿ ತಲೆಗೆ 1.19 ಕೋಟಿಗೂ ಹೆಚ್ಚು ಮೊತ್ತದ ಬಹುಮಾನ ಹೊಂದಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

'ಪೂನಾ ಮಾರ್ಗೆಮ್'(ಪುನರ್ವಸತಿಯಿಂದ ಸಾಮಾಜಿಕ ಪುನರ್ವಸತಿವರೆಗೆ) ಉಪಕ್ರಮದಡಿಯಲ್ಲಿ 18 ಮಹಿಳೆಯರು ಸೇರಿದಂತೆ 63 ನಕ್ಸಲರು ಇಂದು ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್) ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ ಎಂದು ದಾಂತೆವಾಡ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ರೈ ಹೇಳಿದ್ದಾರೆ.

ರಾಜ್ಯ ಸರ್ಕಾರದ ಶರಣಾಗತಿ ಮತ್ತು ಪುನರ್ವಸತಿ ನೀತಿಯಿಂದ ನಾವು ಪ್ರಭಾವಿತರಾಗಿದ್ದೇವೆ ಎಂದು ನಕ್ಸಲರು ಹೇಳಿದ್ದಾರೆ.

63 Naxalites, including 36 with total bounty of over Rs 1.19 crore, surrender in Chhattisgarh
ಛತ್ತೀಸ್‌ಗಢ: ವರ್ಷದ ಆರಂಭದಲ್ಲೇ ಭರ್ಜರಿ ಭೇಟೆ: 'ಎನ್‌ಕೌಂಟರ್‌' ನಲ್ಲಿ 14 ನಕ್ಸಲೀಯರ ಹತ್ಯೆ!

ಶರಣಾದ ನಕ್ಸಲರು, ದಕ್ಷಿಣ ಬಸ್ತಾರ್ ವಿಭಾಗ, ಪಶ್ಚಿಮ ಬಸ್ತಾರ್ ವಿಭಾಗ, ರಾಜ್ಯದ ಮಾಡ್ ವಿಭಾಗ ಮತ್ತು ಒಡಿಶಾದ ಗಡಿ ಪ್ರದೇಶಗಳಲ್ಲಿ ಸಕ್ರಿಯರಾಗಿದ್ದರು ಎಂದು ಎಸ್ಪಿ ತಿಳಿಸಿದ್ದಾರೆ.

ಏಳು ಮಂದಿಗೆ ತಲೆಗೆ ತಲಾ 8 ಲಕ್ಷ ರೂ. ಬಹುಮಾನವಿತ್ತು ಎಂದು ಅವರು ಹೇಳಿದ್ದಾರೆ.

ಶರಣಾದ ಎಲ್ಲಾ 63 ನಕ್ಸಲರಿಗೆ ತಲಾ 50,000 ರೂ.ಗಳ ತಕ್ಷಣದ ಸಹಾಯವನ್ನು ನೀಡಲಾಗುವುದು ಮತ್ತು ಸರ್ಕಾರದ ನೀತಿಯ ಪ್ರಕಾರ ಅವರಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಜನವರಿ 7 ರಂದು ನೆರೆಯ ಸುಕ್ಮಾ ಜಿಲ್ಲೆಯಲ್ಲಿ 26 ನಕ್ಸಲರು ಶರಣಾಗಿದ್ದರು. 2025 ರಲ್ಲಿ ರಾಜ್ಯದಲ್ಲಿ 1,500 ಕ್ಕೂ ಹೆಚ್ಚು ನಕ್ಸಲರು ಶರಣಾಗಿದ್ದಾರೆ. ಮಾರ್ಚ್ 31, 2026 ರೊಳಗೆ ದೇಶದಿಂದ ನಕ್ಸಲಿಸಂ ಅನ್ನು ನಿರ್ಮೂಲನೆ ಮಾಡಲು ಕೇಂದ್ರ ಸರ್ಕಾರ ಸಂಕಲ್ಪಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com