I-PAC ಮೇಲೆ ಇಡಿ ದಾಳಿ ಖಂಡಿಸಿ ಅಮಿತ್ ಶಾ ಕಚೇರಿ ಹೊರಗೆ ಪ್ರತಿಭಟನೆ: ಟಿಎಂಸಿ ಸಂಸದರ ಬಂಧನ; Video

ಚುನಾವಣೆಗೆ ಮುನ್ನ ವಿರೋಧ ಪಕ್ಷಗಳನ್ನು ಬೆದರಿಸಲು ಬಿಜೆಪಿ ನೇತೃತ್ವದ ಸರ್ಕಾರವು ಕೇಂದ್ರ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ ಡೆರೆಕ್ ಒ'ಬ್ರೇನ್, ಮಹುವಾ ಮೊಯಿತ್ರಾ, ಸತಾಬ್ದಿ ರಾಯ್ ಮತ್ತು ಕೀರ್ತಿ ಆಜಾದ್ ಸೇರಿದಂತೆ ಟಿಎಂಸಿ ಸಂಸದರು ಘೋಷಣೆಗಳನ್ನು ಕೂಗಿದರು.
Police detain TMC MP Mahua Moitra as party MPs protest outside Union Home Minister Amit Shah's office against ED raids on the I-PAC office in Kolkata
ಕೋಲ್ಕತ್ತಾದ ಐ-ಪಿಎಸಿ ಕಚೇರಿಯ ಮೇಲೆ ಜಾರಿ ನಿರ್ದೇಶನಾಲಯದ ದಾಳಿಯನ್ನು ಖಂಡಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಚೇರಿಯ ಹೊರಗೆ ಪಕ್ಷದ ಸಂಸದರು ಪ್ರತಿಭಟನೆ ನಡೆಸುತ್ತಿದ್ದಂತೆ ಪೊಲೀಸರು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಬಂಧಿಸಿದರು.
Updated on

ರಾಜಕೀಯ ಸಲಹಾ ಸಂಸ್ಥೆ I-PACಯ ಕೋಲ್ಕತ್ತಾ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿದ ದಾಳಿಯನ್ನು ವಿರೋಧಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಚೇರಿಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದ ಹಲವಾರು ತೃಣಮೂಲ ಕಾಂಗ್ರೆಸ್ (TMC) ಸಂಸದರನ್ನು ದೆಹಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ನಿನ್ನೆ ನಡೆದ ದಾಳಿಯ ಸಮಯದಲ್ಲಿ ಮಮತಾ ಬ್ಯಾನರ್ಜಿ ಅವರ ಹಸ್ತಕ್ಷೇಪದಿಂದ ಉಂಟಾದ ಉದ್ವಿಗ್ನತೆಯ ನಡುವೆಯೇ ಈ ಪ್ರತಿಭಟನೆ ನಡೆದಿದೆ.

ಚುನಾವಣೆಗೆ ಮುನ್ನ ವಿರೋಧ ಪಕ್ಷಗಳನ್ನು ಬೆದರಿಸಲು ಬಿಜೆಪಿ ನೇತೃತ್ವದ ಸರ್ಕಾರವು ಕೇಂದ್ರ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ ಡೆರೆಕ್ ಒ'ಬ್ರೇನ್, ಮಹುವಾ ಮೊಯಿತ್ರಾ, ಸತಾಬ್ದಿ ರಾಯ್ ಮತ್ತು ಕೀರ್ತಿ ಆಜಾದ್ ಸೇರಿದಂತೆ ಟಿಎಂಸಿ ಸಂಸದರು ಘೋಷಣೆಗಳನ್ನು ಕೂಗಿದರು. ಅಲ್ಲಿಗೆ ಆಗಮಿಸಿದ ಪೊಲೀಸರು ಸಂಸದರನ್ನು ಎತ್ತಿಕೊಂಡು ವ್ಯಾನ್‌ಗಳಲ್ಲಿ ಕರೆದೊಯ್ದರು. ಡೆರೆಕ್ ಒ'ಬ್ರೇನ್ ಅವರನ್ನು ಎಳೆದುಕೊಂಡು ಹೋಗುವಾಗ, ಇಲ್ಲಿ ಸಂಸದರಿಗೆ ಏನಾಗುತ್ತಿದೆ ಎಂದು ನೀವು ನೋಡುತ್ತಿದ್ದೀರಿ ಎಂದು ಹೇಳಿದರೆ, ಮಹುವಾ ಮೊಯಿತ್ರಾ, ನಾವು ಬಿಜೆಪಿಯನ್ನು ಸೋಲಿಸುತ್ತೇವೆ. ದೆಹಲಿ ಪೊಲೀಸರು ಚುನಾಯಿತ ಸಂಸದರನ್ನು ಹೇಗೆ ನಡೆಸಿಕೊಳ್ಳುತ್ತಿದ್ದಾರೆ ಎಂಬುದನ್ನು ದೇಶ ನೋಡುತ್ತಿದೆ ಎಂದು ಹೇಳಿದರು.

ಚುನಾವಣೆಯ ಸಮಯದಲ್ಲಿ ಫಲಿತಾಂಶಗಳ ಮೇಲೆ ಪ್ರಭಾವ ಬೀರಲು ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ನಿಯೋಜಿಸುತ್ತದೆ ಎಂದು ಸತಾಬ್ದಿ ರಾಯ್ ಆರೋಪಿಸಿದರು. ಚುನಾವಣೆಯ ಸಮಯದಲ್ಲಿ ಗೆಲ್ಲಲು ಇಡಿ, ಸಿಬಿಐ ತಂಡಗಳನ್ನು ಕಳುಹಿಸುತ್ತಾರೆ, ಆದರೆ ಅವರು ಚುನಾವಣೆಯಲ್ಲಿ ಗೆಲ್ಲುವುದಿಲ್ಲ ಎಂದರು. ಕೀರ್ತಿ ಆಜಾದ್ ಈ ದಾಳಿಯನ್ನು ಪ್ರಜಾಪ್ರಭುತ್ವ ವಿರೋಧಿ ರೀತಿಯಲ್ಲಿ ಚುನಾವಣೆಗಳನ್ನು ಗೆಲ್ಲುವ ಪ್ರಯತ್ನ" ಎಂದು ಆರೋಪಿಸಿದರು. ಬಿಜೆಪಿ ಈ ರೀತಿ ಚುನಾವಣೆಗಳನ್ನು ಗೆಲ್ಲುವುದಿಲ್ಲ ಎಂದರು.

ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಐ-ಪಿಎಸಿ ಕಚೇರಿಗಳು ಮತ್ತು ಅದರ ನಿರ್ದೇಶಕ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಇಡಿ ದಾಳಿ ನಡೆಸಿದ ಸಂದರ್ಭದಲ್ಲಿ ಹಸ್ತಕ್ಷೇಪ ಮಾಡಿದ ನಂತರ ಘರ್ಷಣೆ ಉಲ್ಬಣಗೊಂಡಿತು. ಹಾರ್ಡ್ ಡಿಸ್ಕ್‌ಗಳು, ಅಭ್ಯರ್ಥಿಗಳ ಪಟ್ಟಿಗಳು ಮತ್ತು ಕಾರ್ಯತಂತ್ರದ ದಾಖಲೆಗಳು ಸೇರಿದಂತೆ ಟಿಎಂಸಿಗೆ ಸಂಬಂಧಿಸಿದ ಸೂಕ್ಷ್ಮ ವಸ್ತುಗಳನ್ನು ಕೇಂದ್ರ ಸಂಸ್ಥೆ ವಶಪಡಿಸಿಕೊಂಡಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದರು.

ಪಕ್ಷದ ಹಾರ್ಡ್ ಡಿಸ್ಕ್, ಅಭ್ಯರ್ಥಿಗಳ ಪಟ್ಟಿಯನ್ನು ಸಂಗ್ರಹಿಸುವುದು ಇಡಿ ಅಮಿತ್ ಶಾ ಅವರ ಕರ್ತವ್ಯವೇ? ದೇಶವನ್ನು ರಕ್ಷಿಸಲು ಸಾಧ್ಯವಾಗದ ಗೃಹ ಸಚಿವರು ನನ್ನ ಎಲ್ಲಾ ಪಕ್ಷದ ದಾಖಲೆಗಳನ್ನು ತೆಗೆದುಕೊಂಡು ಹೋಗುತ್ತಿದ್ದಾರೆ, ಅಮಿತ್ ಶಾ ಅವರಿಗೆ ಪಶ್ಚಿಮ ಬಂಗಾಳಕ್ಕೆ ಬಂದು ಪ್ರಜಾಸತ್ತಾತ್ಮಕವಾಗಿ ಹೋರಾಡಿ ಎಂದು ಮಮತಾ ಬ್ಯಾನರ್ಜಿ ಸವಾಲು ಹಾಕಿದರು.

ಐ-ಪಿಎಸಿ ಖಾಸಗಿ ಸಂಸ್ಥೆಯಲ್ಲ, ಆದರೆ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (AITC) ಗಾಗಿ ಕೆಲಸ ಮಾಡುವ ಅಧಿಕೃತ ತಂಡ ಎಂದು ಮಮತಾ ಬ್ಯಾನರ್ಜಿ ಸಮರ್ಥಿಸಿಕೊಂಡರು. ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಪಕ್ಷದ ಕಾರ್ಯತಂತ್ರಕ್ಕೆ ಸಂಬಂಧಿಸಿದ ಸೂಕ್ಷ್ಮ ದಾಖಲೆಗಳನ್ನು ಇಡಿ ವಶಪಡಿಸಿಕೊಂಡಿದೆ ಎಂದು ಆರೋಪಿಸಿದರು.

ಮಮತಾ ಅವರ ಆರೋಪಗಳನ್ನು ವಿರೋಧಿಸಿದ ಇಡಿ, ಶೋಧದ ಸಮಯದಲ್ಲಿ ಅವರು ಪ್ರತೀಕ್ ಜೈನ್ ಅವರ ನಿವಾಸಕ್ಕೆ ಪ್ರವೇಶಿಸಿ ಭೌತಿಕ ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಸಾಧನಗಳು ಸೇರಿದಂತೆ ಪ್ರಮುಖ ಪುರಾವೆಗಳನ್ನು ತೆಗೆದುಹಾಕಿದ್ದಾರೆ ಎಂದು ಹೇಳಿದರು. ಅವರ ಬೆಂಗಾವಲು ಪಡೆಯು ಐ-ಪಿಎಸಿ ಕಚೇರಿಗೆ ಹೋಯಿತು. ಅಲ್ಲಿ ಮಮತಾ ಬ್ಯಾನರ್ಜಿ ಅವರ ಸಹಾಯಕರು ಮತ್ತು ರಾಜ್ಯ ಪೊಲೀಸ್ ಸಿಬ್ಬಂದಿ ಭೌತಿಕ ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಸಾಕ್ಷ್ಯಗಳನ್ನು ಬಲವಂತವಾಗಿ ತೆಗೆದುಹಾಕಿದರು" ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶೋಧಗಳು ಸಾಕ್ಷ್ಯಾಧಾರಗಳ ಆಧಾರದ ಮೇಲೆ ನಡೆದಿವೆ. ಯಾವುದೇ ರಾಜಕೀಯ ಸಂಸ್ಥೆಯನ್ನು ಗುರಿಯಾಗಿಸಿಕೊಂಡಿಲ್ಲ ಮತ್ತು ಚುನಾವಣೆಗಳಿಗೆ ಸಂಬಂಧಿಸಿಲ್ಲ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ. ಈ ದಾಳಿಗಳು ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ನಿಯಮಿತ ಹಣ ವರ್ಗಾವಣೆ ಕ್ರಮದ ಭಾಗವಾಗಿದ್ದು, ಅನುಪ್ ಮಾಝಿ ನೇತೃತ್ವದ ಕಲ್ಲಿದ್ದಲು ಕಳ್ಳಸಾಗಣೆ ಸಿಂಡಿಕೇಟ್‌ಗೆ ಸಂಪರ್ಕ ಹೊಂದಿದ ವ್ಯಕ್ತಿಗಳು ಮತ್ತು ಘಟಕಗಳು ಮತ್ತು ಸಂಬಂಧಿತ ಹವಾಲಾ ನಿರ್ವಾಹಕರು ಮತ್ತು ಹ್ಯಾಂಡ್ಲರ್‌ಗಳನ್ನು ಒಳಗೊಂಡಿವೆ.

Police detain TMC MP Mahua Moitra as party MPs protest outside Union Home Minister Amit Shah's office against ED raids on the I-PAC office in Kolkata
Watch | ಟಿಎಂಸಿ ಚುನಾವಣಾ ತಂತ್ರಜ್ಞ ಪ್ರತೀಕ್ ಜೈನ್ ನಿವಾಸ-ಕಚೇರಿ ಮೇಲೆ ED ದಾಳಿ; ಮಮತಾ ವಾಗ್ದಾಳಿ

ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಸ್ಥಾಪಿಸಿದ ಐ-ಪಿಎಸಿ, 2019 ರ ಲೋಕಸಭಾ ಚುನಾವಣೆಯಿಂದಲೂ ಟಿಎಂಸಿ ಜೊತೆ ಕೆಲಸ ಮಾಡುತ್ತಿದೆ, ಪಕ್ಷದ ಐಟಿ, ಮಾಧ್ಯಮ ಮತ್ತು ಚುನಾವಣಾ ಕಾರ್ಯತಂತ್ರವನ್ನು ನಿರ್ವಹಿಸುತ್ತಿದೆ. 2021 ರ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಅಧಿಕಾರಕ್ಕೆ ಮರಳುವಲ್ಲಿ ಕಂಪನಿಯು ಪ್ರಮುಖ ಪಾತ್ರ ವಹಿಸಿದೆ. ಕೋಲ್ಕತ್ತಾ ಮತ್ತು ದೆಹಲಿಯಾದ್ಯಂತ ಹತ್ತು ಆವರಣಗಳಲ್ಲಿ ದಾಳಿ ನಡೆಸಲಾಯಿತು. ಇದರಲ್ಲಿ ಲೌಡನ್ ಸ್ಟ್ರೀಟ್‌ನಲ್ಲಿರುವ ಪ್ರತೀಕ್ ಜೈನ್ ಅವರ ನಿವಾಸ ಮತ್ತು ಐ-ಪಿಎಸಿಯ ಸೆಕ್ಟರ್ V ಕಚೇರಿ ಮತ್ತು ದೆಹಲಿಯ ಇತರ ನಾಲ್ಕು ಸ್ಥಳಗಳು ಸೇರಿವೆ.

ದಾಳಿಯ ಸಮಯದಲ್ಲಿ, ಪಶ್ಚಿಮ ಬಂಗಾಳದ ಡಿಜಿಪಿ ರಾಜೀವ್ ಕುಮಾರ್ ಮತ್ತು ಬಿಧಾನ್‌ನಗರ ಪೊಲೀಸ್ ಆಯುಕ್ತರು ಸೇರಿದಂತೆ ಹಿರಿಯ ಐಪಿಎಸ್ ಅಧಿಕಾರಿಗಳು ಹಾಜರಿದ್ದರು. ಸಿಆರ್‌ಪಿಎಫ್ ಸಿಬ್ಬಂದಿ ಐ-ಪಿಎಸಿ ಆವರಣವನ್ನು ಭದ್ರಪಡಿಸಿಕೊಂಡರು. ಟಿಎಂಸಿಯ ಸಾಂಸ್ಥಿಕ ಡೇಟಾವನ್ನು ಇಡಿ ವಶಪಡಿಸಿಕೊಂಡಿದೆ ಎಂದು ಆರೋಪಿಸಿ ಮಮತಾ ಬ್ಯಾನರ್ಜಿ ಸ್ಥಳಕ್ಕೆ ಆಗಮಿಸಿದಾಗ ಪರಿಸ್ಥಿತಿ ತೀವ್ರಗೊಂಡಿತು.

ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಸಿಪಿಎಂ ಬಂಗಾಳ ಕಾರ್ಯದರ್ಶಿ ಮೊಹಮ್ಮದ್ ಸಲೀಂ ಮತ್ತು ಕಾಂಗ್ರೆಸ್ ರಾಜ್ಯ ಮುಖ್ಯಸ್ಥ ಶುಭಂಕರ್ ಸರ್ಕಾರ್ ಸೇರಿದಂತೆ ರಾಜ್ಯದ ವಿರೋಧ ಪಕ್ಷದ ನಾಯಕರು ಮಮತಾ ಬ್ಯಾನರ್ಜಿ ಅವರ ಹಸ್ತಕ್ಷೇಪದ ಕಾನೂನುಬದ್ಧತೆ ಮತ್ತು ಔಚಿತ್ಯವನ್ನು ಪ್ರಶ್ನಿಸಿದರು. ದೆಹಲಿಯಲ್ಲಿ ಟಿಎಂಸಿ ಸಂಸದರ ಪ್ರತಿಭಟನೆಯು ರಾಜಕೀಯ ಬಿಕ್ಕಟ್ಟನ್ನು ಹೆಚ್ಚಿಸಿದ್ದು, ಈ ವರ್ಷ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಉಂಟಾಗಿರುವ ಹೆಚ್ಚಿನ ಬಿಕ್ಕಟ್ಟನ್ನು ಎತ್ತಿ ತೋರಿಸುತ್ತದೆ.

ಮಮತಾ ಬ್ಯಾನರ್ಜಿ ಅವರು ತಮ್ಮ ಕಾರ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಇಡಿ ಕೋಲ್ಕತ್ತಾ ಹೈಕೋರ್ಟ್ ನ್ನು ಸಹ ಸಂಪರ್ಕಿಸಿದೆ. ಆದರೆ ಪ್ರತೀಕ್ ಜೈನ್ ಅವರ ಕುಟುಂಬವು ದಾಳಿಯ ಸಮಯದಲ್ಲಿ ದಾಖಲೆಗಳನ್ನು ತೆಗೆದುಹಾಕಿದ ಆರೋಪದ ಮೇಲೆ ದೂರು ದಾಖಲಾಗಿದ್ದು, ಇಂದು ವಿಚಾರಣೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com