Noida techie death case: Real estate developer accused of negligence arrested
ಯುವರಾಜ್ ಮೆಹ್ತಾ

ಹೊಂಡಕ್ಕೆ ಬಿದ್ದು ನೋಯ್ಡಾ ಟೆಕ್ಕಿ ಸಾವು: ನಿರ್ಲಕ್ಷ್ಯದ ಆರೋಪದ ಮೇಲೆ ರಿಯಲ್ ಎಸ್ಟೇಟ್ ಡೆವಲಪರ್ ಬಂಧನ

"MZ ವಿಜ್‌ಟೌನ್ ಪ್ಲಾನರ್ಸ್‌ನ ಮಾಲೀಕ ಮತ್ತು ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಅಭಯ್ ಕುಮಾರ್ ಅವರನ್ನು ಬಂಧಿಸಲಾಗಿದೆ" ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ(ಗ್ರೇಟರ್ ನೋಯ್ಡಾ) ಹೇಮಂತ್ ಉಪಾಧ್ಯಾಯ ತಿಳಿಸಿದ್ದಾರೆ.
Published on

ಲಖನೌ: ದಟ್ಟ ಮಂಜಿನಿಂದಾಗಿ ಕಾರಿನ ಸಮೇತ 70 ಅಡಿ ಆಳದ ನೀರಿನ ಹೊಂಡಕ್ಕೆ ಬಿದ್ದು 27 ವರ್ಷದ ಟೆಕ್ಕಿ ಯುವರಾಜ್ ಮೆಹ್ತಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಮಂಗಳವಾರ ರಿಯಲ್ ಎಸ್ಟೇಟ್ ಡೆವಲಪರ್ ಒಬ್ಬರನ್ನು ಬಂಧಿಸಿದ್ದಾರೆ.

"MZ ವಿಜ್‌ಟೌನ್ ಪ್ಲಾನರ್ಸ್‌ನ ಮಾಲೀಕ ಮತ್ತು ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಅಭಯ್ ಕುಮಾರ್ ಅವರನ್ನು ಬಂಧಿಸಲಾಗಿದೆ" ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ(ಗ್ರೇಟರ್ ನೋಯ್ಡಾ) ಹೇಮಂತ್ ಉಪಾಧ್ಯಾಯ ತಿಳಿಸಿದ್ದಾರೆ.

ವಿಶ್‌ಟೌನ್ ಪ್ಲಾನರ್ಸ್ ಪ್ರೈವೇಟ್ ಲಿಮಿಟೆಡ್‌ನ ಮಾಲೀಕರಲ್ಲಿ ಒಬ್ಬರಾದ ಅಭಯ್ ಕುಮಾರ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಅವರ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ.

Noida techie death case: Real estate developer accused of negligence arrested
ನೋಯ್ಡಾ ಟೆಕ್ಕಿ ಸಾವು: ಕೆಸರಿನಿಂದ ಮೂಗು ಮುಚ್ಚಿಹೋಗಿತ್ತು, ಎದೆಯಲ್ಲಿ ನೀರಿತ್ತು; ಮರಣೋತ್ತರ ಪರೀಕ್ಷೆ ಬಹಿರಂಗ

ಮೆಹ್ತಾ ಅವರ ತಂದೆ ರಾಜ್ ಕುಮಾರ್ ಮೆಹ್ತಾ ನೀಡಿದ ದೂರಿನ ಮೇರೆಗೆ ಪೊಲೀಸರು ಇಬ್ಬರು ರಿಯಲ್ ಎಸ್ಟೇಟ್ ಡೆವಲಪರ್‌ಗಳಾದ - MZ ವಿಜ್‌ಟೌನ್ ಪ್ಲಾನರ್ಸ್ ಮತ್ತು ಲೋಟಸ್ ಗ್ರೀನ್ಸ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಅವರು ದುರಂತಕ್ಕೆ ಸ್ಥಳೀಯ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಶವಪರೀಕ್ಷೆಯ ವರದಿಯಲ್ಲಿ ಅವರ ಮೂಗು ಮತ್ತು ಎದೆ ನೀರಿನಿಂದ ಮುಚ್ಚಿಹೋಗಿದೆ. ಅವರ ಶ್ವಾಸಕೋಶ ಮತ್ತು ಎದೆಯಲ್ಲಿ ನೀರು ಇತ್ತು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com