ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಪ್ರಶಸ್ತಿ

ಕಳೆದ ವರ್ಷ ಜೂನ್‌ನಲ್ಲಿ, ಶುಕ್ಲಾ ಬಾಹ್ಯಾಕಾಶಕ್ಕೆ ಹೋದ ಎರಡನೇ ಭಾರತೀಯ ಮತ್ತು ಆಕ್ಸಿಯಮ್ -4 ಕಾರ್ಯಾಚರಣೆಯ ಭಾಗವಾಗಿ ISS ಗೆ ಕಾಲಿಟ್ಟ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
Shukla during the press meet
ಶುಭಾಂಶು ಶುಕ್ಲಾonline desk
Updated on

ನವದೆಹಲಿ: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ISS) ಭೇಟಿ ನೀಡಿದ ಮೊದಲ ಭಾರತೀಯ ಎಂಬ ಇತಿಹಾಸ ಸೃಷ್ಟಿಸಿದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ ಭಾನುವಾರ ಭಾರತದ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿಯಾದ ಅಶೋಕ ಚಕ್ರವನ್ನು ಘೋಷಿಸಲಾಗಿದೆ.

ಕಳೆದ ವರ್ಷ ಜೂನ್‌ನಲ್ಲಿ, ಶುಕ್ಲಾ ಬಾಹ್ಯಾಕಾಶಕ್ಕೆ ಹೋದ ಎರಡನೇ ಭಾರತೀಯ ಮತ್ತು ಆಕ್ಸಿಯಮ್ -4 ಕಾರ್ಯಾಚರಣೆಯ ಭಾಗವಾಗಿ ISS ಗೆ ಕಾಲಿಟ್ಟ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

1984 ರಲ್ಲಿ ಗಗನಯಾತ್ರಿ ರಾಕೇಶ್ ಶರ್ಮಾ ರಷ್ಯಾದ ಸೋಯುಜ್‌ನಲ್ಲಿ ಹಾರಿದ 41 ವರ್ಷಗಳ ನಂತರ ಶುಕ್ಲಾ ಅವರ 18 ದಿನಗಳ ಬಾಹ್ಯಾಕಾಶ ಯಾತ್ರೆ ನಡೆಯಿತು.

Shukla during the press meet
ಬಹುಶೃತ ವಿದ್ವಾಂಸ ಶತಾವಧಾನಿ ಆರ್ ಗಣೇಶ್ ಗೆ ಪದ್ಮ ಭೂಷಣ ಪ್ರಶಸ್ತಿ ಘೋಷಣೆ

ಯುದ್ಧ ಪೈಲಟ್ ಆಗಿ, ಶುಕ್ಲಾ ಅವರು Su-30 MKI, MiG-21, MiG-29, ಜಾಗ್ವಾರ್, ಹಾಕ್, ಡೋರ್ನಿಯರ್ ಮತ್ತು An-32 ಸೇರಿದಂತೆ ವಿವಿಧ ವಿಮಾನಗಳಲ್ಲಿ 2,000 ಗಂಟೆಗಳ ಹಾರಾಟದ ಅನುಭವದ ಪ್ರಭಾವಶಾಲಿ ದಾಖಲೆಯನ್ನು ಹೊಂದಿದ್ದಾರೆ.

ಗಣರಾಜ್ಯೋತ್ಸವದ ಮುನ್ನಾದಿನದಂದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 70 ಸಶಸ್ತ್ರ ಪಡೆಗಳ ಸಿಬ್ಬಂದಿಗೆ ಶೌರ್ಯ ಪ್ರಶಸ್ತಿಗಳನ್ನು ಅನುಮೋದಿಸಿದರು, ಇದರಲ್ಲಿ ಆರು ಮಂದಿ ಮರಣೋತ್ತರವಾಗಿ ಗೌರವವನ್ನು ಪಡೆಯಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com