ಹಿಂದೂ ಧರ್ಮದ ಬದ್ಧತೆ ಸಾಬೀತುಪಡಿಸಲು ಗೋಮಾಂಸ ರಫ್ತು ನಿಲ್ಲಿಸಿ: ಸಿಎಂ ಯೋಗಿಗೆ ಶಂಕರಾಚಾರ್ಯ ಸವಾಲು

ಪವಿತ್ರ ಸ್ನಾನ ಮಾಡದಂತೆ ತಮ್ಮನ್ನು ತಡೆಯಲಾಗಿದೆ ಎಂದು ಆರೋಪಿಸಿದ್ದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು, ಉತ್ತರ ಪ್ರದೇಶ ಸರ್ಕಾರದ ನಡೆಯನ್ನು ಖಂಡಿಸಿ ಜನವರಿ 18 ರಂದು ಸತ್ಯಾಗ್ರಹ ನಡೆಸಿದ್ದರು.
Stop beef export to prove commitment as Hindu sympathiser: Shankaracharya to CM Yogi Adityanath
ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ
Updated on

ವಾರಣಾಸಿ: "ಹಿಂದೂ ಧರ್ಮದ ಕುರಿತ ತಮ್ಮ ಬದ್ಧತೆಯನ್ನು ಸಾಬೀತುಪಡಿಸಲು ರಾಜ್ಯದಿಂದ ಗೋಮಾಂಸ ರಫ್ತು ನಿಲ್ಲಿಸಿ ಮತ್ತು ಗೋವನ್ನು "ರಾಷ್ಟ್ರ ಮಾತೆ" ಎಂದು ಘೋಷಿಸುವಂತೆ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಶುಕ್ರವಾರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸವಾಲು ಹಾಕಿದ್ದಾರೆ.

ಪ್ರಯಾಗರಾಜ್‌ನ ಸಂಗಮದಲ್ಲಿ ಪವಿತ್ರ ಸ್ನಾನ ಮಾಡದಂತೆ ತಮ್ಮನ್ನು ತಡೆಯಲಾಗಿದೆ ಎಂದು ಆರೋಪಿಸಿದ್ದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು, ಉತ್ತರ ಪ್ರದೇಶ ಸರ್ಕಾರದ ನಡೆಯನ್ನು ಖಂಡಿಸಿ ಜನವರಿ 18 ರಂದು ಶಂಕರಾಚಾರ್ಯ ಕ್ಯಾಂಪ್ ನಲ್ಲಿ ಸತ್ಯಾಗ್ರಹ ನಡೆಸಿದ್ದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು, ನಾನು ಅಲ್ಲಿ 11 ದಿನಗಳ ಕಾಲ ಧರಣಿ ಕುಳಿತಿದ್ದಾಗ, ಯಾವುದೇ ಅಧಿಕಾರಿ ಸ್ನಾನ ಮಾಡುವಂತೆ ಹೇಳಲಿಲ್ಲ. ಈಗ ತುಂಬಾ ತಡವಾಗಿದೆ. ಮುಂದಿನ ವರ್ಷ ನಾನು ಮಾಘ ಮೇಳಕ್ಕೆ ಹೋಗಿ ಗೌರವಯುತವಾಗಿ ಪವಿತ್ರ ಸ್ನಾನ ಮಾಡುತ್ತೇನೆ" ಎಂದು ಹೇಳಿದರು.

Stop beef export to prove commitment as Hindu sympathiser: Shankaracharya to CM Yogi Adityanath
ನನ್ನ ಹೃದಯ ಭಾರವಾಗಿದೆ: ಪ್ರಯಾಗರಾಜ್ ಮಾಘ ಮೇಳದಿಂದ ಪುಣ್ಯ ಸ್ನಾನ ಮಾಡದೆ ಹಿಂತಿರುಗಿದ ಅವಿಮುಕ್ತೇಶ್ವರಾನಂದ!

ಇದೇ ವೇಳೆ, ಹಿಂದೂ ಧರ್ಮದ ಕುರಿತ ತಮ್ಮ ಬದ್ಧತೆಯನ್ನು ಸಾಬೀತುಪಡಿಸಲು 40 ದಿನಗಳಲ್ಲಿ ಗೋಹತ್ಯೆಯನ್ನು ನಿಲ್ಲಿಸಿ, ಆಗ ನೀವೊಬ್ಬ ಹಿಂದೂ ಅನುಯಾಯಿ ಎನ್ನುವುದನ್ನು ಒಪ್ಪಿಕೊಳ್ಳುತ್ತೇವೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸವಾಲು ಹಾಕಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com