ಭಗವಾನ್ ರಾಮನನ್ನೇ 'ಲೂಟಿ' ಮಾಡಿದ 'ಫಾರ್ಜಿ ಹಿಂದೂಗಳು': BJP, VHP, ಬಜರಂಗ ದಳವನ್ನು ಟೀಕಿಸಿದ ಕಪಿಲ್ ಸಿಬಲ್

ತಪ್ಪಿತಸ್ಥರೆಂದು ಸಾಬೀತಾದವರಿಗೆ ಮಾದರಿಯಾಗುವಂತಹ ಶಿಕ್ಷೆಯನ್ನು ವಿಧಿಸಲಾಗುವುದು ಮತ್ತು ತ್ವರಿತ ನ್ಯಾಯ ದೊರಕಿಸಿಕೊಡಲಾಗುವುದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
Kapil Sibal
ಕಪಿಲ್ ಸಿಬಲ್
Updated on

ನವದೆಹಲಿ: ರಾಮ ಮಂದಿರ ದೇಣಿಗೆ ದುರುಪಯೋಗದ ಆರೋಪದ ಮೇಲೆ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಗುರುವಾರ ಬಿಜೆಪಿ, ಬಜರಂಗದಳ ಮತ್ತು ವಿಎಚ್‌ಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಅವರನ್ನು ಭಗವಾನ್ ರಾಮನನ್ನೇ 'ಲೂಟಿ' ಮಾಡಿದ 'ಫಾರ್ಜಿ ಹಿಂದೂಗಳು' ಎಂದು ಕರೆದಿದ್ದಾರೆ.

ಹಿರಿಯ ವಕೀಲರಾದ ಸಿಬಲ್, ಆ ಸಂಘಟನೆಗಳು ಶ್ರೀರಾಮನ ಹೆಸರಿನಲ್ಲಿ ಮತ ಯಾಚಿಸಿದವು ಎಂದು ಆರೋಪಿಸಿದರು.

ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಿಬಲ್, 'VHP, BJP, Bajrang Dal - 'ರಾಮ್ ಕೆ ನಾಮ್ ಪೆ ವೋಟ್ ತೋ ಲೇಂಗೆ, ಫಿರ್ ರಾಮ್ ಕೋ ಹಿ ವೋ ಲೂಟೇಂಗೆ (ಅವರು ರಾಮನ ಹೆಸರಿನಲ್ಲಿ ಮತಗಳನ್ನು ಕೇಳುತ್ತಾರೆ ಮತ್ತು ನಂತರ ರಾಮನನ್ನೇ ಲೂಟಿ ಮಾಡುತ್ತಾರೆ). ಅಸ್ಲಿ ಹಿಂದೂ ಯೇ ಕ್ಯಾ ಜಾನೆ, ಯೇ ತೋ ಫರ್ಜಿ ಹಿಂದೂ ಹೈ (ನಿಜವಾದ ಹಿಂದೂಗಳ ಬಗ್ಗೆ ಅವರಿಗೆ ಏನು ಗೊತ್ತು, ಅವರು ನಕಲಿ ಹಿಂದೂಗಳು)' ಎಂದು ಹೇಳಿದ್ದಾರೆ.

ಉತ್ತರ ಪ್ರದೇಶ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡವು (SIT) ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ನಂತರ ದೇಣಿಗೆ ದುರುಪಯೋಗ ಪ್ರಕರಣ ಬೆಳಕಿಗೆ ಬಂದಿತು; ಇದರ ಬೆನ್ನಲ್ಲೇ ಜೂನ್ 25 ರಂದು ಎಫ್‌ಐಆರ್ (FIR) ದಾಖಲಿಸಲಾಯಿತು.

ನಂತರ ಎಂಟು ಆರೋಪಿಗಳನ್ನು ಬಂಧಿಸಲಾಯಿತು ಮತ್ತು ಅವರ ಪೈಕಿ ಆರು ಮಂದಿಯಿಂದ ಸುಮಾರು ₹80 ಲಕ್ಷ ರೂಪಾಯಿ ನಗದು ಹಾಗೂ ಸ್ವಲ್ಪ ವಿದೇಶಿ ಕರೆನ್ಸಿಯನ್ನು ಇಲ್ಲಿಯವರೆಗೆ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Kapil Sibal
'ರಾಮ ಮಂದಿರ ಟ್ರಸ್ಟ್‌ನಲ್ಲಿ ಒಬ್ಬ ಮುಸ್ಲಿಂ ಇದ್ದಿದ್ದರೆ, ಕಥೆ ಬೇರೆಯಾಗಿರುತ್ತಿತ್ತು': ಯೋಗಿ ಆದಿತ್ಯನಾಥ್ ವಿರುದ್ಧ ಅಸಾದುದ್ದೀನ್ ಓವೈಸಿ ವ್ಯಂಗ್ಯ

ಸದ್ಯ ತನಿಖೆ ಮುಂದುವರಿದಿದೆ. ತಪ್ಪಿತಸ್ಥರೆಂದು ಸಾಬೀತಾದವರಿಗೆ ಮಾದರಿಯಾಗುವಂತಹ ಶಿಕ್ಷೆಯನ್ನು ವಿಧಿಸಲಾಗುವುದು ಮತ್ತು ತ್ವರಿತ ನ್ಯಾಯ ದೊರಕಿಸಿಕೊಡಲಾಗುವುದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಈ ಪ್ರಕರಣವು ಕಾನೂನಿನ ಪ್ರಕಾರವೇ ಮುಂದುವರಿಯಲಿದೆ ಎಂದು ಬಿಜೆಪಿ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com