ಜಮ್ಮು-ಕಾಶ್ಮೀರದಲ್ಲಿ ಮಳೆಯ ಆರ್ಭಟ; ಭೂಕುಸಿತ-ಪ್ರವಾಹಕ್ಕೆ 12 ಮಂದಿ ಬಲಿ, ಹಲವರು ನಾಪತ್ತೆ

ಲೋವರ್ ಮುರ್ರಾ ಪ್ರದೇಶದಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿ ಮೊಹಮ್ಮದ್ ಲತೀಫ್ ಅವರ ಮನೆ ಮಣ್ಣಿನಡಿ ಸಿಲುಕಿದೆ.
File photo
ಸಂಗ್ರಹ ಚಿತ್ರ
Updated on

ಜಮ್ಮು: ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾನುವಾರ ಮುಂಜಾನೆ ಸುರಿದ ಭಾರೀ ಮಳೆಯಿಂದ ಭೂಕುಸಿತ ಮತ್ತು ಹಠಾತ್ ಪ್ರವಾಹ ಉಂಟಾಗಿ ಕನಿಷ್ಠ 12 ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ.

ಅತಿಹೆಚ್ಚು ಹಾನಿ ಸುರಂಕೋಟ್ ತಹಸೀಲಿನಲ್ಲಿ ಸಂಭವಿಸಿದ್ದು, ಸಂಕಷ್ಟಕ್ಕೆ ಸಿಲುಕಿರುವ ನಿವಾಸಿಗಳನ್ನು ರಕ್ಷಿಸಲು, ಹಾನಿಗೊಳಗಾದ ಪ್ರದೇಶಗಳನ್ನು ತೆರವುಗೊಳಿಸಲು ಹಾಗೂ ಸಂತ್ರಸ್ತರಿಗೆ ತುರ್ತು ನೆರವು ಒದಗಿಸಲು ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೂನಾಬಂಡಿ ಗ್ರಾಮದಲ್ಲಿ ಭೂಕುಸಿತದಿಂದ ಮನೆ ಕುಸಿದು 28 ವರ್ಷದ ನಾಜಿಯಾ ಕೌಸರ್ ಮೃತಪಟ್ಟಿದ್ದಾರೆ. ಅವರ ಪತಿ ಮೊಹಮ್ಮದ್ ಹಫೀಜ್ ಹಾಗೂ 2-6 ವರ್ಷದೊಳಗಿನ ಮೂವರು ಮಕ್ಕಳನ್ನು ಗಾಯಗೊಂಡ ಸ್ಥಿತಿಯಲ್ಲಿ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲೋವರ್ ಮುರ್ರಾ ಪ್ರದೇಶದಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿ ಮೊಹಮ್ಮದ್ ಲತೀಫ್ ಅವರ ಮನೆ ಮಣ್ಣಿನಡಿ ಸಿಲುಕಿದೆ. ಲತೀಫ್ ಸೇರಿದಂತೆ ಅವರ ಕುಟುಂಬದ ಐವರು ಸದಸ್ಯರು ನಾಪತ್ತೆಯಾಗಿದ್ದು, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

File photo
ಕರಾವಳಿ, ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ!

ಮರ್ಹೋಟೆ ಪ್ರದೇಶದಲ್ಲಿ ಇರಾಮ್ ಎಂಬ ಅಪ್ರಾಪ್ತ ಬಾಲಕಿ ನೀರಿನಲ್ಲಿ ಕೊಚ್ಚಿಹೋಗಿ ಮೃತಪಟ್ಟಿದ್ದಾಳೆ. ಇದೇ ವೇಳೆ ಧುಂದಾಕ್ ಲಥೂಂಗ್ ಸೇತುವೆ ಸಮೀಪದ ಹೊಳೆಯಲ್ಲಿ ಗುರುತು ಪತ್ತೆಯಾಗದ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರೀ ಮಳೆಯ ಪರಿಣಾಮ ಪೂಂಚ್ ಜಿಲ್ಲೆಯ ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಹವಾಮಾನ ಇಲಾಖೆ ಮುಂದಿನ ಕೆಲ ಗಂಟೆಗಳಲ್ಲೂ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆಯಿಂದ ಇರುವಂತೆ ಆಡಳಿತ ಮಂಡಳಿ ಸೂಚನೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com