NEET Paper Leak: ವಿದ್ಯಾರ್ಥಿಗಳ ಪ್ರತಿಭಟನೆ ನಡುವೆಯೇ ಕೇಂದ್ರ ಸರ್ಕಾರದಿಂದ ಮೊದಲ ಕ್ರಮ, ಶಿಕ್ಷಣ ಇಲಾಖೆ ಕಾರ್ಯದರ್ಶಿ ಎತ್ತಂಗಡಿ

ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ಅವರನ್ನು ಹುದ್ದೆಯಿಂದ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಹಿರಿಯ ಐಎಎಸ್ ಅಧಿಕಾರಿ ನರೇಶ್ ಪಾಲ್ ಗಂಗ್ವಾರ್ ಅವರನ್ನು ನೇಮಕ ಮಾಡಲಾಗಿದೆ.
Centre Replaces Education Secretary Amid Students Protests
ಕೇಂದ್ರ ಶಿಕ್ಷಣ ಇಲಾಖೆ (ಸಂಗ್ರಹ ಚಿತ್ರ)
Updated on

ನವದೆಹಲಿ: ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗಳ ನಡುವೆಯೇ ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಶಿಕ್ಷಣ ಇಲಾಖೆ ಕಾರ್ಯದರ್ಶಿ ಎತ್ತಂಗಡಿ ಮಾಡಲಾಗಿದೆ.

ನೀಟ್‌-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ದೆಹಲಿಯ ಜಂತರ್‌ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡಿರುವ ನಡುವೆಯೇ ಕೇಂದ್ರ ಸರ್ಕಾರ ಶಿಕ್ಷಣ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆ ಮಾಡಿದೆ.

ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ಅವರನ್ನು ಹುದ್ದೆಯಿಂದ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಹಿರಿಯ ಐಎಎಸ್ ಅಧಿಕಾರಿ ನರೇಶ್ ಪಾಲ್ ಗಂಗ್ವಾರ್ ಅವರನ್ನು ನೇಮಕ ಮಾಡಲಾಗಿದೆ.

ಕೇಂದ್ರ ಸಚಿವ ಸಂಪುಟದ ನೇಮಕಾತಿ ಸಮಿತಿ (ACC) ಹೊರಡಿಸಿರುವ ಆದೇಶದ ಪ್ರಕಾರ, ವಿನೀತ್ ಜೋಶಿ ಅವರನ್ನು ತಕ್ಷಣದಿಂದಲೇ ಶಿಕ್ಷಣ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದ್ದು, ಶಿಕ್ಷಣ ಸಚಿವಾಲಯದ ಹೊಸ ಕಾರ್ಯದರ್ಶಿಯಾಗಿ ನರೇಶ್ ಪಾಲ್ ಗಂಗ್ವಾರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Centre Replaces Education Secretary Amid Students Protests
INDIA bloc march to Gandhi Smriti: 'ನಮ್ಮನ್ನು ತಡೆಯಲು ಸಾಧ್ಯವೇ ಇಲ್ಲ.. ಧರ್ಮೇಂದ್ರ ಪ್ರಧಾನ್ ರಾಜಿನಾಮೆ ನೀಡಲೇಬೇಕು': ರಾಹುಲ್ ಗಾಂಧಿ

ನೀಟ್‌ ಪ್ರತಿಭಟನೆಗಳ ನಡುವಿನ ಮಹತ್ವದ ಬೆಳವಣಿಗೆ

ನೀಟ್‌ ಪರೀಕ್ಷೆಯಲ್ಲಿನ ಅಕ್ರಮಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ ನಡೆಯುತ್ತಿರುವ ಸಮಯದಲ್ಲೇ ಈ ಆಡಳಿತಾತ್ಮಕ ಬದಲಾವಣೆ ನಡೆದಿದೆ.

ವಿದ್ಯಾರ್ಥಿಗಳು ಮತ್ತು ವಿವಿಧ ಸಂಘಟನೆಗಳು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸುತ್ತಿವೆ.

ಸರ್ಕಾರದ ಸ್ಪಷ್ಟನೆ ಏನು?

ಸರ್ಕಾರದ ಮೂಲಗಳ ಪ್ರಕಾರ, ಶಿಕ್ಷಣ ಸಚಿವಾಲಯದ ಕಾರ್ಯನಿರ್ವಹಣೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ಪರೀಕ್ಷಾ ಸುಧಾರಣೆಗಳಿಗೆ ಸಂಬಂಧಿಸಿದ ಕಾರ್ಯಗಳನ್ನು ಸಮನ್ವಯಗೊಳಿಸುವ ಉದ್ದೇಶದಿಂದ ಈ ಆಡಳಿತಾತ್ಮಕ ಬದಲಾವಣೆ ಮಾಡಲಾಗಿದೆ. ಆದರೆ, ಈ ಬದಲಾವಣೆ ನೀಟ್‌ ವಿವಾದದ ಹಿನ್ನೆಲೆಯಲ್ಲಿ ಹೆಚ್ಚುತ್ತಿರುವ ಸಾರ್ವಜನಿಕ ಆಕ್ರೋಶಕ್ಕೆ ಸಂಬಂಧಿಸಿದದ್ದೇ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿದೆ.

ಸರ್ಕಾರದಿಂದ ಅಧಿಕೃತ ಸ್ಪಷ್ಟನೆ ಇಲ್ಲ

ಶಿಕ್ಷಣ ಸಚಿವಾಲಯವು ಈ ವರ್ಗಾವಣೆ ನೀಟ್‌-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ತನಿಖೆಗೆ ನೇರವಾಗಿ ಸಂಬಂಧಿಸಿದೆ ಎಂಬ ಬಗ್ಗೆ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ. ಆದರೆ, ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ಪಾರದರ್ಶಕತೆ, ಉತ್ತರದಾಯಿತ್ವ ಮತ್ತು ನ್ಯಾಯಸಮ್ಮತತೆಯನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿಭಟನೆ ಮುಂದುವರಿಕೆ

ಈ ನಡುವೆ ವಿದ್ಯಾರ್ಥಿ ಸಂಘಟನೆಗಳು, ಶಿಕ್ಷಣ ಕಾರ್ಯದರ್ಶಿಯ ಬದಲಾವಣೆಯನ್ನು ಆಡಳಿತಾತ್ಮಕ ಹೊಣೆಗಾರಿಕೆಯ ಒಂದು ಹೆಜ್ಜೆಯಾಗಿ ಸ್ವಾಗತಿಸಿದರೂ, ಪಾರದರ್ಶಕ ತನಿಖೆ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಮತ್ತು ಪರೀಕ್ಷಾ ವ್ಯವಸ್ಥೆಯಲ್ಲಿ ಮೂಲಭೂತ ಸುಧಾರಣೆ ಸೇರಿದಂತೆ ತಮ್ಮ ಎಲ್ಲಾ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com