

ನವದೆಹಲಿ: NEET ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಬೆನ್ನಲ್ಲೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಕೇಂದ್ರ ಸರ್ಕಾರ ಕನ್ನಡಿಗ ಪ್ರಹ್ಲಾದ್ ಜೋಶಿಗೆ (Pralhad Joshi) ಶಿಕ್ಷಣ ಖಾತೆಯ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ.
ಸದ್ಯ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ಹೊಂದಿರುವ ಜೋಶಿಗೆ ಹೆಚ್ಚುವರಿಯಾಗಿ ಶಿಕ್ಷಣ ಖಾತೆಯನ್ನು ನೀಡಲಾಗಿದೆ. ಪ್ರಧಾನಿಗಳ ಶಿಫಾರಸಿನ ಮೇರೆಗೆ ಸಚಿವ ಪ್ರಲ್ಹಾದ್ ಜೋಷಿಯವರಿಗೆ ಶಿಕ್ಷಣ ಇಲಾಖೆಯ ಹೆಚ್ಚುವರಿ ಹೊಣೆ ನೀಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದು, ಪ್ರಕಟಣೆಯಲ್ಲಿ ಜೋಶಿ ಅವರ ನೇಮಕಾತಿಯನ್ನು ದೃಢಪಡಿಸಿದೆ.