ಭಾರತದಲ್ಲಿ ಮುಸ್ಲಿಮರು PM, CM ಆಗದಿರುವುದಕ್ಕೆ ಕಾರಣ ಏನು ಗೊತ್ತ? Owaisi ಮುಸ್ಲಿಮರ ದೊಡ್ಡ ಶತ್ರು: ಮೌಲಾನಾ ಸಾಜಿದ್

AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಇಂದಿನ ಮುಸ್ಲಿಮರ ದೊಡ್ಡ ಶತ್ರು. ಮುಸ್ಲಿಂ ಲೀಗ್ ಗಳನ್ನು ಮಾಡಿಕೊಂಡಿದ್ದರಿಂದ ಇಲ್ಲಿಯವರೆಗೂ ಭಾರತದಲ್ಲಿ ಯಾವ ಮುಸ್ಲಿಮನೂ ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿ ಆಗಲು ಸಾಧ್ಯವಾಗಲಿಲ್ಲ...
Maulana Sajid Rashidi, Asaduddin Owaisi
ಮೌಲಾನಾ ಸಾಜಿದ್ ರಶೀದಿ, ಅಸಾದುದ್ದೀನ್ ಓವೈಸಿ
Updated on

ನವದೆಹಲಿ: AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಇಂದಿನ ಮುಸ್ಲಿಮರ ದೊಡ್ಡ ಶತ್ರು. ಮುಸ್ಲಿಂ ಲೀಗ್ ಗಳನ್ನು ಮಾಡಿಕೊಂಡಿದ್ದರಿಂದ ಇಲ್ಲಿಯವರೆಗೂ ಭಾರತದಲ್ಲಿ ಯಾವ ಮುಸ್ಲಿಮನೂ ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿ ಆಗಲು ಸಾಧ್ಯವಾಗಲಿಲ್ಲ ಎಂದು ಆಲ್ ಇಂಡಿಯಾ ಇಮಾಮ್ ಅಸೋಸಿಯೇಷನ್ ​​ಅಧ್ಯಕ್ಷ ಮೌಲಾನಾ ಸಾಜಿದ್ ರಶೀದಿ ಆರೋಪಿಸಿದ್ದಾರೆ.

ಸ್ವಾತಂತ್ರ್ಯದ ನಂತರ ಪ್ರಮುಖ ಇಸ್ಲಾಮಿಕ್ ವಿದ್ವಾಂಸರು ಮತ್ತು ನಾಯಕರಾದ ಮೌಲಾನಾ ಅಬುಲ್ ಕಲಾಂ ಆಜಾದ್, ಹುಸೇನ್ ಅಹ್ಮದ್ ಮದನಿ ಮತ್ತು ಇತರರು ಮುಸ್ಲಿಂ ಲೀಗ್ ಅನ್ನು ಸ್ವೀಕರಿಸಲಿಲ್ಲ ಏಕೆಂದರೆ ಅವರು ಭಾರತದಲ್ಲಿ ಯಾವುದೇ ರಾಜಕೀಯ ಪಕ್ಷವು ಮುಸ್ಲಿಮರ ಹೆಸರಿನಲ್ಲಿ ಮಾತ್ರ ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ನಂಬಿದ್ದರು.

ಎಲ್ಲಾ ಮುಸ್ಲಿಮರು ಒಂದಾದರೂ, ನಾವು ಮುಖ್ಯಮಂತ್ರಿಯಾಗಲು ಅಥವಾ ಪ್ರಧಾನಿಯಾಗಲು ಸಾಧ್ಯವಿಲ್ಲ. ಹೀಗಾಗಿ ಎಲ್ಲರನ್ನೂ ಒಯ್ಯುವ ಪಕ್ಷ ಮಾತ್ರ ಇಲ್ಲಿ ಯಶಸ್ವಿಯಾಗಲು ಸಾಧ್ಯ ಎಂದು ತಿಳಿದಿದ್ದರು. ಅದಕ್ಕಾಗಿಯೇ, ನೆಹರೂ ಅವರಿಂದ ಹಿಡಿದು ಅಖಿಲೇಶ್ ಯಾದವ್ ವರೆಗೆ, ನಾವು ಹಿಂದೂಗಳನ್ನು ನಮ್ಮ ನಾಯಕರಾಗಿ ಸ್ವೀಕರಿಸಿದ್ದೇವೆ ಎಂದು ಮೌಲಾನಾ ಸಾಜಿದ್ ರಶೀದಿ ಹೇಳಿದ್ದಾರೆ.

Maulana Sajid Rashidi, Asaduddin Owaisi
UP ಚುನಾವಣೆ: ಈಗಲೇ ಮೈತ್ರಿ ಮಾತುಕತೆ ಆರಂಭಿಸೋಣ; ಚುನಾವಣೆ ಬಳಿಕ ಅತ್ತರೆ ಪ್ರಯೋಜನ ಇಲ್ಲ- ಅಖಿಲೇಶ್ ಗೆ ಓವೈಸಿ ಆಫರ್!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com