

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶದ ಯುವಜನರನ್ನು ಉದ್ದೇಶಿಸಿ ಮಾಡಿದ ಫೇಸ್ಬುಕ್ ಪೋಸ್ಟ್ ನ್ನು ಕೆಲಕಾಲ ತೆಗೆದುಹಾಕಿದ ಪ್ರಕರಣಕ್ಕೆ ಸಂಬಂಧಿಸಿ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಮೆಟಾದ ಜಾಗತಿಕ ಸಾರ್ವಜನಿಕ ನೀತಿ ವಿಭಾಗದ ಮುಖ್ಯಸ್ಥರನ್ನು ವಿವರಣೆ ನೀಡಲು ಕರೆದಿದೆ.
ಮೂಲಗಳ ಪ್ರಕಾರ, ಕಾಕ್ರೋಚ್ ಜನತಾ ಪಕ್ಷ (CJP) ಆಯೋಜಿಸಿದ್ದ ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಜುಲೈ 23ರಂದು ಪ್ರಕಟಿಸಲಾದ ಪ್ರಧಾನಿ ಮೋದಿ ಅವರ ಪೋಸ್ಟ್ ನ್ನು ತೆಗೆದುಹಾಕಿದ ಬಗ್ಗೆ ಮೆಟಾದಿಂದ ಸಚಿವಾಲಯ ಸ್ಪಷ್ಟನೆ ಕೇಳಿದೆ.
ಆ ವಿಡಿಯೊದಲ್ಲಿ ಯುವಜನರನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.
ವಿವಾದಕ್ಕೆ ಪ್ರತಿಕ್ರಿಯಿಸಿರುವ ಮೆಟಾ ವಕ್ತಾರರು, ಪೋಸ್ಟ್ ನ್ನು ತಾಂತ್ರಿಕ ದೋಷದಿಂದ ತಪ್ಪಾಗಿ ತೆಗೆದುಹಾಕಲಾಗಿತ್ತು, ಬಳಿಕ ಅದನ್ನು ಮರುಸ್ಥಾಪಿಸಲಾಗಿದೆ ಎಂದು ತಿಳಿಸಿದ್ದಾರೆ.