ಅಯೋಧ್ಯೆಯಲ್ಲಿ ಭವ್ಯ ಬಾಬ್ರಿ ಮಸೀದಿ ನಿರ್ಮಾಣಕ್ಕೆ ಭಾರೀ ಹಿನ್ನಡೆ; ಕೇವಲ 1.5 ಕೋಟಿ ದೇಣಿಗೆ ಸಂಗ್ರಹ; ಸಣ್ಣ ಮಸೀದಿ ಕಟ್ಟಲು ಟ್ರಸ್ಟ್ ನಿರ್ಧಾರ!

ಅಯೋಧ್ಯೆಯ ಧನ್ನಿಪುರದಲ್ಲಿ ಸುಮಾರು 300 ಕೋಟಿ ರೂಪಾಯಿ ವೆಚ್ಚದ ಬೃಹತ್ ಯೋಜನೆಗೆ ಕೇವಲ 1.5 ಕೋಟಿ ದೇಣಿಗೆ ಸಂಗ್ರಹವಾಗಿದೆ. ಹೀಗಾಗಿ ಈಗ ಕೇವಲ 3 ಕೋಟಿ ರೂ. ವೆಚ್ಚದಲ್ಲಿ ಸಣ್ಣ ಮಸೀದಿ ನಿರ್ಮಿಸಲು ಟ್ರಸ್ಟ್ ನಿರ್ಧರಿಸಿದೆ.
'Fund crunch' forces downsizing of Ayodhya mosque project
ಉದ್ದೇಶಿತ ಅಯೋಧ್ಯೆ ಮಸೀದಿ
Updated on

ಲಖನೌ: ಅಯೋಧ್ಯೆಯ ಧನ್ನಿಪುರದಲ್ಲಿ ಭವ್ಯ ಬಾಬ್ರಿ ಮಸೀದಿ ನಿರ್ಮಿಸುವ ಯೋಜನೆಗೆ ಭಾರೀ ಹಿನ್ನಡೆಯಾಗಿದ್ದು, ಹಣದ ಕೊರತೆಯಿಂದ ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಟ್ರಸ್ಟ್ ಬೃಹತ್ ಯೋಜನೆಯನ್ನು ಕೈಬಿಟ್ಟಿದ್ದು, ಸಣ್ಣ ಮಸೀದಿ ನಿರ್ಮಿಸಲು ನಿರ್ಧರಿಸಿದೆ ಎಂದು ವರದಿಯಾಗಿದೆ.

ಅಯೋಧ್ಯೆಯ ಧನ್ನಿಪುರದಲ್ಲಿ ಸುಮಾರು 300 ಕೋಟಿ ರೂಪಾಯಿ ವೆಚ್ಚದ ಬೃಹತ್ ಯೋಜನೆಗೆ ಕೇವಲ 1.5 ಕೋಟಿ ದೇಣಿಗೆ ಸಂಗ್ರಹವಾಗಿದೆ. ಹೀಗಾಗಿ ಈಗ ಕೇವಲ 3 ಕೋಟಿ ರೂ. ವೆಚ್ಚದಲ್ಲಿ ಸಣ್ಣ ಮಸೀದಿ ನಿರ್ಮಿಸಲು ಟ್ರಸ್ಟ್ ನಿರ್ಧರಿಸಿದೆ.

ಮೂಲಗಳ ಪ್ರಕಾರ, ಮಸೀದಿ, ಆಸ್ಪತ್ರೆ, ಗ್ರಂಥಾಲಯ, ಸಮುದಾಯ ಅಡುಗೆಮನೆ ಮತ್ತು ಇತರ ಸಾರ್ವಜನಿಕ ಸೌಲಭ್ಯಗಳನ್ನು ಒಳಗೊಂಡಂತೆ ಇಡೀ ಯೋಜನೆಗೆ ಸುಮಾರು 300 ಕೋಟಿ ರೂ.ಗಳ ವೆಚ್ಚವಾಗಬಹುದು ಎಂದು ಟ್ರಸ್ಟ್ ಅಂದಾಜಿಸಿತ್ತು. ಆದರೆ ಇದುವರೆಗೆ ಕೇವಲ 1.5 ಕೋಟಿ ರೂ.ಗಳ ದೇಣಿಗೆ ಪಡೆದಿರುವುದರಿಂದ ಮಸೀದಿಯ ಗಾತ್ರವನ್ನು ಕಡಿಮೆ ಮಾಡಬೇಕಾಯಿತು. ಆಸ್ಪತ್ರೆ ಮತ್ತು ಇತರ ಸೌಲಭ್ಯಗಳನ್ನು ನಿರ್ಮಿಸುವ ಯೋಜನೆಯನ್ನು ಸಹ ಮುಂದೂಡಬೇಕಾಯಿತು ಎಂದು ಮೂಲಗಳು ತಿಳಿಸಿವೆ.

'Fund crunch' forces downsizing of Ayodhya mosque project
ಖಯಾಮತ್ ಬರುವುದಿಲ್ಲ, ಬಾಬ್ರಿ ಮಸೀದಿ ಪುನರ್ ನಿರ್ಮಾಣ ಸಾಧ್ಯವಿಲ್ಲ: ಯುಪಿ ಸಿಎಂ ಯೋಗಿ

ಇದೀಗ ಕೇವಲ ಮಸೀದಿ ನಿರ್ಮಾಣಕ್ಕೆ 3 ಕೋಟಿ ರೂ. ವೆಚ್ಚವಾಗುವಂತೆ ಹೊಸ ಯೋಜನೆ ರೂಪಿಸಲಾಗಿದೆ. ಆಸ್ಪತ್ರೆ ಸೇರಿದಂತೆ ಇತರ ಸೌಲಭ್ಯಗಳ ನಿರ್ಮಾಣವನ್ನು ಕೈಬಿಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com