ಮಹಾರಾಷ್ಟ್ರ ರೈತರಿಗೆ ಬಂಪರ್ ಕೊಡುಗೆ: 2 ಲಕ್ಷ ರೂ ವರೆಗಿನ ಸಾಲ ಮನ್ನಾ; 56 ಲಕ್ಷ ಕೃಷಿಕರಿಗೆ ಪ್ರಯೋಜನ!

2024ರ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ನೀಡಿದ ಪ್ರಮುಖ ಭರವಸೆಗಳಲ್ಲಿ ಕೃಷಿ ಸಾಲ ಮನ್ನಾ ಒಂದಾಗಿತ್ತು.
Casual Images
ಸಾಂದರ್ಭಿಕ ಚಿತ್ರ
Updated on

ಮುಂಬೈ: ಮಹಾರಾಷ್ಟ್ರ ಸರ್ಕಾರ ರೈತರಿಗೆ ಬಂಪರ್ ಕೊಡುಗೆ ಪ್ರಕಟಿಸಿದೆ. 2 ಲಕ್ಷ ರೂ.ವರೆಗಿನ ಕೃಷಿ ಸಾಲ ಮನ್ನಾ ಮಾಡುವ ಮಹತ್ವದ ನಿರ್ಧಾರಕ್ಕೆ ಸಚಿವ ಸಂಪುಟ ಸಭೆ ಮಂಗಳವಾರ ಅನುಮೋದನೆ ನೀಡಿದೆ.

ಮುಂಗಾರು ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ.

2024ರ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ನೀಡಿದ ಪ್ರಮುಖ ಭರವಸೆಗಳಲ್ಲಿ ಕೃಷಿ ಸಾಲ ಮನ್ನಾ ಒಂದಾಗಿತ್ತು.

Casual Images
ತಮಿಳುನಾಡು ಸರ್ಕಾರ ಮತ್ತೊಂದು ಮಹತ್ವದ ಘೋಷಣೆ: ಸಣ್ಣ ರೈತರ ₹50,000 ವರೆಗಿನ ಬೆಳೆ ಸಾಲ ಮನ್ನಾ!

ಆದಾಗ್ಯೂ, ವಿಧಾನ ಪರಿಷತ್ ಚುನಾವಣೆಯಿಂದಾಗಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಧಿಕೃತ ಘೋಷಣೆ ಸದ್ಯಕ್ಕೆ ಅಸಂಭವ ಎಂದು ಮೂಲಗಳು ತಿಳಿಸಿವೆ.

ಈ ಯೋಜನೆಯಡಿ 65 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ಒಳಗೊಳ್ಳಲಿದ್ದು, ಸುಮಾರು 56 ಲಕ್ಷ ರೈತರಿಗೆ ಸೇರಿದ 36, 585 ಕೋಟಿ ರೂ.ಗಳ ಸಾಲವನ್ನು ಮನ್ನಾ ಮಾಡುವ ನಿರೀಕ್ಷೆಯಿದೆ. ನಿಯಮಿತವಾಗಿ ಬೆಳೆ ಸಾಲ ಮರುಪಾವತಿಸಿದ ರೈತರಿಗೆ 50,000 ರೂ.ಗಳವರೆಗೆ ಪ್ರೋತ್ಸಾಹ ಧನ ನೀಡಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com