

ಕೋಲ್ಕತ್ತಾ: ಇತ್ತೀಚಿಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೀನಾಯ ಸೋಲು ಅನುಭವಿಸಿರುವ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಇದೀಗ ಮಹಾರಾಷ್ಟ್ರದಲ್ಲಿ ಶಿವಸೇನೆಯಂತೆ ವಿಭಜನೆಯತ್ತ ಸಾಗುತ್ತಿದೆ.
ವಿರೋಧ ಪಕ್ಷ ಟಿಎಂಸಿ, ಮಹಾರಾಷ್ಟ್ರದಲ್ಲಿ ಶಿವಸೇನೆಯಂತೆಯೇ ವಿಭಜನೆಯತ್ತ ಸಾಗುತ್ತಿದೆ ಎಂದು ಮಂಗಳವಾರ ಪಶ್ಚಿಮ ಬಂಗಾಳ ಸಚಿವ ತಪಸ್ ರಾಯ್ ಅವರು ಹೇಳಿದ್ದಾರೆ.
ವಿಧಾನಸಭೆಯ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಯ್, ಟಿಎಂಸಿ, ರಾಜಕೀಯ ಹಿನ್ನೆಲೆ ಹೊಂದಿರದ ಜನರಿಗೆ ಅವಕಾಶ ನೀಡಿದೆ ಮತ್ತು ಈಗ ಆಂತರಿಕ ವಿರೋಧಾಭಾಸಗಳು ಹೊರಹೊಮ್ಮುತ್ತಿವೆ ಎಂದು ಹೇಳಿದ್ದಾರೆ.
ಟಿಎಂಸಿ ಅನಿವಾರ್ಯವಾಗಿ ವಿಭಜನೆಯಾಗುತ್ತಿದೆ ಎಂದು ಪ್ರತಿಪಾದಿಸಿದ ಮಣಿಕ್ತಾಲಾದ ಬಿಜೆಪಿ ಶಾಸಕ, ಅದು ಅಂತಿಮವಾಗಿ ರಾಜ್ಯ ರಾಜಕೀಯದಿಂದಲೇ ಕಣ್ಮರೆಯಾಗುತ್ತದೆ ಎಂದು ಹೇಳಿದ್ದಾರೆ.
"ಟಿಎಂಸಿಯ ಹಲವು ನಾಯಕರು ಮತ್ತು ಶಾಸಕರಲ್ಲಿ ಅತೃಪ್ತಿ ಹೆಚ್ಚುತ್ತಿದೆ. ಪಕ್ಷವು ವಿಭಜನೆಯತ್ತ ಸಾಗುತ್ತಿದೆ ಎಂದು ಈ ಬೆಳವಣಿಗೆಗಳು ಸೂಚಿಸುತ್ತಿವೆ. ಮಹಾರಾಷ್ಟ್ರದಲ್ಲಿ ನಡೆದಂತೆಯೇ ಇಲ್ಲಿಯೂ ನಡೆಯುತ್ತಿದೆ" ಎಂದು 2024ರಲ್ಲಿ ಟಿಎಂಸಿಯಿಂದ ಬಿಜೆಪಿ ಸೇರ್ಪಡೆಯಾದ ಹಿರಿಯ ನಾಯಕ ಹೇಳಿದ್ದಾರೆ.
Advertisement