ಕೆ ಅಣ್ಣಾಮಲೈ ನಿರ್ಗಮನದಿಂದ ಪಕ್ಷಕ್ಕೆ ನಷ್ಟವಿಲ್ಲ; ತಮಿಳುನಾಡು ಬಿಜೆಪಿ ಮುಖ್ಯಸ್ಥ ನೈನಾರ್ ನಾಗೇಂದ್ರನ್

'ರಾಜ್ಯಕ್ಕೆ ಪ್ರಾಮುಖ್ಯತೆ ನೀಡುತ್ತಿಲ್ಲ ಎಂಬ ಆರೋಪ ಸುಳ್ಳು. ಏಕೆಂದರೆ, ಪ್ರಧಾನಿ ನರೇಂದ್ರ ಮೋದಿ ಯಾವುದೇ ದೇಶಕ್ಕೆ ಭೇಟಿ ನೀಡಿದಾಗಲೆಲ್ಲ ತಮಿಳುನಾಡು, ಅದರ ಪರಂಪರೆ ಮತ್ತು ಶ್ರೇಷ್ಠತೆಯ ಬಗ್ಗೆ ಮಾತನಾಡುತ್ತಾರೆ' ಎಂದು ಬಿಜೆಪಿ ಅಧ್ಯಕ್ಷರು ಹೇಳಿದರು.
Nainar Nagendran
ನೈನಾರ್ ನಾಗೇಂದ್ರನ್
Updated on

ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ನಿರ್ಗಮನದಿಂದ ಪಕ್ಷಕ್ಕೆ ಯಾವುದೇ ನಷ್ಟವಾಗುವುದಿಲ್ಲ ಎಂದು ರಾಜ್ಯ ಮುಖ್ಯಸ್ಥ ನೈನಾರ್ ನಾಗೇಂದ್ರನ್ ಶುಕ್ರವಾರ ಹೇಳಿದ್ದಾರೆ.

ಪಕ್ಷವನ್ನು ತೊರೆದು ತಮ್ಮದೇ ಆದ ಪಕ್ಷವನ್ನು ಪ್ರಾರಂಭಿಸುವ ಅಣ್ಣಾಮಲೈ ಅವರ ನಿರ್ಧಾರವು ಬಿಜೆಪಿಗೆ ಹಿನ್ನಡೆಯಾಗುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರೂ ರಾಜಕೀಯ ಪಕ್ಷವನ್ನು ಪ್ರಾರಂಭಿಸಲು ಸ್ವತಂತ್ರರು ಎಂದು ಅವರು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಅಣ್ಣಾಮಲೈ ಅವರ ರಾಜೀನಾಮೆಯಿಂದ ಬಿಜೆಪಿಗೆ ನಷ್ಟವಾಗುವುದಿಲ್ಲ. ವಿಶ್ವದ ಅತಿದೊಡ್ಡ ಪಕ್ಷವಾಗಿರುವ ಬಿಜೆಪಿಗೆ ಇದರಿಂದ ಯಾವುದೇ ಹಿನ್ನಡೆಯಾಗುವುದಿಲ್ಲ. ಪಕ್ಷವು ತನ್ನ ಸಿದ್ಧಾಂತದಲ್ಲಿ ದೃಢವಾಗಿರುತ್ತದೆ' ಎಂದು ತಿಳಿಸಿದರು.

'ರಾಜ್ಯಕ್ಕೆ ಪ್ರಾಮುಖ್ಯತೆ ನೀಡುತ್ತಿಲ್ಲ ಎಂಬ ಆರೋಪ ಸುಳ್ಳು. ಏಕೆಂದರೆ, ಪ್ರಧಾನಿ ನರೇಂದ್ರ ಮೋದಿ ಯಾವುದೇ ದೇಶಕ್ಕೆ ಭೇಟಿ ನೀಡಿದಾಗಲೆಲ್ಲ ತಮಿಳುನಾಡು, ಅದರ ಪರಂಪರೆ ಮತ್ತು ಶ್ರೇಷ್ಠತೆಯ ಬಗ್ಗೆ ಮಾತನಾಡುತ್ತಾರೆ' ಎಂದು ಬಿಜೆಪಿ ಅಧ್ಯಕ್ಷರು ಹೇಳಿದರು.

ಬಿಜೆಪಿ ತೊರೆದು ಸ್ವಂತ ಪಕ್ಷವನ್ನು ಸ್ಥಾಪಿಸುವ ಅಣ್ಣಾಮಲೈ ಅವರ ನಿರ್ಧಾರವನ್ನು ಎಂಡಿಎಂಕೆ ನಾಯಕ ದುರೈ ವೈಕೊ ಶ್ಲಾಘಿಸಿದರು. 'ನನ್ನ ಸಹೋದರ ಅಣ್ಣಾಮಲೈ ಅವರಿಗೆ ಎಲ್ಲ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ ಮತ್ತು ಅವರು ದ್ರಾವಿಡ ಸಿದ್ಧಾಂತವನ್ನು ಅನುಸರಿಸಲಿ ಎಂದು ಆಶಿಸುತ್ತೇನೆ' ಎಂದು ಸುದ್ದಿಗಾರರಿಗೆ ತಿಳಿಸಿದರು.

Nainar Nagendran
ಅಣ್ಣಾಮಲೈ ರಾಜೀನಾಮೆ ಕೊನೆಗೂ ಅಂಗೀಕಾರ: ಆರು ವರ್ಷಗಳ ಬಿಜೆಪಿ ಸಂಬಂಧಕ್ಕೆ ತಿಲಾಂಜಲಿ!

ಹೊಸ ಪಕ್ಷ ಸ್ಥಾಪನೆ

ಇದಕ್ಕೂ ಮುನ್ನ, ಬಿಜೆಪಿ ತೊರೆದ ಅಣ್ಣಾಮಲೈ ಮಾತನಾಡಿ, ತಮ್ಮ ಗುರಿಗಳು ದೊಡ್ಡದಾಗಿದ್ದು, ಎಲ್ಲರನ್ನೂ ಒಳಗೊಳ್ಳುವ ಕಾರ್ಯಸೂಚಿಯೊಂದಿಗೆ ಹೊಸ ರಾಜಕೀಯ ಪಕ್ಷವನ್ನು ಪ್ರಾರಂಭಿಸುವುದಾಗಿ ಮತ್ತು ಮುಂದಿನ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಸ್ಪರ್ಧಿಸುವುದಾಗಿ ಹೇಳಿದರು.

ಸುಮಾರು ಆರು ವರ್ಷಗಳ ಕಾಲ ಬಿಜೆಪಿಯಲ್ಲಿದ್ದ ಅಣ್ಣಾಮಲೈ, 'ಹೊಸ ರೀತಿಯ ರಾಜಕೀಯವನ್ನು ಪ್ರಾರಂಭಿಸಲು, ನಾನು ಬಿಜೆಪಿಯನ್ನು ಗೌರವಯುತ ರೀತಿಯಲ್ಲಿ ತೊರೆದಿದ್ದೇನೆ. ಗುರಿಗಳು ದೊಡ್ಡದಾಗಿದೆ ಮತ್ತು ಹೆಚ್ಚಿನ ಜನರನ್ನು ಕರೆದೊಯ್ಯಬೇಕಾಗಿದೆ. 'ಇಂದಿನಿಂದ, ಹೊಸ ಹಾದಿ, ಹೊಸ ಹೋರಾಟ, ಹೊಸ ರಾಜಕೀಯ ಚಳುವಳಿ'. ರಾಜ್ಯದಲ್ಲಿ ಹೊಸ ಪಕ್ಷವನ್ನು ಪ್ರಾರಂಭಿಸಲಾಗುವುದು ಮತ್ತು ಮುಂದಿನ ಚುನಾವಣೆಗಳಲ್ಲಿ ಹೋರಾಡಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com