

ಪುಣೆ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ ದೇಶಾದ್ಯಂತ ಪ್ರತಿಭಟನೆ ಆರಂಭಿಸಿದ್ದು, ಇಂದು ಪುಣೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡರು.
ಸಂಘಟಕರು ಸಾಮಾಜಿಕ ಮಾಧ್ಯಮವನ್ನು ಮೀರಿ ಅನೇಕ ನಗರಗಳಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದು, ಇಂದು ಪುಣೆಯಲ್ಲಿ ಶಾಂತಿಯುತ ಪ್ರತಿಭಟನೆ ನಡೆದಿರುವುದಾಗಿ CJP ತಿಳಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪುಣೆಯಲ್ಲಿ ನಡೆದ ಶಾಂತಿಯುತ ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡರು. ಮುಂದಿನ ದಿನಗಳಲ್ಲಿ ದೇಶದ ವಿವಿಧೆಡೆಗಳಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದೆ.
ಮತ್ತೊಂದು ಪ್ರತ್ಯೇಕ ಪೋಸ್ಟ್ ನಲ್ಲಿ ಮುಂದಿನ ಪ್ರತಿಭಟನೆಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಯುವಜನತೆ ಪಾಲ್ಗೊಳುವಂತೆ ಕರೆ ನೀಡಿದೆ.
ಜೂನ್ 12 ರಂದು ಲಖನೌ, ಜೂನ್ 13 ರಂದು ಅಮೃತಸರ, ಜೂನ್ 14 ರಂದು ಹೈದರಾಬಾದ್ ಮತ್ತು ಜೂನ್ 15 ರಂದು ಜೈಪುರದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಕಾಕ್ರೋಚ್ ಜನತಾ ಪಕ್ಷ ಮಾಹಿತಿ ಹಂಚಿಕೊಡಿದೆ.
ದೆಹಲಿಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ: ಈ ತಿಂಗಳ ಕೊನೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಬೃಹತ್ ಪ್ರತಿಭಟನೆಗೆ ಸಂಘಟನೆ ಮನವಿ ಮಾಡಿದೆ. ದೇಶಾದ್ಯಂತ ಯುವಕರು ಜೂನ್ 20 ರಂದು ಬೃಹತ್ ಪ್ರತಿಭಟನೆಗಾಗಿ ದೆಹಲಿಗೆ ಬರಬೇಕೆಂದು ಮನವಿ ಮಾಡಿದೆ.
Advertisement