

ಮುಂಬಯಿ: ಮಹಾರಾಷ್ಟ್ರದಲ್ಲಿ ಆಪರೇಷನ್ ಟೈಗರ್ಗೆ ಠಾಕ್ರೆ ಬಣದ ಆರು ಸಂಸದರು ಬಲಿಯಾಗಿರುವ ನಡುವೆಯೇ ಸೋಮವಾರಪಕ್ಷದ ಬಂಡಾಯ ಸಂಸದರ ವಿರುದ್ಧ ಆದಿತ್ಯ ಠಾಕ್ರೆತೀವ್ರ ವಾಗ್ದಾಳಿ ನಡೆಸಿದ್ದು, ರಾಜಕೀಯ ಲಾಭಕ್ಕಾಗಿ ತಮ್ಮ ಸ್ಥಾನ, ನಿಷ್ಠೆ ಹಾಗೂ ಖ್ಯಾತಿಯನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಪಕ್ಷ ಬದಲಾಯಿಸಿದ ಸಂಸದರು ಮಹಾ ವಿಕಾಸ್ ಅಘಾಡಿ ಮತ್ತು ಇಂಡಿಯಾ ಬ್ಲಾಕ್ ವೇದಿಕೆಯಲ್ಲಿ ತಮ್ಮನ್ನು ಆಯ್ಕೆ ಮಾಡಿದ ಮತದಾರರ ಆದೇಶಕ್ಕೆ ದ್ರೋಹ ಬಗೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಕ್ಷಾಂತರ ಮಾಡಿದ ದುರಾಶೆಯ ಸಂಸದರೇ, ನೀವು ಈ ಕೆಳಗಿನ ವಿಷಯಗಳನ್ನು ಮೊದಲಿಗಿಂತಲೂ ಹೆಚ್ಚು ಬಲವಾಗಿ ಸಾಬೀತುಪಡಿಸುತ್ತಿದ್ದೀರಿ. ನಿಮ್ಮ ನಿಷ್ಠೆ, ಗೌರವವನ್ನು ಅತ್ಯಂತ ನಿರ್ಲಜ್ಜವಾಗಿ ಮಾರಾಟಕ್ಕಿಟ್ಟಿದ್ದೀರಿ. ಸರ್ಕಾರವು ಪಕ್ಷಪಾತಿಯಾಗಿದೆ.
ಸಾರ್ವಜನಿಕರ ಹಣವನ್ನು ರಾಜಕೀಯವಾಗಿ ನಿಧಿಗಳಂತೆ ಬಳಸಿಕೊಳ್ಳುತ್ತಿದೆ ಎಂದಿದ್ದಾರೆ.ಈಗ ಪಕ್ಷ ಬದಲಾಯಿಸುತ್ತಿರುವವರೆಲ್ಲರೂ ಎನ್ಡಿಎ ವಿರುದ್ಧವಾಗಿ, ಎಂವಿಎ ಮತ್ತು ಇಂಡಿಯಾ ಮೈತ್ರಿಕೂಟದಡಿ ಗೆಲುವು ಸಾಧಿಸಿದ್ದಾರೆ. ಇವರೆಲ್ಲರಿಗೂ ಚುನಾವಣೆಯಲ್ಲಿ ಶಿವಸೇನೆ(ಯುಬಿಟಿ), ಕಾಂಗ್ರೆಸ್, ಎನ್ಸಿಪಿ(ಎಸ್ಪಿ) ಪಕ್ಷಗಳ ನಾಯಕರು ಪ್ರಚಾರ ಮಾಡಿದ್ದರು. ಈಗ ಸೈದ್ಧಾಂತಿಕ ವಾದಗಳ ಮೂಲಕ ತಮ್ಮ ಪಕ್ಷಾಂತರವನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
Advertisement