ಸರ್ಕಾರದ ವಿರುದ್ಧ ಪೋಸ್ಟ್: ಬಿಹಾರದಲ್ಲಿ ಯುವಕನ ಎನ್ ಕೌಂಟರ್; ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

ಪೊಲೀಸ್ ಕ್ರಮದ ಬಗ್ಗೆ ಪ್ರಶ್ನೆಗಳು ಎದ್ದಿವೆ, ಸ್ಥಳೀಯ ಮಟ್ಟದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ ಮತ್ತು ಆಡಳಿತಾರೂಢ ಬಿಜೆಪಿಯೊಳಗಿನಿಂದಲೂ ಕಳವಳದ ಧ್ವನಿಗಳು ಹೊರಹೊಮ್ಮುತ್ತಿವೆ.
ಸರ್ಕಾರದ ವಿರುದ್ಧ ಪೋಸ್ಟ್: ಬಿಹಾರದಲ್ಲಿ ಯುವಕನ ಎನ್ ಕೌಂಟರ್; ನ್ಯಾಯಾಂಗ ತನಿಖೆಗೆ ಸಿಎಂ ಆದೇಶ
Updated on

ಪಾಟ್ನ: ಬಿಹಾರದ ಭೋಜ್‌ಪುರ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 28 ವರ್ಷದ ಭರತ್ ಭೂಷಣ್ ತಿವಾರಿ ಹತ್ಯೆ ರಾಜಕೀಯ ಬಿರುಗಾಳಿ ಎಬ್ಬಿಸಿದೆ.

ಪೊಲೀಸ್ ಕ್ರಮದ ಬಗ್ಗೆ ಪ್ರಶ್ನೆಗಳು ಎದ್ದಿವೆ, ಸ್ಥಳೀಯ ಮಟ್ಟದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ ಮತ್ತು ಆಡಳಿತಾರೂಢ ಬಿಜೆಪಿಯೊಳಗಿನಿಂದಲೂ ಕಳವಳದ ಧ್ವನಿಗಳು ಹೊರಹೊಮ್ಮುತ್ತಿವೆ.

ಬಿಹಾರ ಸರ್ಕಾರ ಈಗ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಆದರೆ ತಿವಾರಿ ಕಾರ್ಯಾಚರಣೆಯ ಸಮಯದಲ್ಲಿ ಪೊಲೀಸರ ವಿರುದ್ಧ ಗುಂಡು ಹಾರಿಸಿದ್ದಾರೆ ಎಂದು ಹೇಳಲಾಗಿದ್ದು ಪೊಲೀಸರು ಎನ್‌ಕೌಂಟರ್ ನ್ನು ಸಮರ್ಥಿಸಿಕೊಂಡಿದ್ದಾರೆ, ಇದು ಆತ್ಮರಕ್ಷಣೆಗಾಗಿ ನಡೆಸಲ್ಪಟ್ಟ ಎನ್ ಕೌಂಟರ್ ಎಂದು ಹೇಳಿಕೊಂಡಿದ್ದಾರೆ.

ಬಿಹಾರ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಎನ್‌ಕೌಂಟರ್ ಬಗ್ಗೆ ಸ್ವತಂತ್ರ ನ್ಯಾಯಾಂಗ ತನಿಖೆಯನ್ನು ಘೋಷಿಸಿದ್ದಾರೆ. ತನಿಖೆಯು ಘಟನೆಯ ಎಲ್ಲಾ ಅಂಶಗಳನ್ನು ನಿಷ್ಪಕ್ಷಪಾತ ಮತ್ತು ಪಾರದರ್ಶಕತೆಯೊಂದಿಗೆ ಪರಿಶೀಲಿಸುತ್ತದೆ ಎಂದು ಸರ್ಕಾರ ಹೇಳಿದೆ.

ಸರ್ಕಾರದ ವಿರುದ್ಧ ಪೋಸ್ಟ್: ಬಿಹಾರದಲ್ಲಿ ಯುವಕನ ಎನ್ ಕೌಂಟರ್; ನ್ಯಾಯಾಂಗ ತನಿಖೆಗೆ ಸಿಎಂ ಆದೇಶ
CM ಡಿ.ಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್: Facebook ಖಾತೆಗಳ ವಿರುದ್ಧ FIR ದಾಖಲು

ಭೋಜ್‌ಪುರ ಎನ್‌ಕೌಂಟರ್ ಬಗ್ಗೆ ನೀವು ತಿಳಿದುಕೊಳ್ಳಬೇಕಾದದ್ದು

28 ವರ್ಷದ ಭರತ್ ಭೂಷಣ್ ತಿವಾರಿ, ಭೋಜ್‌ಪುರ ಜಿಲ್ಲೆಯ ಶಹಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬಿಲೌತಿ ಗ್ರಾಮದ ನಿವಾಸಿ. ಸಾಮಾಜಿಕ ಮಾಧ್ಯಮ ಮತ್ತು ಅಧಿಕಾರಿಗಳೊಂದಿಗೆ ಸಂವಹನ ನಡೆಸುವ ಮೂಲಕ ಅವರು ಸ್ಥಳೀಯವಾಗಿ ಸಾರ್ವಜನಿಕ ಸಮಸ್ಯೆಗಳಿಗೆ ಧ್ವನಿ ಎತ್ತುವಲ್ಲಿ ಹೆಸರುವಾಸಿಯಾಗಿದ್ದರು. ಬಡ ಕುಟುಂಬಗಳು, ಪ್ರವಾಹ ಪೀಡಿತರು ಮತ್ತು ಸ್ಥಳಾಂತರಗೊಂಡ ಸಮುದಾಯಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಎತ್ತಿ ತೋರಿಸಿದ ಸಾಮಾಜಿಕ ಕಾರ್ಯಕರ್ತ ಎಂದು ಗ್ರಾಮಸ್ಥರು ಅವರನ್ನು ಬಣ್ಣಿಸಿದ್ದಾರೆ.

ಬಿಹಾರ ಪೊಲೀಸರ ಪ್ರಕಾರ, ಜೂನ್ 17 ರಂದು ತಿವಾರಿ ಬಿಲೌಟಿ ಗ್ರಾಮದಲ್ಲಿ ಪಿಸ್ತೂಲ್ ಹಿಡಿದು ಸಾರ್ವಜನಿಕವಾಗಿ ಗುಂಡು ಹಾರಿಸುತ್ತಿದ್ದಾರೆ ಎಂಬ ಮಾಹಿತಿ ಬಂದಿತ್ತು. ಎಸ್‌ಟಿಎಫ್ ಸಿಬ್ಬಂದಿಯೊಂದಿಗೆ ಪೊಲೀಸ್ ತಂಡ ಸ್ಥಳಕ್ಕೆ ತಲುಪಿತು. ಶರಣಾಗುವಂತೆ ಪದೇ ಪದೇ ಕೇಳಿಕೊಂಡರೂ, ಅವರು ತಂಡದ ಮೇಲೆ ಗುಂಡು ಹಾರಿಸುತ್ತಲೇ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮರಕ್ಷಣೆ ಮತ್ತು ಸ್ಥಳೀಯ ನಿವಾಸಿಗಳನ್ನು ರಕ್ಷಿಸಲು ನಾವು ಪ್ರತಿದಾಳಿ ನಡೆಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com