ಬಿಹಾರ ಸಿಎಂ ನಿತೀಶ್ ಕುಮಾರ್ ಪುತ್ರ ನಿಶಾಂತ್ ರಾಜ್ಯ ರಾಜಕಾರಣಕ್ಕೆ ಎಂಟ್ರಿ: ಮಾ.8ಕ್ಕೆ JD(U) ಸೇರ್ಪಡೆ

ಇತ್ತೀಚೆಗೆ ತನಕ ರಾಜಕೀಯದಲ್ಲಿ ಹೆಚ್ಚಿನ ಆಸಕ್ತಿ ತೋರಿಸದಿದ್ದ ನಿಶಾಂತ್, ಈಗ ರಾಜ್ಯ ರಾಜಕೀಯಕ್ಕೆ ಸಂಪೂರ್ಣವಾಗಿ ಪ್ರವೇಶಿಸಲು ಸಿದ್ಧವಾಗಿರುವ ಸೂಚನೆಗಳನ್ನು ನೀಡಿದ್ದಾರೆ.
Nitish Kumar greets his son Nishant Kumar on his birthday, in Patna.
ನಿತೀಶ್ ಕುಮಾರ್ ಅವರು ಪಾಟ್ನಾದಲ್ಲಿ ತಮ್ಮ ಪುತ್ರ ನಿಶಾಂತ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿದರು.
Updated on

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಶೀಘ್ರದಲ್ಲೇ ಜೆಡಿಯು ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಹೊಸ ಸಚಿವ ಸಂಪುಟದಲ್ಲಿ ರಾಜ್ಯದ ಮುಂದಿನ ಉಪ ಮುಖ್ಯಮಂತ್ರಿ ಆಗುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆ, ಅವರು ಇಂದು ಪಕ್ಷದ ಹಿರಿಯ ನಾಯಕರು ಮತ್ತು ಯುವ ಶಾಸಕರೊಂದಿಗೆ ಚರ್ಚೆ ನಡೆಸಿದರು.

ಇತ್ತೀಚೆಗೆ ತನಕ ರಾಜಕೀಯದಲ್ಲಿ ಹೆಚ್ಚಿನ ಆಸಕ್ತಿ ತೋರಿಸದಿದ್ದ ನಿಶಾಂತ್, ಈಗ ರಾಜ್ಯ ರಾಜಕೀಯಕ್ಕೆ ಸಂಪೂರ್ಣವಾಗಿ ಪ್ರವೇಶಿಸಲು ಸಿದ್ಧವಾಗಿರುವ ಸೂಚನೆಗಳನ್ನು ನೀಡಿದ್ದಾರೆ. ಆದರೆ ರಾಜ್ಯ ರಾಜಕೀಯದಲ್ಲಿ ಈಗಾಗಲೇ ಸಕ್ರಿಯವಾಗಿರುವ ಯುವ ನಾಯಕರಾದ ತೇಜಸ್ವಿ ಯಾದವ್, ಚಿರಾಗ್ ಪಾಸ್ವಾನ್, ಮತ್ತು ಪ್ರಶಾಂತ್ ಕಿಶೋರ್ ನಡುವೆ ತನ್ನದೇ ಸ್ಥಾನವನ್ನು ನಿರ್ಮಿಸಿಕೊಳ್ಳಬೇಕಿದೆ.

Nitish Kumar greets his son Nishant Kumar on his birthday, in Patna.
ನಿತೀಶ್ ಕುಮಾರ್​​​ಗೆ ರಾಷ್ಟ್ರ ರಾಜಕಾರಣಕ್ಕೆ ಸ್ವಾಗತ; ಬಿಹಾರ ಸಿಎಂ ಆಗಿ "ಅದ್ಭುತ" ಅವಧಿ: ಅಮಿತ್ ಶಾ

ನಿಶಾಂತ್ ಇಂದು ಸಭೆಯನ್ನು ಸಂಜಯ್ ಕುಮಾರ್ ಜ್ಹಾ ಅವರ ನಿವಾಸದಲ್ಲಿ ನಡೆಸಿದರು. ಸಭೆಯಲ್ಲಿ ಭಾಗವಹಿಸಿದವರು, ನಿಶಾಂತ್ ಅವರಿಗೆ ಪಕ್ಷದ ಸಂಘಟನೆಯಲ್ಲಿ ದೊಡ್ಡ ಜವಾಬ್ದಾರಿ ನೀಡಲಾಗುವ ಸಾಧ್ಯತೆ ಇದೆ ಎಂದು ಹೇಳಿದರು. ಜೊತೆಗೆ, JD(U) ಕಚೇರಿಯ ಹೊರಗೆ ನಿಶಾಂತ್ ಅವರನ್ನು ಸ್ವಾಗತಿಸುವ ಪೋಸ್ಟರ್‌ಗಳು ಕೂಡ ಕಾಣಿಸಿಕೊಂಡವು.

ನಿಶಾಂತ್ ಮಾರ್ಚ್ 8ರಂದು ಅಧಿಕೃತವಾಗಿ ರಾಜಕೀಯ ಪ್ರವೇಶ ಮಾಡಿ ಜೆಡಿಯು ಸೇರ್ಪಡೆಯಾಗಲಿದ್ದಾರೆ. ಅವರು ರಾಂಚಿಯ ಬಿರ್ಲಾ ಇನ್ಸ್ಟ್ ಟ್ಯೂಟ್ ಆಫ್ ಟೆಕ್ನಾಲಜಿಯಿಂದ ಸಾಫ್ಟ್‌ವೇರ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿದ್ದಾರೆ. ಅವರು ಇದುವರೆಗೆ ರಾಜಕೀಯದಿಂದ ಆದಷ್ಟು ದೂರವಿದ್ದು, ಆಧ್ಯಾತ್ಮಿಕತೆಯತ್ತ ಆಸಕ್ತಿ ಹೊಂದಿರುವವರಾಗಿ ಪರಿಚಿತರಾಗಿದ್ದರು.

Nitish Kumar greets his son Nishant Kumar on his birthday, in Patna.
ರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ

ನಿಶಾಂತ್ ಕುಮಾರ್ ಅವರ ರಾಜಕೀಯ ಪ್ರವೇಶವು, ವಂಶಪಾರಂಪರ್ಯ ರಾಜಕೀಯದ ವಿರುದ್ಧ ತೀವ್ರವಾಗಿ ಮಾತನಾಡುತ್ತಿದ್ದ ನಿತೀಶ್ ಕುಮಾರ್ ಅವರ ನಿಲುವಿಗೆ ವಿರುದ್ಧವಾಗಿದೆ ಎಂಬ ಚರ್ಚೆಯೂ ನಡೆಯುತ್ತಿದೆ. ಗುರುವಾರ ನಿತೀಶ್ ಕುಮಾರ್ ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು, ಇದರಿಂದ ನಿಶಾಂತ್ ಅವರ ಸಕ್ರಿಯ ರಾಜಕೀಯ ಪ್ರವೇಶಕ್ಕೆ ದಾರಿ ಸಾಗಿದೆ.

ಸಭೆಯ ನಂತರ ಜೆಡಿಯು ಎಂಎಲ್‌ಸಿ ನೀರಜ್ ಕುಮಾರ್ ಮಾತನಾಡಿ, ಕೇಂದ್ರ ಸಚಿವ ರಾಜೀವ್ ರಂಜನ್ ಸಿಂಗ್ ಹಾಗೂ ಸಂಸದ ಸಂಜಯ್ ಜ್ಹಾ ಅವರ ಸಲಹೆಯ ಮೇರೆಗೆ ನಿಶಾಂತ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿದರು.

ಬಿಹಾರಕ್ಕಾಗಿ ದುಡಿಯುವುದು ಮುಂದುವರಿಸುತ್ತೇನೆ

ಇದಾದ ಬಳಿಕ ನಿತೀಶ್ ಕುಮಾರ್ ತಮ್ಮ ಪಕ್ಷದ ನಾಯಕರಿಗೆ, ನಾನು ಎಲ್ಲಿಗೂ ಹೋಗುವುದಿಲ್ಲ. ಪಕ್ಷವನ್ನು ಮಾರ್ಗದರ್ಶನ ಮಾಡುತ್ತಲೇ ಇರುತ್ತೇನೆ, ರಾಜ್ಯ ಸರ್ಕಾರದ ಕಾರ್ಯಗಳನ್ನು ಗಮನಿಸುತ್ತೇನೆ ಎಂದು ಭರವಸೆ ನೀಡಿದರು.

ನಾನು ಬಿಹಾರಕ್ಕೆ ಆಗಾಗ್ಗೆ ಭೇಟಿ ನೀಡಿ ಇಲ್ಲಿ ಸಮಯ ಕಳೆಯುತ್ತೇನೆ. ಯಾವುದೇ ಆತಂಕಪಡಬೇಡಿ. ಬಿಹಾರದ ಅಭಿವೃದ್ಧಿಗಾಗಿ ನಾವು ಸಾಕಷ್ಟು ಕೆಲಸ ಮಾಡಿದ್ದೇವೆ, ಮುಂದೆಯೂ ಇನ್ನಷ್ಟು ಮಾಡುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com