ಇಂಧನ ಸುರಕ್ಷತೆ ಕುರಿತು ಇರಾನ್ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಮೂರು ಬಾರಿ ಮಾತುಕತೆ

ಇದೇ ವೇಳೆ ಅಜೆರ್ಬೈಜಾನ್ ಮತ್ತು ಅರ್ಮೇನಿಯಾದ ಭೂ ಗಡಿಗಳ ಮೂಲಕ ದೇಶವನ್ನು ತೊರೆಯಲು ಬಯಸುವ ಇರಾನ್‌ನಲ್ಲಿರುವ ತನ್ನ ಪ್ರಜೆಗಳಿಗೆ ಭಾರತ ಸಹಾಯ ಮಾಡುತ್ತಿದೆ ಎಂದು ಜೈಸ್ವಾಲ್ ತಿಳಿಸಿದರು.
Jaishankar held three talks with Iran FM on energy security; ‘premature to say anything more’, says MEA
ರಣಧೀರ್ ಜೈಸ್ವಾಲ್
Updated on

ನವದೆಹಲಿ: ಇತ್ತೀಚಿನ ದಿನಗಳಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವರೊಂದಿಗೆ ಮೂರು ಬಾರಿ ಮಾತುಕತೆ ನಡೆಸಿದ್ದು, ಪ್ರಾದೇಶಿಕ ಉದ್ವಿಗ್ನತೆಗಳ ನಡುವೆಯೂ ಹಡಗು ಸಾಗಣೆಯ ಸುರಕ್ಷತೆ ಮತ್ತು ಭಾರತದ ಇಂಧನ ಸುರಕ್ಷತೆಯ ಕುರಿತು ಚರ್ಚಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಗುರುವಾರ ತಿಳಿಸಿದೆ.

ಇಂದು ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು, ಇಬ್ಬರು ನಾಯಕರ ನಡುವಿನ ಇತ್ತೀಚಿನ ಸಂಭಾಷಣೆಯು ಸಮುದ್ರ ಸುರಕ್ಷತೆ ಮತ್ತು ಇಂಧನ ಪೂರೈಕೆಯ ಮೇಲೆ ಕೇಂದ್ರೀಕರಿಸಿದೆ ಎಂದು ಹೇಳಿದ್ದಾರೆ.

"ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಮತ್ತು ಇರಾನ್ ವಿದೇಶಾಂಗ ಸಚಿವರು ಇತ್ತೀಚಿನ ದಿನಗಳಲ್ಲಿ ಮೂರು ಬಾರಿ ಮಾತುಕತೆ ನಡೆಸಿದ್ದಾರೆ. ಕೊನೆಯ ಸಂಭಾಷಣೆಯು ಹಡಗು ಸಾಗಣೆಯ ಸುರಕ್ಷತೆ ಮತ್ತು ಭಾರತದ ಇಂಧನ ಭದ್ರತೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚಿಸಲಾಗಿದೆ. ಅದನ್ನು ಮೀರಿ ನಾನು ಈ ಹಂತದಲ್ಲಿ ಏನನ್ನೂ ಹೇಳುವುದಿಲ್ಲ" ಎಂದು ಜೈಸ್ವಾಲ್ ತಿಳಿಸಿದ್ದಾರೆ.

Jaishankar held three talks with Iran FM on energy security; ‘premature to say anything more’, says MEA
ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಗೆಲುವು: ಹಾರ್ಮುಜ್ ಜಲಸಂಧಿಯಿಂದ ಮುಂಬೈಗೆ ಬಂದ ಮೊದಲ ತೈಲ ಹಡಗು!

ಭಾರತದ ತೈಲ ಸಾಗಣೆಯ ಹಡಗುಗಳು ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗಲು ಇರಾನ್ ಅನುಮತಿಸಿದೆ ಎಂಬ ವರದಿಗಳ ಕುರಿತ ಪ್ರಶ್ನೆಗಳಿಗೆ ವಿದೇಶಾಂಗ ಸಚಿವಾಲಯದ ವಕ್ತಾರರು ಈ ರೀತಿ ಉತ್ತರಿಸಿದ್ದಾರೆ.

ಜಲಸಂಧಿಯ ಮೂಲಕ ಹಾದುಹೋಗುವ ಎರಡು ಹಡಗುಗಳ ವರದಿಗಳ ಕುರಿತು ಪ್ರತಿಕ್ರಿಯಿಸಿದ ಜೈಸ್ವಾಲ್, ಈ ವಿಷಯದ ಬಗ್ಗೆ ನನಗೆ ಹೆಚ್ಚಿನ ಸ್ಪಷ್ಟತೆ ಇಲ್ಲ. ಆದರೆ ಸಂಜೆ ನಂತರ ಸರ್ಕಾರವು ವಿವರವಾದ ಮಾಹಿತಿಯನ್ನು ನೀಡುತ್ತದೆ ಎಂದು ಹೇಳಿದರು.

ಇದೇ ವೇಳೆ ಅಜೆರ್ಬೈಜಾನ್ ಮತ್ತು ಅರ್ಮೇನಿಯಾದ ಭೂ ಗಡಿಗಳ ಮೂಲಕ ದೇಶವನ್ನು ತೊರೆಯಲು ಬಯಸುವ ಇರಾನ್‌ನಲ್ಲಿರುವ ತನ್ನ ಪ್ರಜೆಗಳಿಗೆ ಭಾರತ ಸಹಾಯ ಮಾಡುತ್ತಿದೆ ಎಂದು ಜೈಸ್ವಾಲ್ ತಿಳಿಸಿದರು.

"ಇರಾನ್‌ನಲ್ಲಿದ್ದ ಅಥವಾ ಅಲ್ಲಿಗೆ ತೆರಳಿರುವ ಸುಮಾರು 9,000 ಭಾರತೀಯ ಪ್ರಜೆಗಳಲ್ಲಿ ವಿದ್ಯಾರ್ಥಿಗಳು, ನಾವಿಕರು, ವ್ಯಾಪಾರಸ್ಥರು, ವೃತ್ತಿಪರರು ಮತ್ತು ಕೆಲವು ಪ್ರವಾಸಿಗರು ಸೇರಿದ್ದಾರೆ... ಹಲವಾರು ಭಾರತೀಯ ಪ್ರಜೆಗಳು, ಹೆಚ್ಚಾಗಿ ವಿದ್ಯಾರ್ಥಿಗಳು, ಆ ದೇಶವನ್ನು ತೊರೆದು ವಾಪಸ್ ಮನೆಗೆ ಬಂದಿದ್ದಾರೆ.

ಟೆಹ್ರಾನ್‌ನಲ್ಲಿ ನೆಲೆಸಿದ್ದ ವಿದ್ಯಾರ್ಥಿಗಳು ಮತ್ತು ಪ್ರವಾಸಿಗರು ಸೇರಿದಂತೆ ಹಲವಾರು ಭಾರತೀಯ ಪ್ರಜೆಗಳನ್ನು ನಾವು ದೇಶದ ಇತರ ಸುರಕ್ಷಿತ ಸ್ಥಳಗಳು ಮತ್ತು ನಗರಗಳಿಗೆ ಸ್ಥಳಾಂತರಿಸಿದ್ದೇವೆ. ಅಜೆರ್ಬೈಜಾನ್ ಮತ್ತು ಅರ್ಮೇನಿಯಾಗೆ ಪ್ರಯಾಣಿಸಲು ಮತ್ತು ಅಲ್ಲಿಂದ ಮನೆಗೆ ಮರಳಲು ವಾಣಿಜ್ಯ ವಿಮಾನದಲ್ಲಿ ಪ್ರಯಾಣಿಸಲು ಬಯಸುವ ಭಾರತೀಯ ಪ್ರಜೆಗಳಿಗೆ ನಾವು ಸಹಾಯ ಮಾಡುತ್ತಿದ್ದೇವೆ. ನಾವು ಅವರಿಗೆ ವೀಸಾ ಹಾಗೂ ಭೂ ಗಡಿ ದಾಟುವಿಕೆಯಲ್ಲೂ ಸಹಾಯ ಮಾಡುತ್ತಿದ್ದೇವೆ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com