ಚುನಾವಣಾ ಆಯೋಗದಿಂದ ಇಂದು ಸಂಜೆ ಸುದ್ದಿಗೋಷ್ಠಿ: 5 ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ ಸಾಧ್ಯತೆ

ಚುನಾವಣಾ ಆಯೋಗ ಇಂದು ಸಂಜೆ 4 ಗಂಟೆಗೆ ಕರೆದಿರುವ ಸುದ್ದಿಗೋಷ್ಠಿ ಮಹತ್ವ ಪಡೆದುಕೊಂಡಿದೆ. ಚುನಾವಣೆಯ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ.
ECI Casual Images
ಚುನಾವಣಾ ಆಯೋಗದ ಸಾಂದರ್ಭಿಕ ಚಿತ್ರ
Updated on

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ತಮಿಳುನಾಡು ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕ ಇಂದು ಪ್ರಕಟವಾಗುವ ಸಾಧ್ಯತೆಯಿದೆ.

ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ಇಂದು ಸಂಜೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಲಿದೆ. ಈ ರಾಜ್ಯಗಳ ವಿಧಾನಸಭೆ ಅವಧಿ ಮೇ ಮತ್ತು ಜೂನ್ ತಿಂಗಳ ಬೇರೆ ಬೇರೆ ದಿನಗಳಂದು ಅಂತ್ಯವಾಗಲಿದೆ.

ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಇಂದು ಸಂಜೆ 4 ಗಂಟೆಗೆ ಕರೆದಿರುವ ಸುದ್ದಿಗೋಷ್ಠಿ ಮಹತ್ವ ಪಡೆದುಕೊಂಡಿದೆ. ಚುನಾವಣೆಯ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ.

ECI Casual Images
ತಮಿಳುನಾಡು ವಿಧಾನಸಭೆ ಚುನಾವಣೆ: TVK ಜೊತೆಗೆ ಮೈತ್ರಿಗಾಗಿ ಮಾತುಕತೆ! ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದೇನು?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಈ ರಾಜ್ಯಗಳಲ್ಲಿ ರಾಜಕೀಯ ಚಟುವಟಿಕೆಗಳು ಈಗಾಗಲೇ ಗರಿಗೆದರಿದ್ದು, ವಿವಿಧ ಪಕ್ಷಗಳ ನಾಯಕರು ಹಲವು ಕಾರ್ಯಕ್ರಮ ಆಯೋಜನೆ ಮೂಲಕ ಜನರನ್ನು ಸಂಪರ್ಕಿಸುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com