ECI Casual Images
ಚುನಾವಣಾ ಆಯೋಗದ ಸಾಂದರ್ಭಿಕ ಚಿತ್ರ

ಚು. ಆಯೋಗದಿಂದ ಇಂದು ಸಂಜೆ ಮಹತ್ವದ ಸುದ್ದಿಗೋಷ್ಠಿ: 5 ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ ಸಾಧ್ಯತೆ

ಚುನಾವಣಾ ಆಯೋಗ ಇಂದು ಸಂಜೆ 4 ಗಂಟೆಗೆ ಕರೆದಿರುವ ಸುದ್ದಿಗೋಷ್ಠಿ ಮಹತ್ವ ಪಡೆದುಕೊಂಡಿದೆ. ಚುನಾವಣೆಯ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ.
Published on

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ತಮಿಳುನಾಡು ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕ ಇಂದು ಪ್ರಕಟವಾಗುವ ಸಾಧ್ಯತೆಯಿದೆ.

ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ಇಂದು ಸಂಜೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಲಿದೆ. ಈ ರಾಜ್ಯಗಳ ವಿಧಾನಸಭೆ ಅವಧಿ ಮೇ ಮತ್ತು ಜೂನ್ ತಿಂಗಳ ಬೇರೆ ಬೇರೆ ದಿನಗಳಂದು ಅಂತ್ಯವಾಗಲಿದೆ.

ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಇಂದು ಸಂಜೆ 4 ಗಂಟೆಗೆ ಕರೆದಿರುವ ಸುದ್ದಿಗೋಷ್ಠಿ ಮಹತ್ವ ಪಡೆದುಕೊಂಡಿದೆ. ಚುನಾವಣೆಯ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ.

ECI Casual Images
ತಮಿಳುನಾಡು ವಿಧಾನಸಭೆ ಚುನಾವಣೆ: TVK ಜೊತೆಗೆ ಮೈತ್ರಿಗಾಗಿ ಮಾತುಕತೆ! ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದೇನು?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಈ ರಾಜ್ಯಗಳಲ್ಲಿ ರಾಜಕೀಯ ಚಟುವಟಿಕೆಗಳು ಈಗಾಗಲೇ ಗರಿಗೆದರಿದ್ದು, ವಿವಿಧ ಪಕ್ಷಗಳ ನಾಯಕರು ಹಲವು ಕಾರ್ಯಕ್ರಮ ಆಯೋಜನೆ ಮೂಲಕ ಜನರನ್ನು ಸಂಪರ್ಕಿಸುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ.

X

Advertisement

X
Kannada Prabha
www.kannadaprabha.com