ಜೆಡಿ(ಯು) ತೊರೆದ ಕೆ.ಸಿ. ತ್ಯಾಗಿ; ಮುಂದಿನ ನಡೆ ಬಗ್ಗೆ ಶೀಘ್ರದಲ್ಲೇ ನಿರ್ಧಾರ

ಜೆಡಿ(ಯು) ಪ್ರಧಾನ ಕಾರ್ಯದರ್ಶಿ, ಮುಖ್ಯ ವಕ್ತಾರ ಮತ್ತು ರಾಜಕೀಯ ಸಲಹೆಗಾರ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದ ಕೆಸಿ ತ್ಯಾಗಿ ಅವರು ಈಗ ಜೆಡಿ(ಯು)ಗೆ ಗುಡ್ ಬೈ ಹೇಳಿದ್ದಾರೆ.
KC Tyagi
ಜೆಡಿಯು ನಾಯಕ ಕೆ.ಸಿ. ತ್ಯಾಗಿ
Updated on

ನವದೆಹಲಿ: ಜೆಡಿ(ಯು) ಹಿರಿಯ ನಾಯಕ ಕೆ.ಸಿ. ತ್ಯಾಗಿ ಮಂಗಳವಾರ ಪಕ್ಷವನ್ನು ತೊರೆದಿದ್ದಾರೆ ಮತ್ತು ತಮ್ಮ ಮುಂದಿನ ನಡೆ ಬಗ್ಗೆ ಶೀಘ್ರದಲ್ಲೇ ನಿರ್ಧರಿಸುವುದಾಗಿ ಹೇಳಿದ್ದಾರೆ.

ಜೆಡಿ(ಯು) ಪ್ರಧಾನ ಕಾರ್ಯದರ್ಶಿ, ಮುಖ್ಯ ವಕ್ತಾರ ಮತ್ತು ರಾಜಕೀಯ ಸಲಹೆಗಾರ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದ ಕೆಸಿ ತ್ಯಾಗಿ ಅವರು ಈಗ ಜೆಡಿ(ಯು)ಗೆ ಗುಡ್ ಬೈ ಹೇಳಿದ್ದಾರೆ.

"ಹೌದು, ನಾನು ಪಕ್ಷವನ್ನು ತೊರೆದಿದ್ದೇನೆ" ಎಂದು ತ್ಯಾಗಿ ಪಿಟಿಐಗೆ ತಿಳಿಸಿದ್ದಾರೆ.

KC Tyagi
ನಿತೀಶ್ ಕುಮಾರ್​ಗೆ ಭಾರತ ರತ್ನ ನೀಡಬೇಕೆಂದು ಕೆ.ಸಿ ತ್ಯಾಗಿ ಮನವಿ; ಅಂತರ ಕಾಯ್ದುಕೊಂಡ ಜೆಡಿಯು

"ಪಕ್ಷದ ಸದಸ್ಯತ್ವ ಅಭಿಯಾನ ಕೊನೆಗೊಂಡಿದೆ. ಈ ಬಾರಿ ನಾನು ಪಕ್ಷದ ಸದಸ್ಯತ್ವವನ್ನು ನವೀಕರಿಸಿಲ್ಲ" ಎಂದು ಮಾಜಿ ರಾಜ್ಯಸಭಾ ಸದಸ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆದಾಗ್ಯೂ, ಸಮಾಜದ ವಂಚಿತ ವರ್ಗಗಳು ಸೇರಿದಂತೆ ದೀನದಲಿತರು, ರೈತರು ಮತ್ತು ಕೃಷಿಕರ ಹಿತಾಸಕ್ತಿಗಳಿಗೆ ಸಂಬಂಧಿಸಿದ "ದೊಡ್ಡ ಮತ್ತು ವಿಶಾಲವಾದ ಸೈದ್ಧಾಂತಿಕ ಅಂಶಗಳಿಗೆ" ತಮ್ಮ ಬದ್ಧತೆ " ಅಷ್ಟೇ ದೃಢವಾಗಿದೆ" ಎಂದು ಅವರು ಪ್ರತಿಪಾದಿಸಿದ್ದಾರೆ.

"ಅರ್ಧ ಶತಮಾನಕ್ಕೂ ಹೆಚ್ಚು ಕಾಲ ನನ್ನ ಒಡನಾಡಿಯಾಗಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬಗ್ಗೆ ನನಗೆ ವೈಯಕ್ತಿಕ ಗೌರವ ಇದೆ. ಅದು ಬದಲಾಗಿಲ್ಲ" ಎಂದು ತ್ಯಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com