ತಮಿಳು ನಾಡು: ಸೇಲಂನಲ್ಲಿ TNSTC ಬಸ್ ಟೆಂಪೋ, ದ್ವಿಚಕ್ರ ವಾಹನಕ್ಕೆ ಡಿಕ್ಕಿ; 8 ಮಂದಿ ದುರ್ಮರಣ-Video

ಸರಕು ಆಟೋದಲ್ಲಿ ಒಂದೇ ಕುಟುಂಬದ 10ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಅವರು ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದರು ಎನ್ನಲಾಗಿದೆ.
CCTV visuals from the area show the bus crashing head-on into a tempo-type goods auto and a two-wheeler that were on the opposite side.
ಸಿಸಿಟಿವಿ ದೃಶ್ಯಗಳಲ್ಲಿ, ಬಸ್ ಎದುರಿನಿಂದ ಬರುತ್ತಿದ್ದ ಟೆಂಪೋ ಮಾದರಿಯ ಸರಕು ಆಟೋ ಹಾಗೂ ದ್ವಿಚಕ್ರ ವಾಹನಕ್ಕೆ ನೇರವಾಗಿ ಡಿಕ್ಕಿ ಹೊಡೆಯುತ್ತಿರುವುದು ಕಾಣುತ್ತದೆ
Updated on

ಸೇಲಂ: ತಮಿಳು ನಾಡಿನ ಸೇಲಂ ರಾಷ್ಟ್ರೀಯ ಹೆದ್ದಾರಿಯ ಉತ್ಥಮಸೋಲಾಪುರಂ ಸಮೀಪದ ಅರಿಯನೂರು ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡು ರಾಜ್ಯ ಸಾರಿಗೆ ನಿಗಮ (TNSTC) ಬಸ್ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದೆ.

ಕೊಯಂಬತ್ತೂರಿನಿಂದ ಸೇಲಂ ಕಡೆಗೆ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರೊಂದಿಗೆ ಸಾಗುತ್ತಿದ್ದ ಈ ಬಸ್ ತನ್ನ ಲೇನ್‌ನಿಂದ ತಪ್ಪಿ, ಮಧ್ಯದ ಡಿವೈಡರ್ ದಾಟಿ ಎದುರು ದಾರಿಯಲ್ಲಿ ಪ್ರವೇಶಿಸಿದೆ. ಸಿಸಿಟಿವಿ ದೃಶ್ಯಗಳಲ್ಲಿ ಬಸ್ ಎದುರು ದಾರಿಯಲ್ಲಿ ಬರುತ್ತಿದ್ದ ಟೆಂಪೋ ಮಾದರಿಯ ಸರಕು ಆಟೋ ಮತ್ತು ದ್ವಿಚಕ್ರ ವಾಹನಕ್ಕೆ ನೇರವಾಗಿ ಡಿಕ್ಕಿ ಹೊಡೆಯುತ್ತಿರುವುದು ಕಾಣಿಸುತ್ತದೆ.

ಸರಕು ಆಟೋದಲ್ಲಿ ಒಂದೇ ಕುಟುಂಬದ 10ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಅವರು ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದರು ಎನ್ನಲಾಗಿದೆ.

CCTV visuals from the area show the bus crashing head-on into a tempo-type goods auto and a two-wheeler that were on the opposite side.
ರೀಲ್ಸ್ ಗೀಳು: 120 kmph ವೇಗ; ಕಾರು ಅಪಘಾತ, ಸ್ಥಳದಲ್ಲೇ ಇಬ್ಬರ ಸಾವು!

ಮೃತರನ್ನು ಸೆಲ್ವರಾಜ್, ಮುರುಗನ್, ಅಮುದಾ, ಮನಿಕಂದನ್, ಇರುಸಾಯಿ, ಸತ್ಯ (ಮನಿಕಂದನ್ ಅವರ ಪತ್ನಿ), ಐದು ವರ್ಷದ ನಿಧಿಷಾ ಮತ್ತು 11 ತಿಂಗಳ ಜೀವುಕಾ ಎಂದು ಗುರುತಿಸಲಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಹಲವರಿಗೆ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ವೇಗ ಮೀರಿದ ಚಾಲನೆ ಅಥವಾ ಯಾಂತ್ರಿಕ ದೋಷದಿಂದ ಚಾಲಕ ನಿಯಂತ್ರಣ ಕಳೆದುಕೊಂಡು ಅಪಘಾತವಾಯಿತೇ ಎಂಬುದರ ಬಗ್ಗೆ ಪ್ರಾಥಮಿಕ ವಿಚಾರಣೆ ನಡೆಯುತ್ತಿದೆ.

ಈ ಘಟನೆಗೆ ಪ್ರತಿಕ್ರಿಯೆ ನೀಡಿದ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಬಸ್‌ಗಳಲ್ಲಿ ನಿರಂತರವಾಗಿ ಸಂಭವಿಸುತ್ತಿರುವ ಅಪಘಾತಗಳು ನಿರ್ವಹಣಾ ಕೊರತೆಯನ್ನು ಸೂಚಿಸುತ್ತವೆ ಎಂದು ಆರೋಪಿಸಿದರು.

ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿ, ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com